AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್’ ನೋಡಿ ‘ಡ್ರ್ಯಾಗನ್’ ಕತೆ ಬದಲಾಯಿಸಿದರೇ ಪ್ರಶಾಂತ್ ನೀಲ್?

Dhurandhar and Dragon: ಮಾದಕ ದ್ರವ್ಯದ ಸಾಮ್ರಾಜ್ಯದ ಮೇಲೆ ಹಿಡಿತ ಸಾಧಿಸಲು ಗ್ಯಾಂಗುಗಳು ಪರಸ್ಪರ ಬಡಿದಾಡುವ ಕತೆಯನ್ನು ‘ಡ್ರ್ಯಾಗನ್’ ಸಿನಿಮಾ ಒಳಗೊಂಡಿದೆ. ಆದರೆ ‘ಡ್ರ್ಯಾಗನ್’ ಸಿನಿಮಾಕ್ಕೂ ‘ಧುರಂಧರ್’ಗೂ ಸಾಮ್ಯತೆ ಇದೆ ಎಂಬುದು ಆ ನಂತರ ಹೊರಬಂದ ಪ್ರಶಾಂತ್ ನೀಲ್ ಸಂದರ್ಶನದಿಂದ ತಿಳಿದು ಬಂರುತ್ತಿದೆ. ‘ಧುರಂಧರ್’ ಸಿನಿಮಾದ ಯಶಸ್ಸಿನ ಬಳಿಕ ‘ಡ್ರ್ಯಾಗನ್’ ಕತೆಯನ್ನು ನೀಲ್ ಬದಲಿಸಿದ್ದಾರೆಯೇ ಎಂಬ ಅನುಮಾನವನ್ನು ಕೆಲ ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

‘ಧುರಂಧರ್’ ನೋಡಿ ‘ಡ್ರ್ಯಾಗನ್’ ಕತೆ ಬದಲಾಯಿಸಿದರೇ ಪ್ರಶಾಂತ್ ನೀಲ್?
Dhurandhar Dragon
ಮಂಜುನಾಥ ಸಿ.
|

Updated on: May 22, 2026 | 5:32 PM

Share

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ ಮೇ 20ಕ್ಕೆ ಬಿಡುಗಡೆ ಆಗಿದ್ದು, ಸಖತ್ ವೈರಲ್ ಆಗುತ್ತಿದೆ. ಮಾದಕ ದ್ರವ್ಯದ ಸಾಮ್ರಾಜ್ಯದ ಮೇಲೆ ಹಿಡಿತ ಸಾಧಿಸಲು ಗ್ಯಾಂಗುಗಳು ಪರಸ್ಪರ ಬಡಿದಾಡುವ ಕತೆಯನ್ನು ಸಿನಿಮಾ ಒಳಗೊಂಡಿರುವುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಆದರೆ ‘ಡ್ರ್ಯಾಗನ್’ ಸಿನಿಮಾಕ್ಕೂ ‘ಧುರಂಧರ್’ಗೂ ಸಾಮ್ಯತೆ ಇದೆ ಎಂಬುದು ಆ ನಂತರ ಹೊರಬಂದ ಪ್ರಶಾಂತ್ ನೀಲ್ ಸಂದರ್ಶನದಿಂದ ತಿಳಿದು ಬಂರುತ್ತಿದ್ದು, ‘ಧುರಂಧರ್’ ಸಿನಿಮಾದ ಯಶಸ್ಸಿನ ಬಳಿಕ ‘ಡ್ರ್ಯಾಗನ್’ ಕತೆಯನ್ನು ನೀಲ್ ಬದಲಿಸಿದ್ದಾರೆಯೇ ಎಂಬ ಅನುಮಾನವನ್ನು ಕೆಲ ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಪ್ರಶಾಂತ್ ನೀಲ್, ‘ಡ್ರ್ಯಾಗನ್’ ಸಿನಿಮಾವನ್ನು ಒಂದು ವಾಕ್ಯದಲ್ಲಿ ವಿವರಿಸಿ ಎಂದಾಗ, ‘ನಾವು ಈ ವರೆಗೆ ಎಂದೂ ಬರದಂಥಹಾ ಒಂದು ದೇಶಭಕ್ತಿಯ ಸಿನಿಮಾವನ್ನು ನೀಡುತ್ತಿದ್ದೇವೆ’ ಎಂದಿದ್ದಾರೆ. ಆ ಮೂಲಕ ಇದು ಪ್ರಶಾಂತ್ ನೀಲ್ ಅವರ ಹಿಂದಿನ ಸಿನಿಮಾಗಳಂತೆ ಕೇವಲ ಗ್ಯಾಂಗ್ ವಾರ್, ನಾಯಕನ ವಿಜೃಂಭಣೆ, ಅಬ್ಬರದ ಸಂಗೀತದ ಸಿನಿಮಾ ಮಾತ್ರವಲ್ಲ, ಇದು ದೇಶಭಕ್ತಿಯನ್ನು ಜಾಗೃತಗೊಳಿಸುವ ಸಿನಿಮಾ ಎಂಬ ಅಂಶವನ್ನು ಖುದ್ದು ನೀಲ್ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ:ಥಿಯೇಟರ್​​​ನಲ್ಲಿ 65ದಿನ ಪೂರೈಸಿದ ‘ಧುರಂಧರ್ 2’; ಒಟ್ಟೂ ಗಳಿಕೆ ಎಷ್ಟು?

‘ಧುರಂಧರ್’ ಸಹ ದೇಶಭಕ್ತಿಯನ್ನು ಜಾಗೃತಪಡಿಸುವ ಸಿನಿಮಾ ಆಗಿದ್ದು, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದೆ. ಅದು ಮಾತ್ರವೇ ಅಲ್ಲದೆ ರಾಷ್ಟ್ರೀಯತೆಯ ವಿಷಯವಾಗಿ ಇತ್ತೀಚೆಗೆ ಹಲವು ಸಿನಿಮಾಗಳು ಬಂದಿದ್ದು, ಬಹುತೇಕ ಸಿನಿಮಾಗಳು ದೊಡ್ಡ ಹಿಟ್ ಆಗಿವೆ. ಮಾತ್ರವಲ್ಲದೆ ದೇಶಪ್ರೇಮ, ರಾಷ್ಟ್ರೀಯತೆಯನ್ನು ಆಧಾರವಾಗಿಟ್ಟುಕೊಂಡು ಹಲವು ಸಿನಿಮಾಗಳು ನಿರ್ಮಾಣ ಹಂತದಲ್ಲಿವೆ. ಈಗ ರಾಷ್ಟ್ರೀಯತೆಯ ಟ್ರೆಂಡ್ ಜೋರಾಗಿರುವ ಕಾರಣ, ‘ಡ್ರ್ಯಾಗನ್’ ಅಂಥಹಾ ಗ್ಯಾಂಗ್​​ಸ್ಟರ್ ಸಿನಿಮಾನಲ್ಲಿ ದೇಶಭಕ್ತಿಯ ಅಂಶಗಳನ್ನು ನೀಲ್ ಬೆರೆಸಿದ್ದಾರೆ ಎನ್ನಲಾಗುತ್ತಿದೆ.

ನೀಲ್ ಅವರು ತಮ್ಮ ಸಿನಿಮಾಗಳಲ್ಲಿ ಸೆಂಟಿಮೆಂಟ್ ಅಂಶಗಳನ್ನು ಇರಿಸಿಯೇ ಇರಿಸುತ್ತಾರೆ. ‘ಉಗ್ರಂ’ನಲ್ಲಿ ತಾಯಿ ಮತ್ತು ಗರ್ಲ್​ಫ್ರೆಂಡ್ ಸೆಂಟಿಮೆಂಟ್, ‘ಕೆಜಿಎಫ್’ನಲ್ಲಿ ತಾಯಿ, ‘ಸಲಾರ್’ನಲ್ಲೂ ತಾಯಿ. ಈಗ ‘ಡ್ರ್ಯಾಗನ್’ ಸಿನಿಮಾನಲ್ಲಿ ದೇಶಪ್ರೇಮದ ಸೆಂಟಿಮೆಂಟ್ ಅನ್ನು ಎಳೆದು ತಂದಿರುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ‘ಡ್ರ್ಯಾಗನ್’ ಸಿನಿಮಾ ಮುಂದಿನ ವರ್ಷ ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಆದರೆ ಅಧಿಕೃತ ಬಿಡುಗಡೆ ದಿನಾಂಕ ಇನ್ನೂ ಪ್ರಕಟ ಆಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್