ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಮತ್ತೆ ಮುಂದಕ್ಕೆ?
Ram Charan movie: ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾ ಬಹುತೇಕ ಮುಗಿಸಿದ್ದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 30 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ನಿರ್ಮಾಪಕರೊಬ್ಬರು ಸಿನಿಮಾದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿರುವ ಬಗ್ಗೆ ಸುಳಿವು ನೀಡಿದ್ದು, ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

‘ಆರ್ಆರ್ಆರ್’ ಸಿನಿಮಾದ ಬಳಿಕ ರಾಮ್ ಚರಣ್ (Ram Charan) ನಟನೆಯ ಸತತ ಎರಡು ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ಫ್ಲಾಪ್ ಆಗಿವೆ. ‘ಗೇಮ್ ಚೇಂಜರ್’ ಮತ್ತು ‘ಆಚಾರ್ಯ’ ಎರಡೂ ಸಿನಿಮಾಗಳು ಹೀನಾಯ ಸೋಲು ಕಂಡಿವೆ. ಇದೀಗ ರಾಮ್ ಚರಣ್ ಅವರು ಗೆಲುವಿನ ಹುಡುಕಾಟದಲ್ಲಿದ್ದಾರೆ. ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾ ಬಹುತೇಕ ಮುಗಿಸಿದ್ದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 30 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ನಿರ್ಮಾಪಕರೊಬ್ಬರು ಸಿನಿಮಾದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿರುವ ಬಗ್ಗೆ ಸುಳಿವು ನೀಡಿದ್ದು, ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
ಅಸಲಿಗೆ ‘ಪೆದ್ದಿ’ ಸಿನಿಮಾ ಮಾರ್ಚ್ 27ರಂದೇ ಬಿಡುಗಡೆ ಆಗಬೇಕಿತ್ತು. ಆದರೆ ರಾಮ್ ಚರಣ್ ಅವರ ಚಿಕ್ಕಪ್ಪ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಮಾರ್ಚ್ 26ಕ್ಕೆ ಬಿಡುಗಡೆ ಮಾಡುವುದಾಗಿ ಘೋಷಣೆ ಆಗಿತ್ತು. ಹಾಗಾಗಿ ಸಿನಿಮಾದ ಬಿಡುಗಡೆಯನ್ನು ಏಪ್ರಿಲ್ 30ಕ್ಕೆ ಮುಂದೂಡಲಾಯ್ತು. ಆದರೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆ ಆಯ್ತು. ಆದರೆ ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಈಗ ಏಪ್ರಿಲ್ 30ರ ಬದಲಾಗಿ ಜೂನ್ನಲ್ಲಿ ಆಗಲಿದೆ ಎನ್ನಲಾಗುತ್ತಿದೆ.
ಈ ಸುದ್ದಿ ಹರಡಲು ಮುಖ್ಯ ಕಾರಣ ನಿರ್ಮಾಪಕ ಎಸ್ಕೆನ್. ಇತ್ತೀಚೆಗೆ ಅವರು ‘ಚೆನ್ನೈ ಲವ್ಸ್ಟೋರಿ’ ಹೆಸರಿನ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ತಮ್ಮ ‘ಚೆನ್ನೈ ಲವ್ಸ್ಟೋರಿ’ ಸಿನಿಮಾ ಬಗ್ಗೆ ಮಾತನಾಡುತ್ತಾ, ನಾವು ಮೊದಲಿಗೆ ಸಿನಿಮಾವನ್ನು ಜೂನ್ 26ಕ್ಕೆ ಬಿಡುಗಡೆ ಮಾಡೋಣ ಎಂದುಕೊಂಡಿದ್ದೆವು, ಆದರೆ ಆಗ ‘ಪೆದ್ದಿ’ ಸಿನಿಮಾ ಬಿಡುಗಡೆ ಆಗುತ್ತದೆ ಎಂದು ಕೆಲವರು ಮಾಹಿತಿ ನೀಡಿದರು. ಹೀಗಾಗಿ ಸಿನಿಮಾದ ಬಿಡುಗಡೆಯನ್ನು ನಾವು ಬದಲಾಯಿಸಿಕೊಂಡೆವು’ ಎಂದಿದ್ದರು.
ಇದನ್ನೂ ಓದಿ;ಚಿರಂಜೀವಿ, ರಾಮ್ ಚರಣ್ ಮನೆಯಲ್ಲಿ ಹೀಗಿತ್ತು ರಾಮ ನವಮಿ
ಎಸ್ಕೆಎನ್ ಅವರ ಈ ಮಾತುಗಳು ರಾಮ್ ಚರಣ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ‘ಪೆದ್ದಿ’ ಸಿನಿಮಾದ ಬಿಡುಗಡೆ ಜೂನ್ ತಿಂಗಳಲ್ಲಿ ಆಗಲಿದೆಯೇ ಎಂಬ ಅನುಮಾನ ಮೂಡಿಸಿದೆ. ಇತ್ತೀಚೆಗಷ್ಟೆ ‘ಪೆದ್ದಿ’ ಸಿನಿಮಾದ ಚಿತ್ರೀಕರಣದ ವೇಳೆ ರಾಮ್ ಚರಣ್ ಗೆ ಗಾಯ ಸಹ ಆಗಿದ್ದು, ಸಣ್ಣ ಆಪರೇಷನ್ ಸಹ ಆಗಿದೆ. ಇದರಿಂದ ಚಿತ್ರೀಕರಣ ತಡವಾಗಿ ಸಿನಿಮಾದ ಬಿಡುಗಡೆ ಏಪ್ರಿಲ್ನಿಂದ ಜೂನ್ಗೆ ವರ್ಗಾವಣೆ ಆಗಿರಬಹುದು ಎಂಬ ಅನುಮಾನ ಮೂಡಿದೆ. ಚಿತ್ರತಂಡದವರು ಸಹ ಯಾವುದೇ ಸ್ಪಷ್ಟನೆ, ಹೇಳಿಕೆ ನೀಡದೇ ಇರುವುದು ರಿಲೀಸ್ ಮುಂದೂಡಿಕೆ ಅನುಮಾನವನ್ನು ಮತ್ತಷ್ಟು ಹೆಚ್ಚಿಸಿದೆ.
‘ಪೆದ್ದಿ’ ಸಿನಿಮಾ ಗ್ರಾಮೀಣ ಆಕ್ಷನ್ ಕತೆಯನ್ನು ಹೊಂದಿದೆ. ಸಿನಿಮಾದ ನಾಯಕ ರಾಮ್ ಚರಣ್ ಕ್ರಿಕೆಟ್ ಆಟಗಾರ ಮತ್ತು ಕುಸ್ತಿ ಪೈಲ್ವಾನನ ಪಾತ್ರದಲ್ಲಿ ಮಿಂಚಿದ್ದಾರೆ. ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಅವರು ನಾಯಕನ ಗುರುವಿನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ನಾಯಕಿಯಾಗಿ ಜಾನ್ಹವಿ ಕಪೂರ್ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಬುಚ್ಚಿಬಾಬು ಸನಾ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
