ಒಂದೇ ವೇದಿಕೆಯಲ್ಲಿ ಮಾಜಿ ದಂಪತಿ ಸಮಂತಾ-ನಾಗ ಚೈತನ್ಯ? ಆದರೆ ಒಂದು ಟ್ವಿಸ್ಟ್​

ಒಟಿಟಿ ಸಂಸ್ಥೆಯೊಂದರ ಜೊತೆ ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಕೈ ಜೋಡಿಸಿದ್ದಾರೆ. ಇಬ್ಬರು ಕೂಡ ಚಿತ್ರರಂಗದಲ್ಲಿ ಇರುವುದರಿಂದ ಮುಖಾಮುಖಿ ಆಗುವಂತಹ ಸಂದರ್ಭ ಎದುರಾಗುವುದು ಸರ್ವೇ ಸಾಮಾನ್ಯ. ಮುಂಬೈನಲ್ಲಿ ಇಂದು (ಮಾರ್ಚ್​ 19) ನಡೆದ ಕಾರ್ಯಕ್ರಮದಲ್ಲಿ ಸಮಂತಾ, ನಾಗ ಚೈತನ್ಯ, ವರುಣ್​ ಧವನ್​ ಮುಂತಾದವರು ವೇದಿಕೆ ಏರಿಕೆ ಏರಿದ್ದಾರೆ.

ಒಂದೇ ವೇದಿಕೆಯಲ್ಲಿ ಮಾಜಿ ದಂಪತಿ ಸಮಂತಾ-ನಾಗ ಚೈತನ್ಯ? ಆದರೆ ಒಂದು ಟ್ವಿಸ್ಟ್​
ನಾಗ ಚೈತನ್ಯ, ಸಮಂತಾ
Follow us
|

Updated on: Mar 19, 2024 | 6:52 PM

ಟಾಲಿವುಡ್​ನ ಕ್ಯೂಟ್​ ಕಪಲ್​ ಆಗಿದ್ದ ಸಮಂತಾ ರುತ್​ ಪ್ರಭು (Samantha Ruth Prabhu) ಮತ್ತು ನಾಗ ಚೈತನ್ಯ ಅವರು ವಿಚ್ಛೇದನ ಪಡೆದು ಎರಡೂವರೆ ವರ್ಷ ಕಳೆದಿದೆ. ಅವರಿಬ್ಬರು ದೂರಾಗಿದ್ದಕ್ಕೆ ಇಂದಿಗೂ ಅಭಿಮಾನಿಗಳಿಗೆ ಬೇಸರ ಇದೆ. ಇಬ್ಬರೂ ಒಂದೇ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಒಂದಲ್ಲ ಒಂದು ಸಂದರ್ಭದಲ್ಲಿ ಅವರು ಮುಖಾಮುಖಿ ಆಗಲೇಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಇಂದು (ಮಾರ್ಚ್​ 19) ಮುಂಬೈನಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಸಮಂತಾ ಮತ್ತು ನಾಗ ಚೈತನ್ಯ (Naga Chaitanya) ಅವರು ಪಾಲ್ಗೊಂಡಿದ್ದಾರೆ. ಬೇರೆ ಬೇರೆ ಸಂದರ್ಭದಲ್ಲಿ ಇಬ್ಬರೂ ವೇದಿಕೆ ಏರಿದ್ದಾರೆ.

‘ಅಮೇಜಾನ್​ ಪ್ರೈಂ ವಿಡಿಯೋ’ ಜೊತೆ ಸಮಂತಾ ರುತ್​ ಪ್ರಭು ಹಾಗೂ ನಾಗ ಚೈತನ್ಯ ಅವರು ಕೈ ಜೋಡಿಸಿದ್ದಾರೆ. ನಾಗ ಚೈತನ್ಯ ನಟಿಸಿದ ‘ಧೂತ’ ವೆಬ್​ ಸಿರೀಸ್​ ಅಮೇಜಾನ್​ ಪ್ರೈಂ ವಿಡಿಯೋದಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಗಿದೆ. ಹಾಗೆಯೇ ಸಮಂತಾ ನಟನೆಯ ‘ದಿ ಫ್ಯಾಮಿಲಿ ಮ್ಯಾನ್​ 2’ ಕೂಡ ಇದೇ ಒಟಿಟಿಯಲ್ಲಿ ಯಶಸ್ವಿ ಶೋ ಎನಿಸಿಕೊಂಡಿದೆ. ಈಗ ಸಮಂತಾ ನಟಿಸಿರುವ ‘ಸಿಟಾಡೆಲ್​ ಹನಿ ಬನಿ’ ಕೂಡ ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕವೇ ಪ್ರಸಾರಕ್ಕೆ ಸಜ್ಜಾಗುತ್ತಿದೆ. ಈ ಒಟಿಟಿ ಸಂಸ್ಥೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಮಂತಾ, ನಾಗ ಚೈತನ್ಯ, ವರುಣ್​ ಧವನ್​ ಮುಂತಾದ ಕಲಾವಿದರು ಭಾಗಿಯಾಗಿದ್ದಾರೆ.

ಇದನ್ನೂ ಓದಿ: ‘ಆ ಡ್ಯಾನ್ಸ್​ ಮಾಡುವಾಗ ಕಂಫರ್ಟ್​ ಇರಲಿಲ್ಲ’: ಈಗ ಬಾಯ್ಬಿಟ್ಟ ಸಮಂತಾ

‘ಧೂತ’ ವೆಬ್​ ಸಿರೀಸ್​ ಸಕ್ಸಸ್​ ಆಗಿದ್ದಕ್ಕೆ ನಾಗ ಚೈತನ್ಯ ಅವರು ಈ ಕಾರ್ಯಕ್ರಮದ ವೇದಿಕೆಗೆ ಬಂದು ಮಾತನಾಡಿದ್ದಾರೆ. ‘ಸಾಗರ್​ ಎಂಬ ಆ ಪಾತ್ರ ತುಂಬ ಚೆನ್ನಾಗಿ ಇದ್ದಿದ್ದರಿಂದ ಅದನ್ನು ನಾನು ಒಪ್ಪಿಕೊಂಡೆ’ ಎಂದು ಹೇಳಿರುವ ಅವರು, ವೆಬ್ ಸಿರೀಸ್​ ಯಶಸ್ವಿ ಆಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು, ಸಮಂತಾ ಅವರು ‘ಸಿಟಾಡೆಲ್​ ಹನಿ ಬನಿ’ ವೆಬ್​ ಸಿರೀಸ್​ ಬಗ್ಗೆ ಮಾತನಾಡಲು ವೇದಿಕೆ ಏರಿದ್ದಾರೆ. ಟ್ವಿಸ್ಟ್​ ಏನೆಂದರೆ, ಅವರಿಬ್ಬರೂ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಬೇರೆ ಬೇರೆ ಸಂದರ್ಭದಲ್ಲಿಯೇ ಹೊರತು ಒಟ್ಟಿಗೆ ಅಲ್ಲ.

ನಾಗ ಚೈತನ್ಯ, ಸಮಂತಾ ರುತ್​ ಪ್ರಭು ವೈರಲ್​ ವಿಡಿಯೋ:

‘ಅಮೇಜಾನ್​ ಪ್ರೈಂ ವಿಡಿಯೋ’ ನಡೆಸಿದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರ ಫೋಟೋಗಳನ್ನು ಅಕ್ಕ-ಪಕ್ಕ ಇಟ್ಟು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಮಾಡಲಾಗಿದೆ. ಇದನ್ನು ನೋಡಿದ ಅಭಿಮಾನಿಗಳಿಗೆ ಖುಷಿ ಆಗಿದೆ. ಇದೇ ರೀತಿ ಅವರಿಬ್ಬರು ಮತ್ತೊಮ್ಮೆ ಒಂದಾಗಲಿ ಎಂದು ಫ್ಯಾನ್ಸ್​ ಅಪೇಕ್ಷಿಸುತ್ತಿದ್ದಾರೆ. ಆದರೆ ಅದು ಸಾಧ್ಯವಿಲ್ಲ. ಯಾಕೆಂದರೆ, ಸಮಂತಾ ಮತ್ತು ನಾಗ ಚೈತನ್ಯ ಅವರು ಈಗಾಗಲೇ ಬೇರೆ ಬೇರೆ ದಾರಿಯಲ್ಲಿ ಮುಂದೆ ಸಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್