AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವ್​ ಪಾರ್ಟಿ ಸ್ಥಳದಲ್ಲೇ ವಿಡಿಯೋ ಮಾಡಿ ‘ಹೈದರಾಬಾದ್​ನಲ್ಲಿ ಇದೀನಿ’ ಅಂತ ಸುಳ್ಳು ಹೇಳಿದ ನಟಿ ಹೇಮಾ

ಬೆಂಗಳೂರಿನ ರೇವ್​ ಪಾರ್ಟಿಗೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ನಟಿ ಹೇಮಾ ಅವರು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದರು. ಆದರೆ ಅವರು ಸುಳ್ಳು ಹೇಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ರೇವ್​ ಪಾರ್ಟಿ ನಡೆದ ಫಾರ್ಮ್​ ಹೌಸ್​ನ ಆವರಣದಿಂದಲೇ ಅವರು ಈ ವಿಡಿಯೋ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಆ ಬಗ್ಗೆ ಇಲ್ಲಿದೆ ವಿವರ..

ರೇವ್​ ಪಾರ್ಟಿ ಸ್ಥಳದಲ್ಲೇ ವಿಡಿಯೋ ಮಾಡಿ ‘ಹೈದರಾಬಾದ್​ನಲ್ಲಿ ಇದೀನಿ’ ಅಂತ ಸುಳ್ಳು ಹೇಳಿದ ನಟಿ ಹೇಮಾ
Hema
Follow us
ರಾಚಪ್ಪಾಜಿ ನಾಯ್ಕ್
| Updated By: ಮದನ್​ ಕುಮಾರ್​

Updated on: May 20, 2024 | 3:27 PM

ತೆಲುಗು ನಟಿ ಹೇಮಾ (Telugu Actress Hema) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯಲ್ಲಿ ನಡೆದ ರೇವ್​ ಪಾರ್ಟಿಯಲ್ಲಿ ಅವರು ಭಾಗಿ ಆಗಿರುವ ಸುದ್ದಿ ಹೊರಬಿದ್ದಿದೆ. ಆದರೆ ತಾವು ಈ ಪಾರ್ಟಿಯಲ್ಲಿ ಇರಲಿಲ್ಲ ಎಂದು ವಿಡಿಯೋ ಮೂಲಕ ಹೇಮಾ ಅವರು ಸ್ಪಷ್ಟಪಡಿಸಿದ್ದರು. ಅದರ ಬೆನ್ನಲ್ಲೇ ಅಸಲಿ ವಿಷಯ ಗೊತ್ತಾಗಿದೆ. ರೇವ್​ ಪಾರ್ಟಿ (Rave Party) ನಡೆದ ಬೆಂಗಳೂರಿನ ರೆಸಾರ್ಟ್​ನಿಂದಲೇ ವಿಡಿಯೋ ಮಾಡಿ ‘ನಾನು ಹೈದರಾಬಾದ್​​ನಲ್ಲಿ ಇದ್ದೀನಿ’ ಎಂದು ಹೇಮಾ ಸುಳ್ಳು ಹೇಳಿದ್ದಾರೆ.

ಬೆಂಗಳೂರಿನ ಜಿ.ಆರ್. ಫಾರ್ಮ್​​ಹೌಸ್​ ರೇವ್​​ ಪಾರ್ಟಿ ನಡೆಯುತ್ತಿದೆ ಎಂಬ ಅನುಮಾನದ ಮೇರೆಗೆ ಮೇ 20ರ ಮುಂಜಾನೆ ಸಿಸಿಬಿ ಪೊಲೀಸರು ದಾಳಿ ಮಾಡಿದರು. ಈ ವೇಳೆ ಅನೇಕರು ಸಿಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಪಾರ್ಟಿಯಲ್ಲಿ ನಟಿ ಹೇಮಾ ಕೂಡ ಇದ್ದರು ಎನ್ನಲಾಗಿದೆ. ಬಳಿಕ ಅವರು ಶೌಚಾಲಯಕ್ಕೆ ಹೋಗುವುದಾಗಿ ಹೇಳಿ, ಪಾರ್ಟಿ ನಡೆದ ಫಾರ್ಮ್​ಹೌಸ್​ನ ಆವರಣದಲ್ಲೇ ಸ್ನೇಹಿತನನ್ನು ಕರೆಸಿಕೊಂಡು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ತೆಲುಗು ನಟಿಯರು ಭಾಗಿಯಾಗಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ; ಡ್ರಗ್ಸ್, ಕೊಕೇನ್ ಪತ್ತೆ

‘ನಾನು ಎಲ್ಲಿಗೂ ಹೋಗಿಲ್ಲ. ಹೈದರಾಬಾದ್​ನಲ್ಲಿ ಒಂದು ಫಾರ್ಮ್​ಹೌಸ್​ನಲ್ಲಿ ಇದ್ದೇನೆ. ನನ್ನ ಬಗ್ಗೆ ಕೇಳಿಬಂದಿರುವ ಸುದ್ದಿ ಫೇಕ್​. ಅದನ್ನು ನಂಬಬೇಡಿ’ ಎಂದು ಹೇಮಾ ವಿಡಿಯೋ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್​ ಆಗಿದೆ. ಆದರೆ ಅವರು ಈಗಲೂ ಜಿ.ಆರ್. ಫಾರ್ಮ್​​ಹೌಸ್​ನಲ್ಲೇ ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅವರು ವಿಡಿಯೋ ಮಾಡಿದ ಸ್ಥಳವನ್ನು ಸಿಸಿಬಿ ಪೊಲೀಸರು ಪರಿಶೀಲಿಸಿದ್ದಾರೆ.

ಕಾಲಿಗೆ ಬಿದ್ದು ಬೇಡಿಕೊಂಡ್ರಾ?

ತೆಲುಗಿನ ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರಗಳನ್ನು ಮಾಡಿ ಹೇಮಾ ಅವರು ಫೇಮಸ್​ ಆಗಿದ್ದಾರೆ. ರೇವ್​ ಪಾರ್ಟಿಯಲ್ಲಿ ಸಿಕ್ಕಿ ಬಿದ್ದಿರುವುದು ಅವರಿಗೆ ಮುಜುಗರ ತಂದಿದೆ. ಹಾಗಾಗಿ ತಮ್ಮ ಹೆಸರು ಬಹಿರಂಗಪಡಿಸದಂತೆ ಅಧಿಕಾರಿಗಳ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ, ಒಂದು ವೇಳೆ ಹೆಸರು ಬಹಿರಂಗಪಡಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಕೆ ಹಾಕಿದ್ದಾರೆ ಹಾಗೂ ಅಧಿಕಾರಿಗಳ ಕಾಲಿಗೆ ಬಿದ್ದು ಬೇಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ