AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dilip Kumar: ಬಾಲಿವುಡ್​ ಖ್ಯಾತ ನಟ ದಿಲೀಪ್​ ಕುಮಾರ್​ ಮತ್ತೆ ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ

ದಿಲೀಪ್​ ಕುಮಾರ್​ ಅವರಿಗೀಗ 98 ವರ್ಷ. ಇಂದು ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಚೇತರಿಕೆ ಕಂಡಿದೆ ಎಂದೂ ಆಸ್ಪತ್ರೆ ಮಾಹಿತಿ ನಿಡಿದೆ. ವಯೋಸಹಜವಾಗಿ ಅವರಲ್ಲಿ ನಿಶ್ಯಕ್ತಿ ಇದೆ.

Dilip Kumar: ಬಾಲಿವುಡ್​ ಖ್ಯಾತ ನಟ ದಿಲೀಪ್​ ಕುಮಾರ್​ ಮತ್ತೆ ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ
ದಿಲೀಪ್​ ಕುಮಾರ್​
TV9 Web
| Edited By: |

Updated on:Jun 30, 2021 | 12:46 PM

Share

ಬಾಲಿವುಡ್ ಖ್ಯಾತ ನಟ ದಿಲೀಪ್​ ಕುಮಾರ್​ ಅನಾರೋಗ್ಯದಿಂದ ಮುಂಬೈನ ಹಿಂದುಜಾ ಆಸ್ಪತ್ರೆಗೆ ನಿನ್ನೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಅವರಿಗೆ ಈಗ ತೀವ್ರ ನಿಗಾ ಘಟಕ (ICU)ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆಯೂ ದಿಲೀಪ್​ ಕುಮಾರ್​ಗೆ ಇದೇ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಡಿಸ್​ಚಾರ್ಜ್​ ಆಗಿ 10 ದಿನಗಳ ನಂತರ ಮತ್ತೊಮ್ಮೆ ಉಸಿರಾಡಲಾಗದೆ ಕಷ್ಟಪಡುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ದಿಲೀಪ್​ ಕುಮಾರ್​ ಅವರಿಗೀಗ 98 ವರ್ಷ. ಇಂದು ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಚೇತರಿಕೆ ಕಂಡಿದೆ ಎಂದೂ ಆಸ್ಪತ್ರೆ ಮಾಹಿತಿ ನಿಡಿದೆ. ವಯೋಸಹಜವಾಗಿ ಅವರಲ್ಲಿ ನಿಶ್ಯಕ್ತಿ ಇದೆ. ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವ ಕಾರಣ ಯಾವುದೇ ರಿಸ್ಕ್​ ತೆಗೆದುಕೊಳ್ಳುವುದು ಬೇಡವೆಂದು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಉಲ್ಲೇಖಿಸಿದೆ. ದಿಲೀಪ್​ ಕುಮಾರ್​ ಜೂನ್​ 6ರಂದು ಸಹ ಇದೇ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಶ್ವಾಸಕೋಶದಲ್ಲಿ ಸಮಸ್ಯೆ ಇರುವುದು ಗೊತ್ತಾಗಿತ್ತು. ಆಗ 5 ದಿನ ಆಸ್ಪತ್ರೆಯಲ್ಲಿ ಇದ್ದು ಚಿಕಿತ್ಸೆ ಪಡೆದಿದ್ದರು.

ದಿಲೀಪ್​ ಕುಮಾರ್ ಬಾಲಿವುಡ್​ನಲ್ಲಿ ಮಿಂಚಿದವರು. ಮೊಘಲ್​ ಎ ಅಜಮ್​, ದೇವ್​ದಾಸ್​, ನಯಾ ದೌರ್​ ಮತ್ತು ರಾಮ್​ ಔರ್​ ಶ್ಯಾಮ್​ನಂತಹ ಅದ್ಭುತ ಸಿನಿಮಾಗಳನ್ನು ಕೊಟ್ಟು ಹೆಸರುಗಳಿಸಿದವರು. ಅಪಾರ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿರುವ ನಟ. ಇವರ ಕೊನೇ ಸಿನಿಮಾ 1998ರಲ್ಲಿ ಬಿಡುಗಡೆಯಾದ ಕ್ವಿಲಾ.

ಇದನ್ನೂ ಓದಿ: ಮತ್ತೆ ಪ್ರಯಾಣಿಕರಿಂದ ಜೀವಕಳೆ ಪಡೆದುಕೊಂಡ ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣ; ಟ್ಯಾಕ್ಸಿ ಚಾಲಕರ ಮೊಗದಲ್ಲಿ ಮಂದಹಾಸ

Dilip Kumar Admitted to Mumbai Hospital after Complaints of breathlessness

Published On - 12:45 pm, Wed, 30 June 21

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ