AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದಿಲೀಪ್​ ಕುಮಾರ್​ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಹರಿದಾಡುತ್ತಿದೆ ಕೆಟ್ಟ ಸುದ್ದಿ; ಪತ್ನಿ ನೀಡಿದ ಸ್ಪಷ್ಟನೆ ಏನು?

Dilip Kumar Death Hoax: ದಿಲೀಪ್​ ಕುಮಾರ್​ ನಿಧನರಾದರು ಎಂಬ ಗಾಳಿ ಸುದ್ದಿ ವಾಟ್ಸ್​ಆ್ಯಪ್​ನಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ರವಾನೆ ಆಗುತ್ತಿದೆ. ಈ ಬಗ್ಗೆ ದಿಲೀಪ್​​ ಪತ್ನಿ ಸಾಯಿರಾ ಬಾನು ಸ್ಪಷ್ಟನೆ ನೀಡಿದ್ದಾರೆ.

ನಟ ದಿಲೀಪ್​ ಕುಮಾರ್​ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಹರಿದಾಡುತ್ತಿದೆ ಕೆಟ್ಟ ಸುದ್ದಿ; ಪತ್ನಿ ನೀಡಿದ ಸ್ಪಷ್ಟನೆ ಏನು?
ದಿಲೀಪ್​ ಕುಮಾರ್​, ಸಾಯಿರಾ ಬಾನು
ಮದನ್​ ಕುಮಾರ್​
|

Updated on: Jun 07, 2021 | 11:43 AM

Share

ಬಾಲಿವುಡ್​ನ ಹಿರಿಯ ನಟ ದಿಲೀಪ್​ ಕುಮಾರ್​ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಭಾನುವಾರ (ಜೂ.6) ಬೆಳಗ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅತ್ತ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಅನೇಕರ ವಾಟ್ಸ್​ಆ್ಯಪ್​ನಲ್ಲಿ ಕೆಟ್ಟ ಸುದ್ದಿ ಹರಿದಾಡುಲು ಆರಂಭಿಸಿತು. ದಿಲೀಪ್​ ಕುಮಾರ್​ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಯಾರೋ ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ. ಈ ಬಗ್ಗೆ ದಿಲೀಪ್​ ಕುಮಾರ್​ ಪತ್ನಿ ಸಾಯಿರಾ ಬಾನು ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಂತೂ ಖ್ಯಾತ ಸೆಲೆಬ್ರಿಟಿಗಳ ಸಾವಿನ ಬಗ್ಗೆ ವದಂತಿ ಹಬ್ಬಿಸಲಾಗುತ್ತಿದೆ. ಕೊವಿಡ್​ ಸಂದರ್ಭವಾದ್ದರಿಂದ ಜನರು ಇಂಥ ಸುದ್ದಿಗಳಿಗೆ ಬಹುಬೇಗ ಕಿವಿಗೊಡುತ್ತಾರೆ. ಇದನ್ನೇ ತಮ್ಮ ಲಾಭಕ್ಕೆ ಬಳಸಿಕೊಳ್ಳುವ ಕೆಲವರು ಇಲ್ಲಸಲ್ಲದ ವದಂತಿ ಸೃಷ್ಟಿಸುತ್ತಿದ್ದಾರೆ. ದಿಲೀಪ್​ ಕುಮಾರ್​ ವಿಚಾರದಲ್ಲಿಯೂ ಹೀಗೆ ಆಗಿದೆ. ದಿಲೀಪ್​ ನಿಧನರಾದರು ಎಂಬ ಗಾಳಿ ಸುದ್ದಿ ವಾಟ್ಸ್​ಆ್ಯಪ್​ನಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ರವಾನೆ ಆಗುತ್ತಿದೆ. ಈ ಬಗ್ಗೆ ದಿಲೀಪ್​ ಕುಮಾರ್​ ಪತ್ನಿ ಸಾಯಿರಾ ಬಾನು ಸ್ಪಷ್ಟನೆ ನೀಡಿದ್ದಾರೆ.

ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಿಲೀಪ್​ ಆರೋಗ್ಯದ ಬಗ್ಗೆ ಸಾಯಿರಾ ಬಾನು ಸೋಶಿಯಲ್​ ಮೀಡಿಯಾ ಮೂಲಕ ಅಪ್​ಡೇಟ್​ ನೀಡಿದ್ದಾರೆ. ‘ವಾಟ್ಸ್​ಆ್ಯಪ್​ನಲ್ಲಿ ಬರುವ ಫಾರ್ವರ್ಡ್​​​ ಮೆಸೇಜ್​ಗಳನ್ನು ನಂಬಬೇಡಿ. ದಿಲೀಪ್​ ಕುಮಾರ್​ ಆರೋಗ್ಯ ಸ್ಥಿರವಾಗಿದೆ. ನಿಮ್ಮೆಲ್ಲರ ಹಾರೈಕೆ ಮತ್ತು ಪ್ರಾರ್ಥನೆಗಳಿಗೆ ಧನ್ಯವಾಗಳು. ವೈದ್ಯರು ಹೇಳುವ ಪ್ರಕಾರ ಇನ್ನು 2 ಅಥವಾ 3 ದಿನಗಳಲ್ಲಿ ಅವರನ್ನು ಮನೆಗೆ ಕರೆದುಕೊಂಡು ಹೋಗುತ್ತೇವೆ’ ಎಂದು ಸಾಯಿರಾ ಬಾನು ಟ್ವೀಟ್​ ಮಾಡಿದ್ದಾರೆ.

ದಿಲೀಪ್​ ಕುಮಾರ್​ ಅವರಿಗೆ ಈಗ 98 ವರ್ಷ ವಯಸ್ಸು. ಹಾಗಾಗಿ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಸದ್ಯ ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಸದ್ಯ ಅವರು ಆಕ್ಸಿಜನ್​ ಸಪೋರ್ಟ್​ನಲ್ಲಿ ಇದ್ದಾರೆ. ಕಳೆದ ತಿಂಗಳು ಕೂಡ ಇದೇ ಆಸ್ಪತ್ರೆಗೆ ದಿಲೀಪ್​ ಕುಮಾರ್​ ದಾಖಲಾಗಿದ್ದರು. ಸಹಜ​ ಆರೋಗ್ಯ ತಪಾಸಣೆಗಾಗಿ ಅವರು ತೆರಳಿದ್ದರು ಎನ್ನಲಾಗಿತ್ತು. ಎರಡು ದಿನಗಳ ಬಳಿಕ ಅವರನ್ನು ಡಿಸ್ಚಾರ್ಜ್​ ಮಾಡಲಾಗಿತ್ತು. ಕಳೆದ ವರ್ಷ ಕೊರೊನಾ ವೈರಸ್​ನಿಂದಾಗಿ ಲಾಕ್​ಡೌನ್​ ಆರಂಭ ಆಗುತ್ತಿದ್ದಂತೆಯೇ ದಿಲೀಪ್​ ಕುಮಾರ್​ ಆರೋಗ್ಯದ ಬಗ್ಗೆ ಕುಟುಂಬದವರು ಹೆಚ್ಚಿನ ಕಾಳಜಿ ವಹಿಸಲು ಆರಂಭಿದ್ದರು.

1944ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದಿಲೀಪ್​ ಕುಮಾರ್​ ಅವರು 5 ದಶಕಗಳ ಕಾಲ ಸಕ್ರಿಯರಾಗಿದ್ದರು. ಕೊಹಿನೂರ್​, ಮುಘಲ್-ಏ-ಆಜಮ್​, ಶಕ್ತಿ, ನಯಾ ದೌರ್​, ರಾಮ್​ ಔರ್​ ಶ್ಯಾಮ್​ ಮುಂತಾದ ಕ್ಲಾಸಿಕ್​ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ.

ಇದನ್ನೂ ಓದಿ:

Kirron Kher: ಅನುಪಮ್​ ಖೇರ್​ ಪತ್ನಿ, ಖ್ಯಾತ ನಟಿ ಕಿರಣ್​ ಖೇರ್​ ನಿಧನದ ವದಂತಿಗೆ ಬ್ರೇಕ್​

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ