AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದಿಲೀಪ್​ ಕುಮಾರ್​ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಹರಿದಾಡುತ್ತಿದೆ ಕೆಟ್ಟ ಸುದ್ದಿ; ಪತ್ನಿ ನೀಡಿದ ಸ್ಪಷ್ಟನೆ ಏನು?

Dilip Kumar Death Hoax: ದಿಲೀಪ್​ ಕುಮಾರ್​ ನಿಧನರಾದರು ಎಂಬ ಗಾಳಿ ಸುದ್ದಿ ವಾಟ್ಸ್​ಆ್ಯಪ್​ನಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ರವಾನೆ ಆಗುತ್ತಿದೆ. ಈ ಬಗ್ಗೆ ದಿಲೀಪ್​​ ಪತ್ನಿ ಸಾಯಿರಾ ಬಾನು ಸ್ಪಷ್ಟನೆ ನೀಡಿದ್ದಾರೆ.

ನಟ ದಿಲೀಪ್​ ಕುಮಾರ್​ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಹರಿದಾಡುತ್ತಿದೆ ಕೆಟ್ಟ ಸುದ್ದಿ; ಪತ್ನಿ ನೀಡಿದ ಸ್ಪಷ್ಟನೆ ಏನು?
ದಿಲೀಪ್​ ಕುಮಾರ್​, ಸಾಯಿರಾ ಬಾನು
ಮದನ್​ ಕುಮಾರ್​
|

Updated on: Jun 07, 2021 | 11:43 AM

Share

ಬಾಲಿವುಡ್​ನ ಹಿರಿಯ ನಟ ದಿಲೀಪ್​ ಕುಮಾರ್​ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಭಾನುವಾರ (ಜೂ.6) ಬೆಳಗ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅತ್ತ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಅನೇಕರ ವಾಟ್ಸ್​ಆ್ಯಪ್​ನಲ್ಲಿ ಕೆಟ್ಟ ಸುದ್ದಿ ಹರಿದಾಡುಲು ಆರಂಭಿಸಿತು. ದಿಲೀಪ್​ ಕುಮಾರ್​ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಯಾರೋ ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ. ಈ ಬಗ್ಗೆ ದಿಲೀಪ್​ ಕುಮಾರ್​ ಪತ್ನಿ ಸಾಯಿರಾ ಬಾನು ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಂತೂ ಖ್ಯಾತ ಸೆಲೆಬ್ರಿಟಿಗಳ ಸಾವಿನ ಬಗ್ಗೆ ವದಂತಿ ಹಬ್ಬಿಸಲಾಗುತ್ತಿದೆ. ಕೊವಿಡ್​ ಸಂದರ್ಭವಾದ್ದರಿಂದ ಜನರು ಇಂಥ ಸುದ್ದಿಗಳಿಗೆ ಬಹುಬೇಗ ಕಿವಿಗೊಡುತ್ತಾರೆ. ಇದನ್ನೇ ತಮ್ಮ ಲಾಭಕ್ಕೆ ಬಳಸಿಕೊಳ್ಳುವ ಕೆಲವರು ಇಲ್ಲಸಲ್ಲದ ವದಂತಿ ಸೃಷ್ಟಿಸುತ್ತಿದ್ದಾರೆ. ದಿಲೀಪ್​ ಕುಮಾರ್​ ವಿಚಾರದಲ್ಲಿಯೂ ಹೀಗೆ ಆಗಿದೆ. ದಿಲೀಪ್​ ನಿಧನರಾದರು ಎಂಬ ಗಾಳಿ ಸುದ್ದಿ ವಾಟ್ಸ್​ಆ್ಯಪ್​ನಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ರವಾನೆ ಆಗುತ್ತಿದೆ. ಈ ಬಗ್ಗೆ ದಿಲೀಪ್​ ಕುಮಾರ್​ ಪತ್ನಿ ಸಾಯಿರಾ ಬಾನು ಸ್ಪಷ್ಟನೆ ನೀಡಿದ್ದಾರೆ.

ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಿಲೀಪ್​ ಆರೋಗ್ಯದ ಬಗ್ಗೆ ಸಾಯಿರಾ ಬಾನು ಸೋಶಿಯಲ್​ ಮೀಡಿಯಾ ಮೂಲಕ ಅಪ್​ಡೇಟ್​ ನೀಡಿದ್ದಾರೆ. ‘ವಾಟ್ಸ್​ಆ್ಯಪ್​ನಲ್ಲಿ ಬರುವ ಫಾರ್ವರ್ಡ್​​​ ಮೆಸೇಜ್​ಗಳನ್ನು ನಂಬಬೇಡಿ. ದಿಲೀಪ್​ ಕುಮಾರ್​ ಆರೋಗ್ಯ ಸ್ಥಿರವಾಗಿದೆ. ನಿಮ್ಮೆಲ್ಲರ ಹಾರೈಕೆ ಮತ್ತು ಪ್ರಾರ್ಥನೆಗಳಿಗೆ ಧನ್ಯವಾಗಳು. ವೈದ್ಯರು ಹೇಳುವ ಪ್ರಕಾರ ಇನ್ನು 2 ಅಥವಾ 3 ದಿನಗಳಲ್ಲಿ ಅವರನ್ನು ಮನೆಗೆ ಕರೆದುಕೊಂಡು ಹೋಗುತ್ತೇವೆ’ ಎಂದು ಸಾಯಿರಾ ಬಾನು ಟ್ವೀಟ್​ ಮಾಡಿದ್ದಾರೆ.

ದಿಲೀಪ್​ ಕುಮಾರ್​ ಅವರಿಗೆ ಈಗ 98 ವರ್ಷ ವಯಸ್ಸು. ಹಾಗಾಗಿ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಸದ್ಯ ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಸದ್ಯ ಅವರು ಆಕ್ಸಿಜನ್​ ಸಪೋರ್ಟ್​ನಲ್ಲಿ ಇದ್ದಾರೆ. ಕಳೆದ ತಿಂಗಳು ಕೂಡ ಇದೇ ಆಸ್ಪತ್ರೆಗೆ ದಿಲೀಪ್​ ಕುಮಾರ್​ ದಾಖಲಾಗಿದ್ದರು. ಸಹಜ​ ಆರೋಗ್ಯ ತಪಾಸಣೆಗಾಗಿ ಅವರು ತೆರಳಿದ್ದರು ಎನ್ನಲಾಗಿತ್ತು. ಎರಡು ದಿನಗಳ ಬಳಿಕ ಅವರನ್ನು ಡಿಸ್ಚಾರ್ಜ್​ ಮಾಡಲಾಗಿತ್ತು. ಕಳೆದ ವರ್ಷ ಕೊರೊನಾ ವೈರಸ್​ನಿಂದಾಗಿ ಲಾಕ್​ಡೌನ್​ ಆರಂಭ ಆಗುತ್ತಿದ್ದಂತೆಯೇ ದಿಲೀಪ್​ ಕುಮಾರ್​ ಆರೋಗ್ಯದ ಬಗ್ಗೆ ಕುಟುಂಬದವರು ಹೆಚ್ಚಿನ ಕಾಳಜಿ ವಹಿಸಲು ಆರಂಭಿದ್ದರು.

1944ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದಿಲೀಪ್​ ಕುಮಾರ್​ ಅವರು 5 ದಶಕಗಳ ಕಾಲ ಸಕ್ರಿಯರಾಗಿದ್ದರು. ಕೊಹಿನೂರ್​, ಮುಘಲ್-ಏ-ಆಜಮ್​, ಶಕ್ತಿ, ನಯಾ ದೌರ್​, ರಾಮ್​ ಔರ್​ ಶ್ಯಾಮ್​ ಮುಂತಾದ ಕ್ಲಾಸಿಕ್​ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ.

ಇದನ್ನೂ ಓದಿ:

Kirron Kher: ಅನುಪಮ್​ ಖೇರ್​ ಪತ್ನಿ, ಖ್ಯಾತ ನಟಿ ಕಿರಣ್​ ಖೇರ್​ ನಿಧನದ ವದಂತಿಗೆ ಬ್ರೇಕ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್