AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಫಲಿಸಿತು ಅಭಿಮಾನಿಗಳ ಪ್ರಾರ್ಥನೆ, ವೈದ್ಯರ ಪ್ರಯತ್ನ; ಹಿರಿಯ ನಟ ದಿಲೀಪ್​ ಕುಮಾರ್ ಆಸ್ಪತ್ರೆಯಿಂದ ಡಿಸ್​ಚಾರ್ಜ್​

ಈಗ ಸತತ ಐದು ದಿನಗಳ ಕಾಲ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಫಲಕಾರಿಯಾಗಿದೆ. ಜತೆಗೆ ಸಾವಿರಾರು ಅಭಿಮಾನಿಗಳ ಪ್ರಾರ್ಥನೆ ಕೂಡ ಫಲಿಸಿದೆ.

ಕೊನೆಗೂ ಫಲಿಸಿತು ಅಭಿಮಾನಿಗಳ ಪ್ರಾರ್ಥನೆ, ವೈದ್ಯರ ಪ್ರಯತ್ನ; ಹಿರಿಯ ನಟ ದಿಲೀಪ್​ ಕುಮಾರ್ ಆಸ್ಪತ್ರೆಯಿಂದ ಡಿಸ್​ಚಾರ್ಜ್​
ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆದ ದಿಲೀಪ್​ ಕುಮಾರ್
ರಾಜೇಶ್ ದುಗ್ಗುಮನೆ
| Edited By: |

Updated on: Jun 11, 2021 | 8:51 PM

Share

ಭಾರತೀಯ ಚಿತ್ರರಂಗದ ಹಿರಿಯ ನಟ ದಿಲೀಪ್​ ಕುಮಾರ್​ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಭಾನುವಾರ (ಜೂ.6) ಆಸ್ಪತ್ರೆಗೆ ದಾಖಲಾಗಿದ್ದರು. ಸತತ ಐದು ದಿನಗಳ ಕಾಲ ಚಿಕಿತ್ಸೆ ನೀಡಿದ ನಂತರದಲ್ಲಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಇಂದು (ಜೂನ್​ 11) ಅವರು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.

ದಿಲೀಪ್​ ಕುಮಾರ್ ಪ್ಲೆರಲ್ ಎಫ್ಯೂಷನ್ ಸಮಸ್ಯೆಯಿಂದ ಬಳಲುತ್ತಿದ್ದರು. ವೈದ್ಯಕೀಯ ಭಾಷೆಯಲ್ಲಿ ಪ್ಲೆರಲ್ ಎಫ್ಯೂಷನ್ ಎಂದರೆ ಶ್ವಾಸಕೋಶದಲ್ಲಿ ನೀರು ತುಂಬುವುದು ಎಂದರ್ಥ. ಈಗ ಸತತ ಐದು ದಿನಗಳ ಕಾಲ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಫಲಕಾರಿಯಾಗಿದೆ. ಜತೆಗೆ ಸಾವಿರಾರು ಅಭಿಮಾನಿಗಳ ಪ್ರಾರ್ಥನೆ ಕೂಡ ಫಲಿಸಿದೆ.

ದೇಶದೆಲ್ಲೆಡೆ ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಈ ಸಂದರ್ಭದಲ್ಲಿ ದಿಲೀಪ್​ ಕುಮಾರ್​ ಆರೋಗ್ಯದಲ್ಲಿ ಏರುಪೇರು ಆಗಿದ್ದಕ್ಕೆ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಕೊನೆಗೂ ಈ ಆತಂಕ ದೂರವಾದಂತಾಗಿದೆ. ಈ ಮಧ್ಯೆ ಅನೇಕರು ವಾಟ್ಸ್​ಆ್ಯಪ್​ನಲ್ಲಿ ದಿಲೀಪ್​ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಿಬಿಟ್ಟಿದ್ದರು. ಈ ಬಗ್ಗೆ ಅವರ ಪತ್ನಿ ಸೈರಾ ಬಾನು ಸ್ಪಷ್ಟನೆ ನೀಡಿದ್ದರು.

1944ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದಿಲೀಪ್​ ಕುಮಾರ್​ ಅವರು 5 ದಶಕಗಳ ಕಾಲ ಸಕ್ರಿಯರಾಗಿದ್ದರು. ಕೊಹಿನೂರ್​, ಮುಘಲ್-ಏ-ಆಜಮ್​, ಶಕ್ತಿ, ನಯಾ ದೌರ್​, ರಾಮ್​ ಔರ್​ ಶ್ಯಾಮ್​ ಮುಂತಾದ ಕ್ಲಾಸಿಕ್​ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ದಿಲೀಪ್​ ಕುಮಾರ್​ ನಟಿಸಿದ ಕೊನೇ ಸಿನಿಮಾ ‘ಖಿಲಾ’1998ರಲ್ಲಿ ತೆರೆಕಂಡಿತು. ಆ ನಂತರ ಅವರು ಯಾವುದೇ ಚಿತ್ರದಲ್ಲೂ ಬಣ್ಣ ಹಚ್ಚಿಲ್ಲ.

ಇದನ್ನೂ ಓದಿ: ನಟ ದಿಲೀಪ್​ ಕುಮಾರ್​ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಹರಿದಾಡುತ್ತಿದೆ ಕೆಟ್ಟ ಸುದ್ದಿ; ಪತ್ನಿ ನೀಡಿದ ಸ್ಪಷ್ಟನೆ ಏನು?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್