AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dilip Kumar Death: ಲೆಜೆಂಡರಿ ನಟ ದಿಲೀಪ್​ ಕುಮಾರ್​ ಬಗ್ಗೆ ಯಡಿಯೂರಪ್ಪ, ಅಮಿತಾಭ್​, ಸೋನು ಸೂದ್​ ಹೇಳಿದ್ದೇನು?

Dilip Kumar No More: ಐದು ದಶಕಗಳ ಕಾಲ ಸಕ್ರಿಯರಾಗಿದ್ದ ದಿಲೀಪ್​ ಕುಮಾರ್​ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅಮಿತಾಭ್​ ಬಚ್ಚನ್​, ಸೋನು ಸೂದ್​, ಅಕ್ಷಯ್​ ಕುಮಾರ್​, ಸಲ್ಮಾನ್​ ಖಾನ್​ ಸೇರಿದಂತೆ ಅನೇಕರು ದಿಲೀಪ್​ ಸಾಬ್​ಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Dilip Kumar Death: ಲೆಜೆಂಡರಿ ನಟ ದಿಲೀಪ್​ ಕುಮಾರ್​ ಬಗ್ಗೆ ಯಡಿಯೂರಪ್ಪ, ಅಮಿತಾಭ್​, ಸೋನು ಸೂದ್​ ಹೇಳಿದ್ದೇನು?
ಲೆಜೆಂಡರಿ ನಟ ದಿಲೀಪ್​ ಕುಮಾರ್​ ಬಗ್ಗೆ ಯಡಿಯೂರಪ್ಪ, ಅಮಿತಾಭ್​, ಸೋನು ಸೂದ್​ ಹೇಳಿದ್ದೇನು?
TV9 Web
| Edited By: |

Updated on: Jul 07, 2021 | 1:27 PM

Share

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ನಟ ದಿಲೀಪ್​ ಕುಮಾರ್​ ಬುಧವಾರ (ಜು.7) ನಿಧನರಾದರು. ಅಗಲಿದ ದಿಗ್ಗಜನಿಗೆ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಐದು ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ದಿಲೀಪ್​ ಕುಮಾರ್​ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. 98 ವರ್ಷಗಳ ತುಂಬು ಜೀವನವನ್ನು ನಡೆಸಿದ ಅವರು ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದರು. ಅಗಲಿದ ದಿಗ್ಗಜನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅನೇಕ ಸೆಲೆಬ್ರಿಟಿಗಳು ಕೋರುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಅಮಿತಾಭ್​ ಬಚ್ಚನ್​, ಸೋನು ಸೂದ್​ ಮುಂತಾದವರು ಕಂಬನಿ ಮಿಡಿದಿದ್ದಾರೆ.

‘ದಿಗ್ಗಜರು ಎಲ್ಲಿಯೂ ಹೋಗುವುದಿಲ್ಲ. ಅವರು ಕೇವಲ ವೇದಿಕೆ ಬದಲಾಯಿಸುತ್ತಾರೆ ಅಷ್ಟೇ’ ಎಂದು ನಟ ಸೋನು ಸೂದ್​ ಟ್ವೀಟ್​ ಮಾಡಿದ್ದಾರೆ. ‘ಇಡೀ ಜಗತ್ತಿಗೆ ಬೇರೆ ಅನೇಕ ಹೀರೋಗಳು ಇರಬಹುದು. ಆದರೆ ನಮ್ಮಂಥ ನಟರಿಗೆ ದಿಲೀಪ್​ ಕುಮಾರ್​ ಅವರೇ ಹೀರೋ ಆಗಿದ್ದರು’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದಾರೆ. ‘ಭಾರತೀಯ ಚಿತ್ರರಂಗ ಕಂಡ ಅತ್ಯುತ್ತಮ ನಟ ಎಂದರೆ ಅದು ದಿಲೀಪ್​ ಸಾಬ್​. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಸಲ್ಮಾನ್​ ಖಾನ್​ ಪೋಸ್ಟ್​ ಮಾಡಿದ್ದಾರೆ.

‘ಒಂದು ಸಂಸ್ಥೆಯೇ ಮುಗಿದುಹೋಯಿತು. ಭಾರತೀಯ ಸಿನಿಮಾದ ಬಗ್ಗೆ ಇತಿಹಾಸ ಬರೆಯುವಾಗ ದಿಲೀಪ್​ ಕುಮಾರ್​ ಬರುವುದಕ್ಕಿಂತ ಮೊದಲು ಮತ್ತು ದಿಲೀಪ್​ ಕುಮಾರ್​ ಬಂದ ನಂತರ ಎಂದು ಬರೆಯಬೇಕು. ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದವರಿಗೆ ನೋವು ತಡೆದುಕೊಳ್ಳುವ ಶಕ್ತಿಯನ್ನು ದೇವರು ನೀಡಲಿ. ಒಂದು ಯುಗವೇ ಅಂತ್ಯವಾಯಿತು’ ಎಂದು ಟ್ವಿಟರ್​ನಲ್ಲಿ ಅಮಿತಾಭ್​ ಬಚ್ಚನ್​ ಅವರು ಬರೆದುಕೊಂಡಿದ್ದಾರೆ.

ದಶಕಗಳ ಕಾಲ ತಮ್ಮ ಅಭಿನಯ, ಪ್ರತಿಭೆಯಿಂದ ಚಿತ್ರರಂಗದ ದಿಗ್ಗಜ ಸ್ಥಾನಕ್ಕೇರಿದ್ದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಪದ್ಮವಿಭೂಷಣ ದಿಲೀಪ್ ಕುಮಾರ್ ಅವರ ನಿಧನದಿಂದ ಯುಗವೊಂದು ಅಂತ್ಯವಾದಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ, ಅಸಂಖ್ಯಾತ ಅಭಿಮಾನಿಗಳಿಗೆ ಆ ಮಹಾನ್ ಕಲಾವಿದನನ್ನು ಕಳೆದುಕೊಂಡ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ’ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆಂದು ‘ಸಿಎಂ ಆಫ್​ ಕರ್ನಾಟಕ’ ಅಧಿಕೃತ ಟ್ವಿಟರ್​ ಖಾತೆಯಿಂದ ಪೋಸ್ಟ್​ ಮಾಡಲಾಗಿದೆ.

ಭಾರತೀಯ ಚಿತ್ರರಂಗದ ಹಲವಾರು ಸೆಲೆಬ್ರಿಟಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಅಭಿಮಾನಿಗಳು ದಿಲೀಪ್​ ಕುಮಾರ್​ ಅವರಿಗೆ ನುಡಿ ನಮನ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ರಾಹುಲ್​ ಗಾಂಧಿ ಸೇರಿದಂತೆ ಹಲವು ಮಂದಿ ರಾಜಕೀಯ ಮುಖಂಡರು ಸಹ ದಿಗ್ಗಜ ನಟನ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ:

ಪೆಟ್ಟು ತಿನ್ನಬೇಕಾಗುತ್ತೆ ಎಂಬ ಭಯದಲ್ಲಿ ಖಾನ್​ ಬದಲು ದಿಲೀಪ್​ ಕುಮಾರ್​ ಎಂದು ಹೆಸರಿಟ್ಟುಕೊಂಡಿದ್ದ ದಿಗ್ಗಜ ನಟ

Dilip Kumar Death: ಬಾಲಿವುಡ್​ ಹಿರಿಯ ನಟ ದಿಲೀಪ್​ ಕುಮಾರ್​ ನಿಧನ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ