Dilip Kumar Death: ಬಾಲಿವುಡ್​ ಹಿರಿಯ ನಟ ದಿಲೀಪ್​ ಕುಮಾರ್​ ನಿಧನ

Dilip Kumar: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ನಟ ದಿಲೀಪ್​ ಕುಮಾರ್​ ಬುಧವಾರ (ಜು.7) ನಿಧನರಾದರು. ಅಗಲಿದ ದಿಗ್ಗಜನಿಗೆ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

Dilip Kumar Death: ಬಾಲಿವುಡ್​ ಹಿರಿಯ ನಟ ದಿಲೀಪ್​ ಕುಮಾರ್​ ನಿಧನ
ದಿಲೀಪ್​ ಕುಮಾರ್​ ನಿಧನ
Follow us
| Updated By: Digi Tech Desk

Updated on:Jul 07, 2021 | 9:49 AM

ಹಿಂದಿ ಚಿತ್ರರಂಗದ ಲೆಜೆಂಡರಿ ನಟ ದಿಲೀಪ್​ ಕುಮಾರ್​ ಅವರು ಇಂದು (ಜು.7) ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಕೆಲವೇ ದಿನಗಳ ಹಿಂದೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಿಲೀಪ್​ ಕುಮಾರ್​ ಹಲವು ವರ್ಷಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಜೂ.30ರಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಜೊತೆಯಲ್ಲಿ ಪತ್ನಿ ಸೈರಾ ಬಾನು ಇದ್ದರು. ದಿಲೀಪ್ ಕುಮಾರ್​ ಆರೋಗ್ಯ ಸ್ಥಿರವಾಗಿದೆ ಎಂದು ಸೈರಾ ಬಾನು ಹೇಳಿದ್ದರು ಕೂಡ ಬುಧವಾರ ಕಹಿ ಸುದ್ದಿ ಕೇಳಿಬಂದಿದೆ. ದಿಲೀಪ್​ ಕುಮಾರ್​ ನಿಧನಕ್ಕೆ ಚಿತ್ರರಂಗದ ಸೆಲೆಬ್ರಿಟಿಗಳು, ಅಪಾರ ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

‘ಕೆಲವೇ ನಿಮಿಷಗಳ ಹಿಂದೆ ದಿಲೀಪ್​ ಸಾಬ್​ ಅವರು ನಿಧನರಾದರು ಎಂಬುದನ್ನು ತೀವ್ರ ನೋವಿನೊಂದಿಗೆ ತಿಳಿಸುತ್ತಿದ್ದೇನೆ. ದೇವರಿಂದಾಗಿ ಬಂದ ನಾವು ಮತ್ತೆ ದೇವರ ಬಳಿಗೆ ತೆರಳುತ್ತೇವೆ’ ಎಂದು ದಿಲೀಪ್​ ಕುಮಾರ್​ ಕುಟುಂಬದ ಆಪ್ತರಾದ ಫೈಸಲ್​ ಫಾರೂಖಿ ಟ್ವೀಟ್​ ಮೂಲಕ ನಿಧನದ ಸುದ್ದಿಯನ್ನು ಖಚಿತಪಡಿಸಿದ್ದಾರೆ.

1944ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದಿಲೀಪ್​ ಕುಮಾರ್​ ಅವರು 5 ದಶಕಗಳ ಕಾಲ ಸಕ್ರಿಯರಾಗಿದ್ದರು. ಕೊಹಿನೂರ್​, ಮುಘಲ್-ಏ-ಆಜಮ್​, ಶಕ್ತಿ, ನಯಾ ದೌರ್​, ರಾಮ್​ ಔರ್​ ಶ್ಯಾಮ್​ ಮುಂತಾದ ಕ್ಲಾಸಿಕ್​ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ದಿಲೀಪ್​ ಕುಮಾರ್​ ನಟಿಸಿದ ಕೊನೇ ಸಿನಿಮಾ ‘ಖಿಲಾ’ 1998ರಲ್ಲಿ ತೆರೆಕಂಡಿತು. ಆ ನಂತರ ಅವರು ಯಾವುದೇ ಚಿತ್ರದಲ್ಲೂ ಬಣ್ಣ ಹಚ್ಚಲಿಲ್ಲ.

ಇತ್ತೀಚಿನ ವರ್ಷಗಳಲ್ಲಿ ಅವರು ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರತಿ ಬಾರಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಕೇಳಿಬಂದಾಗ ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬಸ್ಥರು ಆತಂಕಗೊಳ್ಳುತ್ತಿದ್ದರು. ದಿಲೀಪ್​ ಕುಮಾರ್​ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಲಾಗುತ್ತಿತ್ತು. ಆದರೆ ಈ ಬಾರಿ ಯಾರ ಪ್ರಾರ್ಥನೆಯೂ ಫಲಿಸಲಿಲ್ಲ. 98 ವರ್ಷಗಳ ತುಂಬು ಜೀವನವನ್ನು ನಡೆಸಿದ ದಿಲೀಪ್​ ಕುಮಾರ್​ ಅವರು ಇಹಲೋಕ ತ್ಯಜಿಸಿದ್ದಾರೆ.

ಅನೇಕ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ದಿಲೀಪ್​ ಕುಮಾರ್​ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ. ‘ದಿಗ್ಗಜರು ಎಲ್ಲಿಯೂ ಹೋಗುವುದಿಲ್ಲ. ಅವರು ಕೇವಲ ವೇದಿಕೆ ಬದಲಾಯಿಸುತ್ತಾರೆ ಅಷ್ಟೇ’ ಎಂದು ನಟ ಸೋನು ಸೂದ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

ನಟಿ ಮಂದಿರಾ ಬೇಡಿ ಪತಿ ರಾಜ್​ ಕೌಶಲ್​ ನಿಧನ; 49 ವರ್ಷಕ್ಕೇ ಬದುಕು ಮುಗಿಸಿದ ಬಾಲಿವುಡ್ ಸಿನಿಮಾ ನಿರ್ಮಾಪಕ

ರಾಜ್​ ಕೌಶಲ್​ ಅಂತ್ಯಕ್ರಿಯೆ: ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಗಂಡನ ಅಂತ್ಯಸಂಸ್ಕಾರ ಮಾಡಿದ ಮಂದಿರಾ ಬೇಡಿ

Published On - 8:20 am, Wed, 7 July 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ