AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dilip Kumar Death: ಬಾಲಿವುಡ್​ ಹಿರಿಯ ನಟ ದಿಲೀಪ್​ ಕುಮಾರ್​ ನಿಧನ

Dilip Kumar: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ನಟ ದಿಲೀಪ್​ ಕುಮಾರ್​ ಬುಧವಾರ (ಜು.7) ನಿಧನರಾದರು. ಅಗಲಿದ ದಿಗ್ಗಜನಿಗೆ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

Dilip Kumar Death: ಬಾಲಿವುಡ್​ ಹಿರಿಯ ನಟ ದಿಲೀಪ್​ ಕುಮಾರ್​ ನಿಧನ
ದಿಲೀಪ್​ ಕುಮಾರ್​ ನಿಧನ
TV9 Web
| Edited By: |

Updated on:Jul 07, 2021 | 9:49 AM

Share

ಹಿಂದಿ ಚಿತ್ರರಂಗದ ಲೆಜೆಂಡರಿ ನಟ ದಿಲೀಪ್​ ಕುಮಾರ್​ ಅವರು ಇಂದು (ಜು.7) ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಕೆಲವೇ ದಿನಗಳ ಹಿಂದೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಿಲೀಪ್​ ಕುಮಾರ್​ ಹಲವು ವರ್ಷಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಜೂ.30ರಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಜೊತೆಯಲ್ಲಿ ಪತ್ನಿ ಸೈರಾ ಬಾನು ಇದ್ದರು. ದಿಲೀಪ್ ಕುಮಾರ್​ ಆರೋಗ್ಯ ಸ್ಥಿರವಾಗಿದೆ ಎಂದು ಸೈರಾ ಬಾನು ಹೇಳಿದ್ದರು ಕೂಡ ಬುಧವಾರ ಕಹಿ ಸುದ್ದಿ ಕೇಳಿಬಂದಿದೆ. ದಿಲೀಪ್​ ಕುಮಾರ್​ ನಿಧನಕ್ಕೆ ಚಿತ್ರರಂಗದ ಸೆಲೆಬ್ರಿಟಿಗಳು, ಅಪಾರ ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

‘ಕೆಲವೇ ನಿಮಿಷಗಳ ಹಿಂದೆ ದಿಲೀಪ್​ ಸಾಬ್​ ಅವರು ನಿಧನರಾದರು ಎಂಬುದನ್ನು ತೀವ್ರ ನೋವಿನೊಂದಿಗೆ ತಿಳಿಸುತ್ತಿದ್ದೇನೆ. ದೇವರಿಂದಾಗಿ ಬಂದ ನಾವು ಮತ್ತೆ ದೇವರ ಬಳಿಗೆ ತೆರಳುತ್ತೇವೆ’ ಎಂದು ದಿಲೀಪ್​ ಕುಮಾರ್​ ಕುಟುಂಬದ ಆಪ್ತರಾದ ಫೈಸಲ್​ ಫಾರೂಖಿ ಟ್ವೀಟ್​ ಮೂಲಕ ನಿಧನದ ಸುದ್ದಿಯನ್ನು ಖಚಿತಪಡಿಸಿದ್ದಾರೆ.

1944ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದಿಲೀಪ್​ ಕುಮಾರ್​ ಅವರು 5 ದಶಕಗಳ ಕಾಲ ಸಕ್ರಿಯರಾಗಿದ್ದರು. ಕೊಹಿನೂರ್​, ಮುಘಲ್-ಏ-ಆಜಮ್​, ಶಕ್ತಿ, ನಯಾ ದೌರ್​, ರಾಮ್​ ಔರ್​ ಶ್ಯಾಮ್​ ಮುಂತಾದ ಕ್ಲಾಸಿಕ್​ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ದಿಲೀಪ್​ ಕುಮಾರ್​ ನಟಿಸಿದ ಕೊನೇ ಸಿನಿಮಾ ‘ಖಿಲಾ’ 1998ರಲ್ಲಿ ತೆರೆಕಂಡಿತು. ಆ ನಂತರ ಅವರು ಯಾವುದೇ ಚಿತ್ರದಲ್ಲೂ ಬಣ್ಣ ಹಚ್ಚಲಿಲ್ಲ.

ಇತ್ತೀಚಿನ ವರ್ಷಗಳಲ್ಲಿ ಅವರು ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರತಿ ಬಾರಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಕೇಳಿಬಂದಾಗ ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬಸ್ಥರು ಆತಂಕಗೊಳ್ಳುತ್ತಿದ್ದರು. ದಿಲೀಪ್​ ಕುಮಾರ್​ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಲಾಗುತ್ತಿತ್ತು. ಆದರೆ ಈ ಬಾರಿ ಯಾರ ಪ್ರಾರ್ಥನೆಯೂ ಫಲಿಸಲಿಲ್ಲ. 98 ವರ್ಷಗಳ ತುಂಬು ಜೀವನವನ್ನು ನಡೆಸಿದ ದಿಲೀಪ್​ ಕುಮಾರ್​ ಅವರು ಇಹಲೋಕ ತ್ಯಜಿಸಿದ್ದಾರೆ.

ಅನೇಕ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ದಿಲೀಪ್​ ಕುಮಾರ್​ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ. ‘ದಿಗ್ಗಜರು ಎಲ್ಲಿಯೂ ಹೋಗುವುದಿಲ್ಲ. ಅವರು ಕೇವಲ ವೇದಿಕೆ ಬದಲಾಯಿಸುತ್ತಾರೆ ಅಷ್ಟೇ’ ಎಂದು ನಟ ಸೋನು ಸೂದ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

ನಟಿ ಮಂದಿರಾ ಬೇಡಿ ಪತಿ ರಾಜ್​ ಕೌಶಲ್​ ನಿಧನ; 49 ವರ್ಷಕ್ಕೇ ಬದುಕು ಮುಗಿಸಿದ ಬಾಲಿವುಡ್ ಸಿನಿಮಾ ನಿರ್ಮಾಪಕ

ರಾಜ್​ ಕೌಶಲ್​ ಅಂತ್ಯಕ್ರಿಯೆ: ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಗಂಡನ ಅಂತ್ಯಸಂಸ್ಕಾರ ಮಾಡಿದ ಮಂದಿರಾ ಬೇಡಿ

Published On - 8:20 am, Wed, 7 July 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?