AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dilip Kumar Death: ಬಾಲಿವುಡ್​ ಹಿರಿಯ ನಟ ದಿಲೀಪ್​ ಕುಮಾರ್​ ನಿಧನ

Dilip Kumar: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ನಟ ದಿಲೀಪ್​ ಕುಮಾರ್​ ಬುಧವಾರ (ಜು.7) ನಿಧನರಾದರು. ಅಗಲಿದ ದಿಗ್ಗಜನಿಗೆ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

Dilip Kumar Death: ಬಾಲಿವುಡ್​ ಹಿರಿಯ ನಟ ದಿಲೀಪ್​ ಕುಮಾರ್​ ನಿಧನ
ದಿಲೀಪ್​ ಕುಮಾರ್​ ನಿಧನ
TV9 Web
| Edited By: |

Updated on:Jul 07, 2021 | 9:49 AM

Share

ಹಿಂದಿ ಚಿತ್ರರಂಗದ ಲೆಜೆಂಡರಿ ನಟ ದಿಲೀಪ್​ ಕುಮಾರ್​ ಅವರು ಇಂದು (ಜು.7) ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಕೆಲವೇ ದಿನಗಳ ಹಿಂದೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಿಲೀಪ್​ ಕುಮಾರ್​ ಹಲವು ವರ್ಷಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಜೂ.30ರಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಜೊತೆಯಲ್ಲಿ ಪತ್ನಿ ಸೈರಾ ಬಾನು ಇದ್ದರು. ದಿಲೀಪ್ ಕುಮಾರ್​ ಆರೋಗ್ಯ ಸ್ಥಿರವಾಗಿದೆ ಎಂದು ಸೈರಾ ಬಾನು ಹೇಳಿದ್ದರು ಕೂಡ ಬುಧವಾರ ಕಹಿ ಸುದ್ದಿ ಕೇಳಿಬಂದಿದೆ. ದಿಲೀಪ್​ ಕುಮಾರ್​ ನಿಧನಕ್ಕೆ ಚಿತ್ರರಂಗದ ಸೆಲೆಬ್ರಿಟಿಗಳು, ಅಪಾರ ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

‘ಕೆಲವೇ ನಿಮಿಷಗಳ ಹಿಂದೆ ದಿಲೀಪ್​ ಸಾಬ್​ ಅವರು ನಿಧನರಾದರು ಎಂಬುದನ್ನು ತೀವ್ರ ನೋವಿನೊಂದಿಗೆ ತಿಳಿಸುತ್ತಿದ್ದೇನೆ. ದೇವರಿಂದಾಗಿ ಬಂದ ನಾವು ಮತ್ತೆ ದೇವರ ಬಳಿಗೆ ತೆರಳುತ್ತೇವೆ’ ಎಂದು ದಿಲೀಪ್​ ಕುಮಾರ್​ ಕುಟುಂಬದ ಆಪ್ತರಾದ ಫೈಸಲ್​ ಫಾರೂಖಿ ಟ್ವೀಟ್​ ಮೂಲಕ ನಿಧನದ ಸುದ್ದಿಯನ್ನು ಖಚಿತಪಡಿಸಿದ್ದಾರೆ.

1944ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದಿಲೀಪ್​ ಕುಮಾರ್​ ಅವರು 5 ದಶಕಗಳ ಕಾಲ ಸಕ್ರಿಯರಾಗಿದ್ದರು. ಕೊಹಿನೂರ್​, ಮುಘಲ್-ಏ-ಆಜಮ್​, ಶಕ್ತಿ, ನಯಾ ದೌರ್​, ರಾಮ್​ ಔರ್​ ಶ್ಯಾಮ್​ ಮುಂತಾದ ಕ್ಲಾಸಿಕ್​ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ದಿಲೀಪ್​ ಕುಮಾರ್​ ನಟಿಸಿದ ಕೊನೇ ಸಿನಿಮಾ ‘ಖಿಲಾ’ 1998ರಲ್ಲಿ ತೆರೆಕಂಡಿತು. ಆ ನಂತರ ಅವರು ಯಾವುದೇ ಚಿತ್ರದಲ್ಲೂ ಬಣ್ಣ ಹಚ್ಚಲಿಲ್ಲ.

ಇತ್ತೀಚಿನ ವರ್ಷಗಳಲ್ಲಿ ಅವರು ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರತಿ ಬಾರಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಕೇಳಿಬಂದಾಗ ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬಸ್ಥರು ಆತಂಕಗೊಳ್ಳುತ್ತಿದ್ದರು. ದಿಲೀಪ್​ ಕುಮಾರ್​ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಲಾಗುತ್ತಿತ್ತು. ಆದರೆ ಈ ಬಾರಿ ಯಾರ ಪ್ರಾರ್ಥನೆಯೂ ಫಲಿಸಲಿಲ್ಲ. 98 ವರ್ಷಗಳ ತುಂಬು ಜೀವನವನ್ನು ನಡೆಸಿದ ದಿಲೀಪ್​ ಕುಮಾರ್​ ಅವರು ಇಹಲೋಕ ತ್ಯಜಿಸಿದ್ದಾರೆ.

ಅನೇಕ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ದಿಲೀಪ್​ ಕುಮಾರ್​ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ. ‘ದಿಗ್ಗಜರು ಎಲ್ಲಿಯೂ ಹೋಗುವುದಿಲ್ಲ. ಅವರು ಕೇವಲ ವೇದಿಕೆ ಬದಲಾಯಿಸುತ್ತಾರೆ ಅಷ್ಟೇ’ ಎಂದು ನಟ ಸೋನು ಸೂದ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

ನಟಿ ಮಂದಿರಾ ಬೇಡಿ ಪತಿ ರಾಜ್​ ಕೌಶಲ್​ ನಿಧನ; 49 ವರ್ಷಕ್ಕೇ ಬದುಕು ಮುಗಿಸಿದ ಬಾಲಿವುಡ್ ಸಿನಿಮಾ ನಿರ್ಮಾಪಕ

ರಾಜ್​ ಕೌಶಲ್​ ಅಂತ್ಯಕ್ರಿಯೆ: ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಗಂಡನ ಅಂತ್ಯಸಂಸ್ಕಾರ ಮಾಡಿದ ಮಂದಿರಾ ಬೇಡಿ

Published On - 8:20 am, Wed, 7 July 21

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!