AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲೀಪ್​ ಕುಮಾರ್​ಗೆ ಆಗಿರೋ ಸಮಸ್ಯೆ ಏನು? ಹಿರಿಯ ನಟನ ಆರೋಗ್ಯದ ಬಗ್ಗೆ ಹೊಸ ಅಪ್​ಡೇಟ್​

ದೇಶದೆಲ್ಲೆಡೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದೆ. ಈ ಸಂದರ್ಭದಲ್ಲಿ ದಿಲೀಪ್​ ಕುಮಾರ್​ ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ.

ದಿಲೀಪ್​ ಕುಮಾರ್​ಗೆ ಆಗಿರೋ ಸಮಸ್ಯೆ ಏನು? ಹಿರಿಯ ನಟನ ಆರೋಗ್ಯದ ಬಗ್ಗೆ ಹೊಸ ಅಪ್​ಡೇಟ್​
ದಿಲೀಪ್​ ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Jun 06, 2021 | 7:12 PM

Share

ಭಾರತೀಯ ಚಿತ್ರರಂಗದ ಹಿರಿಯ ನಟ ದಿಲೀಪ್​ ಕುಮಾರ್​ ಅವರಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಭಾನುವಾರ (ಜೂ.6) ಬೆಳಗ್ಗೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಅವರ ಆರೋಗ್ಯದ ಬಗ್ಗೆ ಹೊಸ ಅಪ್​​ಡೇಟ್​ ಒಂದು ಸಿಕ್ಕಿದೆ. ದಿಲೀಪ್​ ಅವರಿಗೆ ಕೃತಕ ಉಸಿರಾಟ ಅಳವಡಿಸಲಾಗಿದೆ. ಇದಲ್ಲದೆ, ಕೆಲ ವರದಿಗಳ ಪ್ರಕಾರ ಅವರು ಪ್ಲೆರಲ್ ಎಫ್ಯೂಷನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ವೈದ್ಯಕೀಯ ಭಾಷೆಯಯಲ್ಲಿ ಪ್ಲೆರಲ್ ಎಫ್ಯೂಷನ್ ಎಂದರೆ ಶ್ವಾಸಕೋಶದಲ್ಲಿ ನೀರು ತುಂಬುವುದು ಎಂದರ್ಥ. ಸದ್ಯ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಪಿಡಿ ಹಿಂದುಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಕಳೆದ ತಿಂಗಳು ಕೂಡ ಇದೇ ಆಸ್ಪತ್ರೆಗೆ ದಿಲೀಪ್​ ಕುಮಾರ್​ ದಾಖಲಾಗಿದ್ದರು. ಸಾಮಾನ್ಯ​ ಆರೋಗ್ಯ ತಪಾಸಣೆಗಾಗಿ ಅವರು ತೆರಳಿದ್ದರು ಎನ್ನಲಾಗಿತ್ತು. ಎರಡು ದಿನಗಳ ಬಳಿಕ ಅವರನ್ನು ಡಿಸ್ಚಾರ್ಜ್​ ಮಾಡಲಾಗಿತ್ತು. ಈಗ ಅವರು ಮತ್ತೆ ಅಸ್ವಸ್ಥಗೊಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

1944ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದಿಲೀಪ್​ ಕುಮಾರ್​ ಅವರು 5 ದಶಕಗಳ ಕಾಲ ಸಕ್ರಿಯರಾಗಿದ್ದರು. ಕೊಹಿನೂರ್​, ಮುಘಲ್-ಏ-ಆಜಮ್​, ಶಕ್ತಿ, ನಯಾ ದೌರ್​, ರಾಮ್​ ಔರ್​ ಶ್ಯಾಮ್​ ಮುಂತಾದ ಕ್ಲಾಸಿಕ್​ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ದಿಲೀಪ್​ ಕುಮಾರ್​ ನಟಿಸಿದ ಕೊನೇ ಸಿನಿಮಾ ‘ಖಿಲಾ’1998ರಲ್ಲಿ ತೆರೆಕಂಡಿತು. ಆ ನಂತರ ಅವರು ಯಾವುದೇ ಚಿತ್ರದಲ್ಲೂ ಬಣ್ಣ ಹಚ್ಚಿಲ್ಲ.

ದೇಶದೆಲ್ಲೆಡೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದೆ. ಈ ಸಂದರ್ಭದಲ್ಲಿ ದಿಲೀಪ್​ ಕುಮಾರ್​ ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಖ್ಯಾತ ನಟ ದಿಲೀಪ್​ ಕುಮಾರ್​ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲು; ಅಭಿಮಾನಿಗಳಲ್ಲಿ ಆತಂಕ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ