AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೈದಿ 2’ ಚಿತ್ರಕ್ಕೆ ‘ದಿಲ್ಲಿ’ ಟೈಟಲ್? ಅನುಮಾನ ಮೂಡಿಸಿದ ಸೆನ್ಸಾರ್ ಪ್ರಮಾಣಪತ್ರ

ಲೋಕೇಶ್ ಕನಗರಾಜ್ ಮತ್ತು ಕಾರ್ತಿ ಕಾಂಬಿನೇಷನ್‌ನ 'ಕೈದಿ 2' ಚಿತ್ರಕ್ಕೆ 'ದಿಲ್ಲಿ' ಎಂದು ಹೆಸರಿಡಲಾಗಿದೆಯೇ? ಡ್ರೀಮ್ ವಾರಿಯರ್ ಪಿಕ್ಚರ್ಸ್ ಸಂಸ್ಥೆಯ ‘ದಿಲ್ಲಿ’ ಚಿತ್ರದ ಟೀಸರ್ ಸೆನ್ಸಾರ್ ಆಗಿದ್ದು, ಕೌತುಕ ಸೃಷ್ಟಿಯಾಗಿದೆ. ಇದು ‘ಕೈದಿ’ ಸೀಕ್ವೆಲ್ ಇರಬಹುದೆಂಬ ಚರ್ಚೆ ಶುರುವಾಗಿದೆ. ಚಿತ್ರತಂಡದ ಅಧಿಕೃತ ಮಾಹಿತಿಗಾಗಿ ಫ್ಯಾನ್ಸ್ ಕಾದಿದ್ದಾರೆ.

‘ಕೈದಿ 2’ ಚಿತ್ರಕ್ಕೆ ‘ದಿಲ್ಲಿ’ ಟೈಟಲ್? ಅನುಮಾನ ಮೂಡಿಸಿದ ಸೆನ್ಸಾರ್ ಪ್ರಮಾಣಪತ್ರ
Karthi
ಮದನ್​ ಕುಮಾರ್​
|

Updated on: Feb 20, 2026 | 7:32 PM

Share

ಕಾಲಿವುಡ್‌ನ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ (Lokesh Kanagaraj) ಮತ್ತು ನಟ ಕಾರ್ತಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಸಿನಿರಂಗದಲ್ಲಿ ಸಂಚಲನ ಮೂಡಿಸುತ್ತಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್​ನಲ್ಲಿ ಬಂದಿದ್ದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಬಳಿಕ ಆ ಚಿತ್ರಕ್ಕೆ ಸೀಕ್ವೆಲ್ (Kaithi 2) ಬರಲಿದೆ ಎಂದು ಹೇಳಲಾಗಿತ್ತಾದರೂ ಅಪ್​ಡೇಟ್ ಸಿಕ್ಕಿರಲಿಲ್ಲ. ಆದರೆ ಈಗ ಮತ್ತೆ ‘ಕೈದಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅದರ ಜೊತೆಗೆ ಒಂದು ಟ್ವಿಸ್ಟ್ ಎದುರಾಗಿದೆ. ‘ಕೈದಿ 2’ ಬದಲು ‘ದಿಲ್ಲಿ’ (Dilli) ಎಂದು ಶೀರ್ಷಿಕೆ ಇಟ್ಟಿರುವ ಸಾಧ್ಯತೆ ಇದೆ.

ಸೆನ್ಸಾರ್ ಮಂಡಳಿಯಲ್ಲಿ ‘ದಿಲ್ಲಿ’ ಶೀರ್ಷಿಕೆ ಸದ್ದು ಮಾಡಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ತಮಿಳಿನ ‘ದಿಲ್ಲಿ’ ಎಂಬ ಶೀರ್ಷಿಕೆಯ ಚಿತ್ರದ ಟೀಸರ್ ಇಂದು (ಫೆಬ್ರವರಿ 20) ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಪಡೆದುಕೊಂಡಿದೆ. ‘ಕೈದಿ’ ಚಿತ್ರದಲ್ಲಿ ಕಾರ್ತಿ ನಿರ್ವಹಿಸಿದ್ದ ಪಾತ್ರದ ಹೆಸರು ಕೂಡ ‘ದಿಲ್ಲಿ’ ಎಂದೇ ಆಗಿರುವುದರಿಂದ, ಈ ಶೀರ್ಷಿಕೆ ಈಗ ಎಲ್ಲರ ಗಮನ ಸೆಳೆಯುತ್ತಿದೆ.

ಕುತೂಹಲ ಮೂಡಿಸಿದ ಪ್ರೊಡಕ್ಷನ್ ಹೌಸ್: ಈ ಹೊಸ ಬೆಳವಣಿಗೆಗೆ ಮತ್ತಷ್ಟು ಪುಷ್ಟಿ ನೀಡುವಂತೆ, ‘ದಿಲ್ಲಿ’ ಚಿತ್ರದ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿರುವುದು ‘ಡ್ರೀಮ್ ವಾರಿಯರ್ ಪಿಕ್ಚರ್ಸ್’ ನಿರ್ಮಾಣ ಸಂಸ್ಥೆ. ವಿಶೇಷವೆಂದರೆ, ‘ಕೈದಿ’ ಚಿತ್ರವನ್ನೂ ಇದೇ ಸಂಸ್ಥೆ ನಿರ್ಮಿಸಿತ್ತು. ಇದರಿಂದಾಗಿ ‘ಕೈದಿ 2’ ಚಿತ್ರವನ್ನೇ ‘ದಿಲ್ಲಿ’ ಎಂದು ಮರುನಾಮಕರಣ ಮಾಡಲಾಗಿದೆಯೇ ಅಥವಾ ಇದು ಅದೇ ಪಾತ್ರವನ್ನು ಆಧರಿಸಿದ ಮತ್ತೊಂದು ಹೊಸ ಕಥೆಯೇ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ನಡೆಯುತ್ತಿವೆ.

ಲೋಕೇಶ್ ಕನಗರಾಜ್ ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ: ನಿರ್ದೇಶಕ ಲೋಕೇಶ್ ಕನಗರಾಜ್ ಅವರ ಎಲ್​ಸಿಯು, ಅಂದರೆ ‘ಲೋಕೇಶ್ ಸಿನಿಮ್ಯಾಟಿಕ್ ಯೂನಿವರ್ಸ್’ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ‘ದಿಲ್ಲಿ’ ಶೀರ್ಷಿಕೆ ಕೇಳಿ ಫ್ಯಾನ್ಸ್ ಫುಲ್ ಖುಷಿ ಆಗಿದ್ದಾರೆ. ‘ಕೂಲಿ’ ಸಿನಿಮಾ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದ್ದರೂ ಕೂಡ ಲೋಕೇಶ್ ಅವರು ‘ದಿಲ್ಲಿ’ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲಿದ್ದಾರೆ ಎಂದು ಕಾಯುತ್ತಿದ್ದಾರೆ ಅಭಿಮಾನಿಗಳು.

ಇದನ್ನೂ ಓದಿ: ‘ಕೂಲಿ’ ಚಿತ್ರದ ನಿರ್ಮಾಪಕರಿಗೆ 5 ಕೋಟಿ ರೂ. ಉಳಿಸಿದ ನಿರ್ದೇಶಕ ಲೋಕೇಶ್ ಕನಗರಾಜ್

ಲೋಕೇಶ್ ಕನಗರಾಜ್ ಅವರ ಸಿನಿಮಾಗಳಲ್ಲಿ ಯಾವಾಗಲೂ ನಿರೀಕ್ಷೆಗೂ ಮೀರಿದ ಟ್ವಿಸ್ಟ್‌ಗಳು ಇರುತ್ತವೆ. ಹಾಗಾಗಿ, ಅಧಿಕೃತ ಘೋಷಣೆ ಹೊರಬೀಳುವವರೆಗೂ ಈ ‘ದಿಲ್ಲಿ’ ರಹಸ್ಯ ಹೀಗೆಯೇ ಮುಂದುವರಿಯಲಿದೆ. ಒಂದು ವೇಳೆ ‘ಕೈದಿ 2’ ಚಿತ್ರವೇ ‘ದಿಲ್ಲಿ’ ಆಗಿದ್ದರೆ, ದಕ್ಷಿಣ ಭಾರತದ ಚಿತ್ರರಂಗದಲ್ಲಿ ಇದು ಹೊಸ ದಾಖಲೆ ಬರೆಯುತ್ತದೆ ಎಂಬುದು ಅಭಿಮಾನಿಗಳ ನಂಬಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ