AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಘಜಿನಿ 2’ ಬಗ್ಗೆ ಆಸೆ ಇಟ್ಟುಕೊಂಡಿದ್ದ ಸಿನಿಪ್ರಿಯರಿಗೆ ನಿರಾಸೆ; ಮುಂದಿನ ಪ್ಲ್ಯಾನ್​ ತಿಳಿಸಿದ ಎ.ಆರ್​. ಮುರುಗದಾಸ್​

A R Murugadoss | Ghajini 2: ‘ಘಜಿನಿ’ ಸಿನಿಮಾದಿಂದ ಎ.ಆರ್​. ಮುರುಗದಾಸ್​ ಅವರಿಗೆ ಸಖತ್​ ಬೇಡಿಕೆ ಸೃಷ್ಟಿ ಆಗಿತ್ತು. ಆ ಚಿತ್ರದ ಸೀಕ್ವೆಲ್​ಗಾಗಿ ಅವರು ಸ್ಕ್ರಿಪ್ಟ್​ ಮಾಡುತ್ತಿದ್ದಾರೆ ಎಂದು ಗಾಸಿಪ್​ ಹಬ್ಬಿತ್ತು.

‘ಘಜಿನಿ 2’ ಬಗ್ಗೆ ಆಸೆ ಇಟ್ಟುಕೊಂಡಿದ್ದ ಸಿನಿಪ್ರಿಯರಿಗೆ ನಿರಾಸೆ; ಮುಂದಿನ ಪ್ಲ್ಯಾನ್​ ತಿಳಿಸಿದ ಎ.ಆರ್​. ಮುರುಗದಾಸ್​
ಆಮಿರ್ ಖಾನ್, ಸೂರ್ಯ
ಮದನ್​ ಕುಮಾರ್​
|

Updated on: Apr 03, 2023 | 7:00 AM

Share

ನಿರ್ದೇಶಕ ಎ.ಆರ್​. ಮುರುಗದಾಸ್​ (A R Murugadoss) ಅವರು ಇತ್ತೀಚೆಗೆ ಸೈಲೆಂಟ್​ ಆಗಿದ್ದಾರೆ. ಒಂದು ಕಾಲದಲ್ಲಿ ಬ್ಯಾಕ್​ ಟು ಬ್ಯಾಕ್​ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದ ಅವರು ಈಗ ನಿರ್ದೇಶನದಿಂದ ಅಂತರ ಕಾ​ಯ್ದುಕೊಂಡಿದ್ದಾರೆ. ಅವರು ನಿರ್ಮಾಣ ಮಾಡಿರುವ ‘ಆಗಸ್ಟ್​ 16, 1947’ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ಮುಂಬೈನಲ್ಲಿ ನಡೆಯಿತು. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಎ.ಆರ್​. ಮುರುಗದಾಸ್​ ಅವರು ‘ಘಜಿನಿ’ ಸಿನಿಮಾ (Ghajini) ನಿರ್ದೇಶಿಸಿ ದೊಡ್ಡ ಯಶಸ್ಸು ಕಂಡಿದ್ದರು. ಆ ಚಿತ್ರಕ್ಕೆ ಸೀಕ್ವೆಲ್(Ghajini 2) ಬರಲಿದೆ ಎಂದು ಸಿನಿಪ್ರಿಯರು ನಿರೀಕ್ಷಿಸಿದ್ದರು. ಆದರೆ ಅದು ಸಾಧ್ಯವಿಲ್ಲ ಎಂದು ಈಗ ಸ್ವತಃ ಎ.ಆರ್​. ಮುರುಗದಾಸ್​ ಅವರು ಸ್ಪಷ್ಟನೆ ನೀಡಿದ್ದಾರೆ. ಇದರಿಂದ ಕೆಲವು ಅಭಿಮಾನಿಗಳಿಗೆ ಬೇಸರ ಆಗಿದೆ.

2005ರಲ್ಲಿ ತಮಿಳಿನ ‘ಘಜಿನಿ’ ಸಿನಿಮಾ ತೆರೆಕಂಡು ಸೂಪರ್​ ಹಿಟ್​ ಆಯಿತು. ಆ ಚಿತ್ರದಲ್ಲಿ ಸೂರ್ಯ ಅವರ ನಟನೆಗೆ ಫ್ಯಾನ್ಸ್​ ಫಿದಾ ಆದರು. ಅವರಿಗೆ ಜೋಡಿಯಾಗಿ ಯಾಸಿನ್​ ನಟಿಸಿದ್ದರು. ನಂತರ ಅದೇ ಸಿನಿಮಾವನ್ನು ಬಾಲಿವುಡ್​ಗೆ ರಿಮೇಕ್​ ಮಾಡಲಾಯಿತು. 2008ರಲ್ಲಿ ಬಂದ ಹಿಂದಿಯ ‘ಘಜಿನಿ’ ಸಿನಿಮಾದಲ್ಲಿ ಆಮಿರ್​ ಖಾನ್​ ಮತ್ತು ಯಾಸಿನ್​ ತೆರೆಹಂಚಿಕೊಂಡರು. ಆ ಚಿತ್ರ ಕೂಡ ಬ್ಲಾಕ್​ಬಸ್ಟರ್​ ಹಿಟ್​ ಆಯಿತು.

ಇದನ್ನೂ ಓದಿ: ‘ಸಲಾರ್​’ ಸಿನಿಮಾಗೆ ಸೀಕ್ವೆಲ್ ಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲಿದೆ ಈ ವಿಚಾರ

ಇದನ್ನೂ ಓದಿ
Image
ಈ ಫೋಟೋದಲ್ಲಿರುವ ಸ್ಟಾರ್ ನಟರು ಯಾರು ಎಂದು ಗುರುತಿಸುತ್ತೀರಾ?
Image
‘ವಿಕ್ರಮ್​’ ವಿಲನ್ ಸೂರ್ಯಗೆ ರೋಲೆಕ್ಸ್ ವಾಚ್ ಗಿಫ್ಟ್ ಕೊಟ್ಟ ಕಮಲ್ ಹಾಸನ್​; ಇದರ ಬೆಲೆ ಎಷ್ಟು ಲಕ್ಷ? ಗೆಸ್ ಮಾಡಿ
Image
ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ಭೇಟಿ ನೀಡಿ ಭಾವುಕರಾದ ನಟ ಸೂರ್ಯ
Image
Suriya: ನಟ ಸೂರ್ಯ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ; ಕಾರಣವೇನು? ಇಲ್ಲಿದೆ ಮಾಹಿತಿ

ಬಾಲಿವುಡ್​ನಲ್ಲಿ 100 ಕೋಟಿ ರೂಪಾಯಿ ಗಳಿಸಿದ ಮೊದಲ ಸಿನಿಮಾ ಎಂಬ ಖ್ಯಾತಿ ‘ಘಜಿನಿ’ ಚಿತ್ರಕ್ಕಿದೆ. ಆ ಬಳಿಕ ಹಿಂದಿ ಚಿತ್ರರಂಗದಲ್ಲಿ ಮುರುಗದಾಸ್​ ಅವರಿಗೆ ಸಖತ್​ ಬೇಡಿಕೆ ಸೃಷ್ಟಿ ಆಯಿತು. ಇಷ್ಟೆಲ್ಲ ಸಕ್ಸಸ್​ ತಂದುಕೊಟ್ಟ ‘ಘಜಿನಿ’ ಸಿನಿಮಾದ ಸೀಕ್ವೆಲ್​ಗಾಗಿ ಅವರು ಸ್ಕ್ರಿಪ್ಟ್​ ಮಾಡುತ್ತಿದ್ದಾರೆ ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದರು. ಆದರೆ ಅದು ನಿಜವಲ್ಲ ಎಂದು ಸ್ವತಃ ಮುರುಗದಾಸ್​ ಹೇಳಿದ್ದಾರೆ.

ಇದನ್ನೂ ಓದಿ: 2022ರಲ್ಲಿ ಸೀಕ್ವೆಲ್​ಗಳದ್ದೇ ದರ್ಬಾರು; ‘ಪಾರ್ಟ್ 2’ ಮಾಡಿ ಗೆದ್ದ ನಿರ್ಮಾಪಕರು

‘ಘಜಿನಿ 2 ಬಗ್ಗೆ ನನಗೆ ಏನೂ ತಿಳಿದಿಲ್ಲ. ನಾಯಕಿ ಪಾತ್ರ ಸತ್ತು ಹೋಯ್ತು, ಕಥಾನಾಯಕನಿಗೆ ನೆನಪಿನ ಶಕ್ತಿ ಇಲ್ಲ. ಈಗ ನಾನು ಹೊಸದೇನನ್ನೋ ಮಾಡುತ್ತೇನೆ. ಒಂದೆರಡು ಸ್ಕ್ರಿಪ್ಟ್​ಗಳು ಇವೆ. ಹಿಂದಿಯಲ್ಲಿ ಹೊಸ ಪ್ರಯತ್ನ ಮಾಡುತ್ತೇನೆ’ ಎಂದು ಎ.ಆರ್​. ಮುರುಗದಾಸ್​ ಹೇಳಿದ್ದಾರೆ. ಆ ಮೂಲಕ ಅವರು ‘ಘಜಿನಿ 2’ ಬಗೆಗಿನ ವದಂತಿಗಳನ್ನು ತಳ್ಳಿಹಾಕಿದ್ದಾರೆ.

ಎ.ಆರ್​. ಮುರುಗದಾಸ್​ ನಿರ್ಮಾಣ ಮಾಡಿರುವ ‘ಆಗಸ್ಟ್​ 16, 1947’ ಸಿನಿಮಾ ಏಪ್ರಿಲ್​ 7ರಂದು ರಿಲೀಸ್​ ಆಗಲಿದೆ. ಹಲವು ಭಾಷೆಗಳಿಗೆ ಡಬ್​ ಮಾಡಿ ಈ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಈ ಸಿನಿಮಾ ಹೊಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!