AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಘಜಿನಿ 2’ ಬಗ್ಗೆ ಆಸೆ ಇಟ್ಟುಕೊಂಡಿದ್ದ ಸಿನಿಪ್ರಿಯರಿಗೆ ನಿರಾಸೆ; ಮುಂದಿನ ಪ್ಲ್ಯಾನ್​ ತಿಳಿಸಿದ ಎ.ಆರ್​. ಮುರುಗದಾಸ್​

A R Murugadoss | Ghajini 2: ‘ಘಜಿನಿ’ ಸಿನಿಮಾದಿಂದ ಎ.ಆರ್​. ಮುರುಗದಾಸ್​ ಅವರಿಗೆ ಸಖತ್​ ಬೇಡಿಕೆ ಸೃಷ್ಟಿ ಆಗಿತ್ತು. ಆ ಚಿತ್ರದ ಸೀಕ್ವೆಲ್​ಗಾಗಿ ಅವರು ಸ್ಕ್ರಿಪ್ಟ್​ ಮಾಡುತ್ತಿದ್ದಾರೆ ಎಂದು ಗಾಸಿಪ್​ ಹಬ್ಬಿತ್ತು.

‘ಘಜಿನಿ 2’ ಬಗ್ಗೆ ಆಸೆ ಇಟ್ಟುಕೊಂಡಿದ್ದ ಸಿನಿಪ್ರಿಯರಿಗೆ ನಿರಾಸೆ; ಮುಂದಿನ ಪ್ಲ್ಯಾನ್​ ತಿಳಿಸಿದ ಎ.ಆರ್​. ಮುರುಗದಾಸ್​
ಆಮಿರ್ ಖಾನ್, ಸೂರ್ಯ
ಮದನ್​ ಕುಮಾರ್​
|

Updated on: Apr 03, 2023 | 7:00 AM

Share

ನಿರ್ದೇಶಕ ಎ.ಆರ್​. ಮುರುಗದಾಸ್​ (A R Murugadoss) ಅವರು ಇತ್ತೀಚೆಗೆ ಸೈಲೆಂಟ್​ ಆಗಿದ್ದಾರೆ. ಒಂದು ಕಾಲದಲ್ಲಿ ಬ್ಯಾಕ್​ ಟು ಬ್ಯಾಕ್​ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದ ಅವರು ಈಗ ನಿರ್ದೇಶನದಿಂದ ಅಂತರ ಕಾ​ಯ್ದುಕೊಂಡಿದ್ದಾರೆ. ಅವರು ನಿರ್ಮಾಣ ಮಾಡಿರುವ ‘ಆಗಸ್ಟ್​ 16, 1947’ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ಮುಂಬೈನಲ್ಲಿ ನಡೆಯಿತು. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಎ.ಆರ್​. ಮುರುಗದಾಸ್​ ಅವರು ‘ಘಜಿನಿ’ ಸಿನಿಮಾ (Ghajini) ನಿರ್ದೇಶಿಸಿ ದೊಡ್ಡ ಯಶಸ್ಸು ಕಂಡಿದ್ದರು. ಆ ಚಿತ್ರಕ್ಕೆ ಸೀಕ್ವೆಲ್(Ghajini 2) ಬರಲಿದೆ ಎಂದು ಸಿನಿಪ್ರಿಯರು ನಿರೀಕ್ಷಿಸಿದ್ದರು. ಆದರೆ ಅದು ಸಾಧ್ಯವಿಲ್ಲ ಎಂದು ಈಗ ಸ್ವತಃ ಎ.ಆರ್​. ಮುರುಗದಾಸ್​ ಅವರು ಸ್ಪಷ್ಟನೆ ನೀಡಿದ್ದಾರೆ. ಇದರಿಂದ ಕೆಲವು ಅಭಿಮಾನಿಗಳಿಗೆ ಬೇಸರ ಆಗಿದೆ.

2005ರಲ್ಲಿ ತಮಿಳಿನ ‘ಘಜಿನಿ’ ಸಿನಿಮಾ ತೆರೆಕಂಡು ಸೂಪರ್​ ಹಿಟ್​ ಆಯಿತು. ಆ ಚಿತ್ರದಲ್ಲಿ ಸೂರ್ಯ ಅವರ ನಟನೆಗೆ ಫ್ಯಾನ್ಸ್​ ಫಿದಾ ಆದರು. ಅವರಿಗೆ ಜೋಡಿಯಾಗಿ ಯಾಸಿನ್​ ನಟಿಸಿದ್ದರು. ನಂತರ ಅದೇ ಸಿನಿಮಾವನ್ನು ಬಾಲಿವುಡ್​ಗೆ ರಿಮೇಕ್​ ಮಾಡಲಾಯಿತು. 2008ರಲ್ಲಿ ಬಂದ ಹಿಂದಿಯ ‘ಘಜಿನಿ’ ಸಿನಿಮಾದಲ್ಲಿ ಆಮಿರ್​ ಖಾನ್​ ಮತ್ತು ಯಾಸಿನ್​ ತೆರೆಹಂಚಿಕೊಂಡರು. ಆ ಚಿತ್ರ ಕೂಡ ಬ್ಲಾಕ್​ಬಸ್ಟರ್​ ಹಿಟ್​ ಆಯಿತು.

ಇದನ್ನೂ ಓದಿ: ‘ಸಲಾರ್​’ ಸಿನಿಮಾಗೆ ಸೀಕ್ವೆಲ್ ಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲಿದೆ ಈ ವಿಚಾರ

ಇದನ್ನೂ ಓದಿ
Image
ಈ ಫೋಟೋದಲ್ಲಿರುವ ಸ್ಟಾರ್ ನಟರು ಯಾರು ಎಂದು ಗುರುತಿಸುತ್ತೀರಾ?
Image
‘ವಿಕ್ರಮ್​’ ವಿಲನ್ ಸೂರ್ಯಗೆ ರೋಲೆಕ್ಸ್ ವಾಚ್ ಗಿಫ್ಟ್ ಕೊಟ್ಟ ಕಮಲ್ ಹಾಸನ್​; ಇದರ ಬೆಲೆ ಎಷ್ಟು ಲಕ್ಷ? ಗೆಸ್ ಮಾಡಿ
Image
ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ಭೇಟಿ ನೀಡಿ ಭಾವುಕರಾದ ನಟ ಸೂರ್ಯ
Image
Suriya: ನಟ ಸೂರ್ಯ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ; ಕಾರಣವೇನು? ಇಲ್ಲಿದೆ ಮಾಹಿತಿ

ಬಾಲಿವುಡ್​ನಲ್ಲಿ 100 ಕೋಟಿ ರೂಪಾಯಿ ಗಳಿಸಿದ ಮೊದಲ ಸಿನಿಮಾ ಎಂಬ ಖ್ಯಾತಿ ‘ಘಜಿನಿ’ ಚಿತ್ರಕ್ಕಿದೆ. ಆ ಬಳಿಕ ಹಿಂದಿ ಚಿತ್ರರಂಗದಲ್ಲಿ ಮುರುಗದಾಸ್​ ಅವರಿಗೆ ಸಖತ್​ ಬೇಡಿಕೆ ಸೃಷ್ಟಿ ಆಯಿತು. ಇಷ್ಟೆಲ್ಲ ಸಕ್ಸಸ್​ ತಂದುಕೊಟ್ಟ ‘ಘಜಿನಿ’ ಸಿನಿಮಾದ ಸೀಕ್ವೆಲ್​ಗಾಗಿ ಅವರು ಸ್ಕ್ರಿಪ್ಟ್​ ಮಾಡುತ್ತಿದ್ದಾರೆ ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದರು. ಆದರೆ ಅದು ನಿಜವಲ್ಲ ಎಂದು ಸ್ವತಃ ಮುರುಗದಾಸ್​ ಹೇಳಿದ್ದಾರೆ.

ಇದನ್ನೂ ಓದಿ: 2022ರಲ್ಲಿ ಸೀಕ್ವೆಲ್​ಗಳದ್ದೇ ದರ್ಬಾರು; ‘ಪಾರ್ಟ್ 2’ ಮಾಡಿ ಗೆದ್ದ ನಿರ್ಮಾಪಕರು

‘ಘಜಿನಿ 2 ಬಗ್ಗೆ ನನಗೆ ಏನೂ ತಿಳಿದಿಲ್ಲ. ನಾಯಕಿ ಪಾತ್ರ ಸತ್ತು ಹೋಯ್ತು, ಕಥಾನಾಯಕನಿಗೆ ನೆನಪಿನ ಶಕ್ತಿ ಇಲ್ಲ. ಈಗ ನಾನು ಹೊಸದೇನನ್ನೋ ಮಾಡುತ್ತೇನೆ. ಒಂದೆರಡು ಸ್ಕ್ರಿಪ್ಟ್​ಗಳು ಇವೆ. ಹಿಂದಿಯಲ್ಲಿ ಹೊಸ ಪ್ರಯತ್ನ ಮಾಡುತ್ತೇನೆ’ ಎಂದು ಎ.ಆರ್​. ಮುರುಗದಾಸ್​ ಹೇಳಿದ್ದಾರೆ. ಆ ಮೂಲಕ ಅವರು ‘ಘಜಿನಿ 2’ ಬಗೆಗಿನ ವದಂತಿಗಳನ್ನು ತಳ್ಳಿಹಾಕಿದ್ದಾರೆ.

ಎ.ಆರ್​. ಮುರುಗದಾಸ್​ ನಿರ್ಮಾಣ ಮಾಡಿರುವ ‘ಆಗಸ್ಟ್​ 16, 1947’ ಸಿನಿಮಾ ಏಪ್ರಿಲ್​ 7ರಂದು ರಿಲೀಸ್​ ಆಗಲಿದೆ. ಹಲವು ಭಾಷೆಗಳಿಗೆ ಡಬ್​ ಮಾಡಿ ಈ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಈ ಸಿನಿಮಾ ಹೊಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​