AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಘಜಿನಿ 2’ ಬಗ್ಗೆ ಆಸೆ ಇಟ್ಟುಕೊಂಡಿದ್ದ ಸಿನಿಪ್ರಿಯರಿಗೆ ನಿರಾಸೆ; ಮುಂದಿನ ಪ್ಲ್ಯಾನ್​ ತಿಳಿಸಿದ ಎ.ಆರ್​. ಮುರುಗದಾಸ್​

A R Murugadoss | Ghajini 2: ‘ಘಜಿನಿ’ ಸಿನಿಮಾದಿಂದ ಎ.ಆರ್​. ಮುರುಗದಾಸ್​ ಅವರಿಗೆ ಸಖತ್​ ಬೇಡಿಕೆ ಸೃಷ್ಟಿ ಆಗಿತ್ತು. ಆ ಚಿತ್ರದ ಸೀಕ್ವೆಲ್​ಗಾಗಿ ಅವರು ಸ್ಕ್ರಿಪ್ಟ್​ ಮಾಡುತ್ತಿದ್ದಾರೆ ಎಂದು ಗಾಸಿಪ್​ ಹಬ್ಬಿತ್ತು.

‘ಘಜಿನಿ 2’ ಬಗ್ಗೆ ಆಸೆ ಇಟ್ಟುಕೊಂಡಿದ್ದ ಸಿನಿಪ್ರಿಯರಿಗೆ ನಿರಾಸೆ; ಮುಂದಿನ ಪ್ಲ್ಯಾನ್​ ತಿಳಿಸಿದ ಎ.ಆರ್​. ಮುರುಗದಾಸ್​
ಆಮಿರ್ ಖಾನ್, ಸೂರ್ಯ
ಮದನ್​ ಕುಮಾರ್​
|

Updated on: Apr 03, 2023 | 7:00 AM

Share

ನಿರ್ದೇಶಕ ಎ.ಆರ್​. ಮುರುಗದಾಸ್​ (A R Murugadoss) ಅವರು ಇತ್ತೀಚೆಗೆ ಸೈಲೆಂಟ್​ ಆಗಿದ್ದಾರೆ. ಒಂದು ಕಾಲದಲ್ಲಿ ಬ್ಯಾಕ್​ ಟು ಬ್ಯಾಕ್​ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದ ಅವರು ಈಗ ನಿರ್ದೇಶನದಿಂದ ಅಂತರ ಕಾ​ಯ್ದುಕೊಂಡಿದ್ದಾರೆ. ಅವರು ನಿರ್ಮಾಣ ಮಾಡಿರುವ ‘ಆಗಸ್ಟ್​ 16, 1947’ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ಮುಂಬೈನಲ್ಲಿ ನಡೆಯಿತು. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಎ.ಆರ್​. ಮುರುಗದಾಸ್​ ಅವರು ‘ಘಜಿನಿ’ ಸಿನಿಮಾ (Ghajini) ನಿರ್ದೇಶಿಸಿ ದೊಡ್ಡ ಯಶಸ್ಸು ಕಂಡಿದ್ದರು. ಆ ಚಿತ್ರಕ್ಕೆ ಸೀಕ್ವೆಲ್(Ghajini 2) ಬರಲಿದೆ ಎಂದು ಸಿನಿಪ್ರಿಯರು ನಿರೀಕ್ಷಿಸಿದ್ದರು. ಆದರೆ ಅದು ಸಾಧ್ಯವಿಲ್ಲ ಎಂದು ಈಗ ಸ್ವತಃ ಎ.ಆರ್​. ಮುರುಗದಾಸ್​ ಅವರು ಸ್ಪಷ್ಟನೆ ನೀಡಿದ್ದಾರೆ. ಇದರಿಂದ ಕೆಲವು ಅಭಿಮಾನಿಗಳಿಗೆ ಬೇಸರ ಆಗಿದೆ.

2005ರಲ್ಲಿ ತಮಿಳಿನ ‘ಘಜಿನಿ’ ಸಿನಿಮಾ ತೆರೆಕಂಡು ಸೂಪರ್​ ಹಿಟ್​ ಆಯಿತು. ಆ ಚಿತ್ರದಲ್ಲಿ ಸೂರ್ಯ ಅವರ ನಟನೆಗೆ ಫ್ಯಾನ್ಸ್​ ಫಿದಾ ಆದರು. ಅವರಿಗೆ ಜೋಡಿಯಾಗಿ ಯಾಸಿನ್​ ನಟಿಸಿದ್ದರು. ನಂತರ ಅದೇ ಸಿನಿಮಾವನ್ನು ಬಾಲಿವುಡ್​ಗೆ ರಿಮೇಕ್​ ಮಾಡಲಾಯಿತು. 2008ರಲ್ಲಿ ಬಂದ ಹಿಂದಿಯ ‘ಘಜಿನಿ’ ಸಿನಿಮಾದಲ್ಲಿ ಆಮಿರ್​ ಖಾನ್​ ಮತ್ತು ಯಾಸಿನ್​ ತೆರೆಹಂಚಿಕೊಂಡರು. ಆ ಚಿತ್ರ ಕೂಡ ಬ್ಲಾಕ್​ಬಸ್ಟರ್​ ಹಿಟ್​ ಆಯಿತು.

ಇದನ್ನೂ ಓದಿ: ‘ಸಲಾರ್​’ ಸಿನಿಮಾಗೆ ಸೀಕ್ವೆಲ್ ಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲಿದೆ ಈ ವಿಚಾರ

ಇದನ್ನೂ ಓದಿ
Image
ಈ ಫೋಟೋದಲ್ಲಿರುವ ಸ್ಟಾರ್ ನಟರು ಯಾರು ಎಂದು ಗುರುತಿಸುತ್ತೀರಾ?
Image
‘ವಿಕ್ರಮ್​’ ವಿಲನ್ ಸೂರ್ಯಗೆ ರೋಲೆಕ್ಸ್ ವಾಚ್ ಗಿಫ್ಟ್ ಕೊಟ್ಟ ಕಮಲ್ ಹಾಸನ್​; ಇದರ ಬೆಲೆ ಎಷ್ಟು ಲಕ್ಷ? ಗೆಸ್ ಮಾಡಿ
Image
ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ಭೇಟಿ ನೀಡಿ ಭಾವುಕರಾದ ನಟ ಸೂರ್ಯ
Image
Suriya: ನಟ ಸೂರ್ಯ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ; ಕಾರಣವೇನು? ಇಲ್ಲಿದೆ ಮಾಹಿತಿ

ಬಾಲಿವುಡ್​ನಲ್ಲಿ 100 ಕೋಟಿ ರೂಪಾಯಿ ಗಳಿಸಿದ ಮೊದಲ ಸಿನಿಮಾ ಎಂಬ ಖ್ಯಾತಿ ‘ಘಜಿನಿ’ ಚಿತ್ರಕ್ಕಿದೆ. ಆ ಬಳಿಕ ಹಿಂದಿ ಚಿತ್ರರಂಗದಲ್ಲಿ ಮುರುಗದಾಸ್​ ಅವರಿಗೆ ಸಖತ್​ ಬೇಡಿಕೆ ಸೃಷ್ಟಿ ಆಯಿತು. ಇಷ್ಟೆಲ್ಲ ಸಕ್ಸಸ್​ ತಂದುಕೊಟ್ಟ ‘ಘಜಿನಿ’ ಸಿನಿಮಾದ ಸೀಕ್ವೆಲ್​ಗಾಗಿ ಅವರು ಸ್ಕ್ರಿಪ್ಟ್​ ಮಾಡುತ್ತಿದ್ದಾರೆ ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದರು. ಆದರೆ ಅದು ನಿಜವಲ್ಲ ಎಂದು ಸ್ವತಃ ಮುರುಗದಾಸ್​ ಹೇಳಿದ್ದಾರೆ.

ಇದನ್ನೂ ಓದಿ: 2022ರಲ್ಲಿ ಸೀಕ್ವೆಲ್​ಗಳದ್ದೇ ದರ್ಬಾರು; ‘ಪಾರ್ಟ್ 2’ ಮಾಡಿ ಗೆದ್ದ ನಿರ್ಮಾಪಕರು

‘ಘಜಿನಿ 2 ಬಗ್ಗೆ ನನಗೆ ಏನೂ ತಿಳಿದಿಲ್ಲ. ನಾಯಕಿ ಪಾತ್ರ ಸತ್ತು ಹೋಯ್ತು, ಕಥಾನಾಯಕನಿಗೆ ನೆನಪಿನ ಶಕ್ತಿ ಇಲ್ಲ. ಈಗ ನಾನು ಹೊಸದೇನನ್ನೋ ಮಾಡುತ್ತೇನೆ. ಒಂದೆರಡು ಸ್ಕ್ರಿಪ್ಟ್​ಗಳು ಇವೆ. ಹಿಂದಿಯಲ್ಲಿ ಹೊಸ ಪ್ರಯತ್ನ ಮಾಡುತ್ತೇನೆ’ ಎಂದು ಎ.ಆರ್​. ಮುರುಗದಾಸ್​ ಹೇಳಿದ್ದಾರೆ. ಆ ಮೂಲಕ ಅವರು ‘ಘಜಿನಿ 2’ ಬಗೆಗಿನ ವದಂತಿಗಳನ್ನು ತಳ್ಳಿಹಾಕಿದ್ದಾರೆ.

ಎ.ಆರ್​. ಮುರುಗದಾಸ್​ ನಿರ್ಮಾಣ ಮಾಡಿರುವ ‘ಆಗಸ್ಟ್​ 16, 1947’ ಸಿನಿಮಾ ಏಪ್ರಿಲ್​ 7ರಂದು ರಿಲೀಸ್​ ಆಗಲಿದೆ. ಹಲವು ಭಾಷೆಗಳಿಗೆ ಡಬ್​ ಮಾಡಿ ಈ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಈ ಸಿನಿಮಾ ಹೊಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು