ಅಲ್ಲು ಅರ್ಜುನ್​ ಜತೆ ಸಿನಿಮಾ ಮಾಡಲು 60 ಕೋಟಿ ರೂ. ಸಂಬಳ ಕೇಳಿದ ಅಟ್ಲಿ?

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅಟ್ಲಿ ಅವರು ಬೇಡಿಕೆ ಹೊಂದಿದ್ದಾರೆ. ‘ಜವಾನ್​’ ಗೆಲುವಿನ ಬಳಿಕ ಅವರ ಸಂಭಾವನೆ ಹೆಚ್ಚಾಗಿದೆ. ಏಕಾಏಕಿ ಆಗಿ ಅವರು 60 ಕೋಟಿ ರೂಪಾಯಿ ಸಂಬಳ ಕೇಳುತ್ತಿದ್ದಾರೆ ಎಂಬ ಸುದ್ದಿ ಹರಡಿದೆ. ಅಲ್ಲು ಅರ್ಜುನ್​ ಜೊತೆ ಅಟ್ಲಿ ಸಿನಿಮಾ ಮಾಡಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಈ ಬಗ್ಗೆ ಅಧಿಕೃತವಾಗಿ ಘೋಷಣೆ ಆಗುವುದು ಬಾಕಿಯಿದೆ.

ಅಲ್ಲು ಅರ್ಜುನ್​ ಜತೆ ಸಿನಿಮಾ ಮಾಡಲು 60 ಕೋಟಿ ರೂ. ಸಂಬಳ ಕೇಳಿದ ಅಟ್ಲಿ?
ಅಲ್ಲು ಅರ್ಜುನ್​, ಅಟ್ಲಿ
Follow us
|

Updated on: Mar 12, 2024 | 12:24 PM

ಸ್ಟಾರ್​ ನಟರು ಮಾತ್ರವಲ್ಲದೇ ಕೆಲವು ನಿರ್ದೇಶಕರು ಕೂಡ ಬಹುಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಈಗ ಕಾಲಿವುಡ್​ ನಿರ್ದೇಶಕ ಅಟ್ಲಿ ಅವರ ಸಂಭಾವನೆ (Atlee Remuneration) ಬಗ್ಗೆ ಸುದ್ದಿ ಕೇಳಿಬರುತ್ತಿದೆ. ಕಳೆದ ವರ್ಷ ‘ಜವಾನ್​’ ಸಿನಿಮಾ ಮೂಲಕ ಬಹುದೊಡ್ಡ ಗೆಲುವು ಪಡೆದ ಅಟ್ಲಿ (Atlee) ಅವರಿಗೆ ಈಗ ಸಖತ್​ ಬೇಡಿಕೆ ಇದೆ. ಆ ಬೇಡಿಕೆಗೆ ತಕ್ಕಂತೆ ಅವರು ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಅವರು ಅಲ್ಲು ಅರ್ಜುನ್​ (Allu Arjun) ಜೊತೆ ಸಿನಿಮಾ ಮಾಡಲಿದ್ದಾರೆ. ಆ ಚಿತ್ರಕ್ಕಾಗಿ ಬರೋಬ್ಬರಿ 60 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎಂದು ಸುದ್ದಿ ಆಗಿದೆ.

ಅಲ್ಲು ಅರ್ಜುನ್​ ಅವರು ಈಗ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆದರೆ ಮುಂದಿನ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗುತ್ತದೆ. ಆ ಹೈಪ್​ಗೆ ತಕ್ಕಂತೆ ಸಿನಿಮಾ ಮಾಡಬೇಕು ಎಂದರೆ ನಿರ್ದೇಶಕರ ಮೇಲೆ ಒತ್ತಡ ಜಾಸ್ತಿ ಇರುತ್ತದೆ. ಹಾಗಾಗಿ ಅಟ್ಲಿ ಅವರು ಅಲ್ಲು ಅರ್ಜುನ್​ ಜೊತೆಗಿನ ಸಿನಿಮಾಗೆ ದೊಡ್ಡ ಸಂಭಾವನೆ ಡಿಮ್ಯಾಂಡ್​ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ಶಾರುಖ್​ ಕಾಲಿಗೆ ನಮಸ್ಕರಿಸಿದ ‘ಜವಾನ್​’ ನಿರ್ದೇಶಕ ಅಟ್ಲಿ; ಕಿಂಗ್ ಖಾನ್​ ಪ್ರತಿಕ್ರಿಯೆ ಏನು?

ಅಟ್ಲಿ ನಿರ್ದೇಶನ ಮಾಡಿದ ‘ಜವಾನ್’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಗಳಿಸಿತು. ಆ ಸಿನಿಮಾದಿಂದ ಶಾರುಖ್​ ಖಾನ್​ ಅವರ ಚಾರ್ಮ್​ ಹೆಚ್ಚಾಯಿತು. ಪ್ಯಾನ್​ ಇಂಡಿಯಾ ನಿರ್ದೇಶಕರಾಗಿ ಅಟ್ಲಿ ಹೊರಹೊಮ್ಮಿದರು. ಇತ್ತೀಚೆಗೆ ಅವರಿಗೆ ‘ಜೀ ಸಿನಿ ಅವಾರ್ಡ್ಸ್​’ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಸಿಕ್ಕಿತು. ಅವರ ಜೊತೆ ಸಿನಿಮಾ ಮಾಡಲು ಹಲವು ಸ್ಟಾರ್​ ನಟರು, ನಿರ್ಮಾಪಕರು ಕಾದಿದ್ದಾರೆ.

ಅಲ್ಲು ಅರ್ಜುನ್​ ಮತ್ತು ಅಟ್ಲಿ ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾ ಬಗ್ಗೆ ಹಲವು ದಿನಗಳಿಂದ ಅಂತೆ-ಕಂತೆಗಳು ಕೇಳಿಬರುತ್ತಿವೆ. ಈ ಸಿನಿಮಾ ಬಗ್ಗೆ ಅಧಿಕೃತವಾಗಿ ಯಾವುದೇ ಘೋಷಣೆ ಆಗಿಲ್ಲ. ಈಗ ಹೊಸ ನ್ಯೂಸ್​ ನೀಡುವ ಸಂದರ್ಭ ಹತ್ತಿರ ಆಗಿದೆ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಸದ್ಯ ವರುಣ್​ ಧವನ್​ ನಟನೆಯ ‘ಬೇಬಿ ಜಾನ್​’ ಸಿನಿಮಾಗೆ ಅಟ್ಲಿ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಮನೆಗೆ ಪದೇಪದೇ ಭೇಟಿ ನೀಡುತ್ತಿರುವ ಅಟ್ಲಿ; ಏನು ಸಮಾಚಾರ?

ಕಾಲಿವುಡ್​ನಲ್ಲಿ ಅಟ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ‘ರಾಜಾ ರಾಣಿ’, ‘ಥೇರಿ’, ‘ಮೆರ್ಸಲ್​’, ‘ಬಿಗಿಲ್​’ ಸಿನಿಮಾಗಳು ಅವರ ನಿರ್ದೇಶನದಲ್ಲಿ ಮೂಡಿಬಂದಿವೆ. ಬಾಲಿವುಡ್​ನಲ್ಲಿ ಅವರು ನಿರ್ದೇಶನ ಮಾಡಿದ ಮೊದಲ ಸಿನಿಮಾ ‘ಜವಾನ್’.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್