AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ಜತೆ ಸಿನಿಮಾ ಮಾಡಲು 60 ಕೋಟಿ ರೂ. ಸಂಬಳ ಕೇಳಿದ ಅಟ್ಲಿ?

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅಟ್ಲಿ ಅವರು ಬೇಡಿಕೆ ಹೊಂದಿದ್ದಾರೆ. ‘ಜವಾನ್​’ ಗೆಲುವಿನ ಬಳಿಕ ಅವರ ಸಂಭಾವನೆ ಹೆಚ್ಚಾಗಿದೆ. ಏಕಾಏಕಿ ಆಗಿ ಅವರು 60 ಕೋಟಿ ರೂಪಾಯಿ ಸಂಬಳ ಕೇಳುತ್ತಿದ್ದಾರೆ ಎಂಬ ಸುದ್ದಿ ಹರಡಿದೆ. ಅಲ್ಲು ಅರ್ಜುನ್​ ಜೊತೆ ಅಟ್ಲಿ ಸಿನಿಮಾ ಮಾಡಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಈ ಬಗ್ಗೆ ಅಧಿಕೃತವಾಗಿ ಘೋಷಣೆ ಆಗುವುದು ಬಾಕಿಯಿದೆ.

ಅಲ್ಲು ಅರ್ಜುನ್​ ಜತೆ ಸಿನಿಮಾ ಮಾಡಲು 60 ಕೋಟಿ ರೂ. ಸಂಬಳ ಕೇಳಿದ ಅಟ್ಲಿ?
ಅಲ್ಲು ಅರ್ಜುನ್​, ಅಟ್ಲಿ
ಮದನ್​ ಕುಮಾರ್​
|

Updated on: Mar 12, 2024 | 12:24 PM

Share

ಸ್ಟಾರ್​ ನಟರು ಮಾತ್ರವಲ್ಲದೇ ಕೆಲವು ನಿರ್ದೇಶಕರು ಕೂಡ ಬಹುಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಈಗ ಕಾಲಿವುಡ್​ ನಿರ್ದೇಶಕ ಅಟ್ಲಿ ಅವರ ಸಂಭಾವನೆ (Atlee Remuneration) ಬಗ್ಗೆ ಸುದ್ದಿ ಕೇಳಿಬರುತ್ತಿದೆ. ಕಳೆದ ವರ್ಷ ‘ಜವಾನ್​’ ಸಿನಿಮಾ ಮೂಲಕ ಬಹುದೊಡ್ಡ ಗೆಲುವು ಪಡೆದ ಅಟ್ಲಿ (Atlee) ಅವರಿಗೆ ಈಗ ಸಖತ್​ ಬೇಡಿಕೆ ಇದೆ. ಆ ಬೇಡಿಕೆಗೆ ತಕ್ಕಂತೆ ಅವರು ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಅವರು ಅಲ್ಲು ಅರ್ಜುನ್​ (Allu Arjun) ಜೊತೆ ಸಿನಿಮಾ ಮಾಡಲಿದ್ದಾರೆ. ಆ ಚಿತ್ರಕ್ಕಾಗಿ ಬರೋಬ್ಬರಿ 60 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎಂದು ಸುದ್ದಿ ಆಗಿದೆ.

ಅಲ್ಲು ಅರ್ಜುನ್​ ಅವರು ಈಗ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆದರೆ ಮುಂದಿನ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗುತ್ತದೆ. ಆ ಹೈಪ್​ಗೆ ತಕ್ಕಂತೆ ಸಿನಿಮಾ ಮಾಡಬೇಕು ಎಂದರೆ ನಿರ್ದೇಶಕರ ಮೇಲೆ ಒತ್ತಡ ಜಾಸ್ತಿ ಇರುತ್ತದೆ. ಹಾಗಾಗಿ ಅಟ್ಲಿ ಅವರು ಅಲ್ಲು ಅರ್ಜುನ್​ ಜೊತೆಗಿನ ಸಿನಿಮಾಗೆ ದೊಡ್ಡ ಸಂಭಾವನೆ ಡಿಮ್ಯಾಂಡ್​ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ಶಾರುಖ್​ ಕಾಲಿಗೆ ನಮಸ್ಕರಿಸಿದ ‘ಜವಾನ್​’ ನಿರ್ದೇಶಕ ಅಟ್ಲಿ; ಕಿಂಗ್ ಖಾನ್​ ಪ್ರತಿಕ್ರಿಯೆ ಏನು?

ಅಟ್ಲಿ ನಿರ್ದೇಶನ ಮಾಡಿದ ‘ಜವಾನ್’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಗಳಿಸಿತು. ಆ ಸಿನಿಮಾದಿಂದ ಶಾರುಖ್​ ಖಾನ್​ ಅವರ ಚಾರ್ಮ್​ ಹೆಚ್ಚಾಯಿತು. ಪ್ಯಾನ್​ ಇಂಡಿಯಾ ನಿರ್ದೇಶಕರಾಗಿ ಅಟ್ಲಿ ಹೊರಹೊಮ್ಮಿದರು. ಇತ್ತೀಚೆಗೆ ಅವರಿಗೆ ‘ಜೀ ಸಿನಿ ಅವಾರ್ಡ್ಸ್​’ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಸಿಕ್ಕಿತು. ಅವರ ಜೊತೆ ಸಿನಿಮಾ ಮಾಡಲು ಹಲವು ಸ್ಟಾರ್​ ನಟರು, ನಿರ್ಮಾಪಕರು ಕಾದಿದ್ದಾರೆ.

ಅಲ್ಲು ಅರ್ಜುನ್​ ಮತ್ತು ಅಟ್ಲಿ ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾ ಬಗ್ಗೆ ಹಲವು ದಿನಗಳಿಂದ ಅಂತೆ-ಕಂತೆಗಳು ಕೇಳಿಬರುತ್ತಿವೆ. ಈ ಸಿನಿಮಾ ಬಗ್ಗೆ ಅಧಿಕೃತವಾಗಿ ಯಾವುದೇ ಘೋಷಣೆ ಆಗಿಲ್ಲ. ಈಗ ಹೊಸ ನ್ಯೂಸ್​ ನೀಡುವ ಸಂದರ್ಭ ಹತ್ತಿರ ಆಗಿದೆ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಸದ್ಯ ವರುಣ್​ ಧವನ್​ ನಟನೆಯ ‘ಬೇಬಿ ಜಾನ್​’ ಸಿನಿಮಾಗೆ ಅಟ್ಲಿ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಮನೆಗೆ ಪದೇಪದೇ ಭೇಟಿ ನೀಡುತ್ತಿರುವ ಅಟ್ಲಿ; ಏನು ಸಮಾಚಾರ?

ಕಾಲಿವುಡ್​ನಲ್ಲಿ ಅಟ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ‘ರಾಜಾ ರಾಣಿ’, ‘ಥೇರಿ’, ‘ಮೆರ್ಸಲ್​’, ‘ಬಿಗಿಲ್​’ ಸಿನಿಮಾಗಳು ಅವರ ನಿರ್ದೇಶನದಲ್ಲಿ ಮೂಡಿಬಂದಿವೆ. ಬಾಲಿವುಡ್​ನಲ್ಲಿ ಅವರು ನಿರ್ದೇಶನ ಮಾಡಿದ ಮೊದಲ ಸಿನಿಮಾ ‘ಜವಾನ್’.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ