AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​

ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿ ಕೆಲವು ಸಮಯ ಕಳೆದಿತ್ತು. ಮಾರ್ಚ್​ 5ರಂದು ಇವರ ವಿಚ್ಛೇದನ ಅಧಿಕೃತವಾಗಿದೆ. ಇಬ್ಬರ ನಡುವೆ ಹೊಂದಾಣಿಕೆ ಸಾಧ್ಯವಾಗದ ಕಾರಣ ಡಿವೋರ್ಸ್​ ಸಿಕ್ಕಿದೆ.

ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​
ಕುಟುಂಬದ ಜತೆ ಬಾಲ
TV9 Web
| Edited By: |

Updated on:Mar 08, 2022 | 9:50 PM

Share

ಚಿತ್ರರಂಗದಲ್ಲಿ ಇತ್ತೀಚೆಗೆ ಸಾಕಷ್ಟು ಮಂದಿ ವಿಚ್ಛೇದನ (Divorce) ಪಡೆಯುತ್ತಿದ್ದಾರೆ. ಹಲವು ವರ್ಷಗಳ ಕಾಲ ಒಟ್ಟಿಗೆ ಸಂಸಾರ ನಡೆಸಿದವರು ಬೇರೆಬೇರೆ ಆಗುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ತಮಿಳಿನ ಖ್ಯಾತ ನಿರ್ದೇಶಕ ಬಾಲ (Director Bala). ಅವರು ಪತ್ನಿ ಮುತ್ತುಮಲಾರ್ (ಮಲಾರ್​)​ ಜತೆ ವಿಚ್ಛೇದನ ಪಡೆದಿದ್ದಾರೆ. ಮೂಲಗಳ ಪ್ರಕಾರ ಇಬ್ಬರ ನಡುವೆ ವೈಮನಸ್ಸು ಬೆಳೆದು ಹಲವು ವರ್ಷಗಳೇ ಕಳೆದಿದ್ದವು. ನಾಲ್ಕು ವರ್ಷಗಳ ಹಿಂದೆ ಇಬ್ಬರೂ ಬೇರೆಬೇರೆ ಉಳಿದುಕೊಂಡಿದ್ದರು. ಇವರು ಬೇರೆ ಆಗಿರುವ ವಿಚಾರ ಚಿತ್ರರಂಗದ ಅನೇಕರಿಗೆ ಶಾಕ್​ ನೀಡಿದೆ.

ನಾಲ್ಕು ವರ್ಷಗಳ ಹಿಂದೆ ಇಬ್ಬರೂ ಪ್ರತ್ಯೇಕವಾಗಿ ಇರುವ ನಿರ್ಧಾರಕ್ಕೆ ಬಂದರು. ಆ ಬಳಿಕ ಬಾಲ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದರು. ಮಲಾರ್​ ಅವರು ಚಿತ್ರರಂಗದ ಗಾಯಕಿಯರ ಜತೆ ಕಾಣಿಸಿಕೊಂಡಿದ್ದರು. ಈಗ ಇಬ್ಬರೂ ಅಧಿಕೃತವಾಗಿ ಬೇರೆ ಆಗಿದ್ದಾರೆ.

ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿ ಕೆಲವು ಸಮಯ ಕಳೆದಿತ್ತು. ಮಾರ್ಚ್​ 5ರಂದು ಇವರ ವಿಚ್ಛೇದನ ಅಧಿಕೃತವಾಗಿದೆ. ಇಬ್ಬರ ನಡುವೆ ಹೊಂದಾಣಿಕೆ ಸಾಧ್ಯವಾಗದ ಕಾರಣ ಡಿವೋರ್ಸ್​ ಸಿಕ್ಕಿದೆ. ಬಾಲ ಹಾಗೂ ಮಲಾರ್​ ಅವರು 2004ರ ಜುಲೈ 7ರಂದು ಮಧುರೈನಲ್ಲಿ ಮದುವೆ ಆಗಿದ್ದರು. 18 ವರ್ಷಗಳ ಕಾಲ ಒಟ್ಟಿಗೆ ಸಂಸಾರ ನಡೆಸಿದ ಇಬ್ಬರೂ ಈಗ ಬೇರೆ ಆಗಿದ್ದಾರೆ. ಇವರಿಗೆ ಪ್ರಾರ್ಥನಾ ಹೆಸರಿನ ಹೆಣ್ಣು ಮಗಳು ಇದ್ದಾಳೆ.

ಬಾಲ ಅವರು ಕೊನೆಯದಾಗಿ ನಿರ್ದೇಶನ ಮಾಡಿದ್ದು ಧ್ರುವ ವಿಕ್ರಮ್​ ಅವರ ‘ವರ್ಮ’ ಸಿನಿಮಾವನ್ನು. ತೆಲುಗಿನಲ್ಲಿ ತೆರೆಗೆ ಬಂದ ‘ಅರ್ಜುನ್​ ರೆಡ್ಡಿ’ ಚಿತ್ರದ ತಮಿಳು ರಿಮೇಕ್​ ಇದಾಗಿದೆ. ಸೂರ್ಯ ನಟನೆಯ ಮುಂದಿನ ಚಿತ್ರಕ್ಕೆ ಬಾಲ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಸ್ಕ್ರಿಪ್ಟ್​ ಕೆಲಸಗಳು ಪ್ರಗತಿಯಲ್ಲಿವೆ.

ಹಲವು ಸ್ಟಾರ್​ಗಳ ವಿಚ್ಛೇದನ

ಸಮಂತಾ ಹಾಗೂ ನಾಗ ಚೈತನ್ಯ ಇಬ್ಬರೂ 4 ವರ್ಷಗಳ ಕಾಲ ಸುಖಸಂಸಾರ ನಡೆಸಿದ್ದರು. ಆ ಬಳಿಕ ಇಬ್ಬರೂ ಬೇರೆ ಆದರು. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ದಂಪತಿ ವಿಚ್ಛೇದನ ಪಡೆದಿರುವ ಬಗ್ಗೆ ಘೋಷಣೆ ಮಾಡಿದರು. ಇದು ಶಾಕಿಂಗ್ ಆಗಿತ್ತು. ಇದಲ್ಲದೆ, ಖ್ಯಾತ ನಟ ಧನುಷ್ ಹಾಗೂ ಅವರ ಪತ್ನಿ, ರಜನಿಕಾಂತ್​ ಮಗಳು ಐಶ್ವರ್ಯಾ ಕೂಡ ವಿಚ್ಛೇದನ ಪಡೆದು ಬೇರೆ ಆದರು. ಈಗ ಬಾಲ ಕೂಡ ವಿಚ್ಛೇದನ ಪಡೆದು ಪತ್ನಿಯಿಂದ ದೂರವಾಗಿದ್ದಾರೆ.

ಇದನ್ನೂ ಓದಿ: ವಿಚ್ಛೇದನದ ಬಳಿಕವೂ ಒಂದೇ ಹೋಟೆಲ್​ನಲ್ಲಿ ಉಳಿದುಕೊಳ್ಳುತ್ತಿದ್ದಾರೆ ಧನುಷ್​-ಐಶ್ವರ್ಯಾ? 

ವಿಚ್ಛೇದನದ ನಂತರವೂ ಸಮಂತಾ ಮೇಲೆ ಕಡಿಮೆಯಾಗಿಲ್ಲ ಗೌರವ; ಸ್ಯಾಮ್ ಬಗ್ಗೆ ನಾಗ ಚೈತನ್ಯ ಹಂಚಿಕೊಂಡ್ರು ಅಚ್ಚರಿಯ ಮಾಹಿತಿ

Published On - 9:48 pm, Tue, 8 March 22

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು