AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​

ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿ ಕೆಲವು ಸಮಯ ಕಳೆದಿತ್ತು. ಮಾರ್ಚ್​ 5ರಂದು ಇವರ ವಿಚ್ಛೇದನ ಅಧಿಕೃತವಾಗಿದೆ. ಇಬ್ಬರ ನಡುವೆ ಹೊಂದಾಣಿಕೆ ಸಾಧ್ಯವಾಗದ ಕಾರಣ ಡಿವೋರ್ಸ್​ ಸಿಕ್ಕಿದೆ.

ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​
ಕುಟುಂಬದ ಜತೆ ಬಾಲ
TV9 Web
| Edited By: |

Updated on:Mar 08, 2022 | 9:50 PM

Share

ಚಿತ್ರರಂಗದಲ್ಲಿ ಇತ್ತೀಚೆಗೆ ಸಾಕಷ್ಟು ಮಂದಿ ವಿಚ್ಛೇದನ (Divorce) ಪಡೆಯುತ್ತಿದ್ದಾರೆ. ಹಲವು ವರ್ಷಗಳ ಕಾಲ ಒಟ್ಟಿಗೆ ಸಂಸಾರ ನಡೆಸಿದವರು ಬೇರೆಬೇರೆ ಆಗುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ತಮಿಳಿನ ಖ್ಯಾತ ನಿರ್ದೇಶಕ ಬಾಲ (Director Bala). ಅವರು ಪತ್ನಿ ಮುತ್ತುಮಲಾರ್ (ಮಲಾರ್​)​ ಜತೆ ವಿಚ್ಛೇದನ ಪಡೆದಿದ್ದಾರೆ. ಮೂಲಗಳ ಪ್ರಕಾರ ಇಬ್ಬರ ನಡುವೆ ವೈಮನಸ್ಸು ಬೆಳೆದು ಹಲವು ವರ್ಷಗಳೇ ಕಳೆದಿದ್ದವು. ನಾಲ್ಕು ವರ್ಷಗಳ ಹಿಂದೆ ಇಬ್ಬರೂ ಬೇರೆಬೇರೆ ಉಳಿದುಕೊಂಡಿದ್ದರು. ಇವರು ಬೇರೆ ಆಗಿರುವ ವಿಚಾರ ಚಿತ್ರರಂಗದ ಅನೇಕರಿಗೆ ಶಾಕ್​ ನೀಡಿದೆ.

ನಾಲ್ಕು ವರ್ಷಗಳ ಹಿಂದೆ ಇಬ್ಬರೂ ಪ್ರತ್ಯೇಕವಾಗಿ ಇರುವ ನಿರ್ಧಾರಕ್ಕೆ ಬಂದರು. ಆ ಬಳಿಕ ಬಾಲ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದರು. ಮಲಾರ್​ ಅವರು ಚಿತ್ರರಂಗದ ಗಾಯಕಿಯರ ಜತೆ ಕಾಣಿಸಿಕೊಂಡಿದ್ದರು. ಈಗ ಇಬ್ಬರೂ ಅಧಿಕೃತವಾಗಿ ಬೇರೆ ಆಗಿದ್ದಾರೆ.

ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿ ಕೆಲವು ಸಮಯ ಕಳೆದಿತ್ತು. ಮಾರ್ಚ್​ 5ರಂದು ಇವರ ವಿಚ್ಛೇದನ ಅಧಿಕೃತವಾಗಿದೆ. ಇಬ್ಬರ ನಡುವೆ ಹೊಂದಾಣಿಕೆ ಸಾಧ್ಯವಾಗದ ಕಾರಣ ಡಿವೋರ್ಸ್​ ಸಿಕ್ಕಿದೆ. ಬಾಲ ಹಾಗೂ ಮಲಾರ್​ ಅವರು 2004ರ ಜುಲೈ 7ರಂದು ಮಧುರೈನಲ್ಲಿ ಮದುವೆ ಆಗಿದ್ದರು. 18 ವರ್ಷಗಳ ಕಾಲ ಒಟ್ಟಿಗೆ ಸಂಸಾರ ನಡೆಸಿದ ಇಬ್ಬರೂ ಈಗ ಬೇರೆ ಆಗಿದ್ದಾರೆ. ಇವರಿಗೆ ಪ್ರಾರ್ಥನಾ ಹೆಸರಿನ ಹೆಣ್ಣು ಮಗಳು ಇದ್ದಾಳೆ.

ಬಾಲ ಅವರು ಕೊನೆಯದಾಗಿ ನಿರ್ದೇಶನ ಮಾಡಿದ್ದು ಧ್ರುವ ವಿಕ್ರಮ್​ ಅವರ ‘ವರ್ಮ’ ಸಿನಿಮಾವನ್ನು. ತೆಲುಗಿನಲ್ಲಿ ತೆರೆಗೆ ಬಂದ ‘ಅರ್ಜುನ್​ ರೆಡ್ಡಿ’ ಚಿತ್ರದ ತಮಿಳು ರಿಮೇಕ್​ ಇದಾಗಿದೆ. ಸೂರ್ಯ ನಟನೆಯ ಮುಂದಿನ ಚಿತ್ರಕ್ಕೆ ಬಾಲ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಸ್ಕ್ರಿಪ್ಟ್​ ಕೆಲಸಗಳು ಪ್ರಗತಿಯಲ್ಲಿವೆ.

ಹಲವು ಸ್ಟಾರ್​ಗಳ ವಿಚ್ಛೇದನ

ಸಮಂತಾ ಹಾಗೂ ನಾಗ ಚೈತನ್ಯ ಇಬ್ಬರೂ 4 ವರ್ಷಗಳ ಕಾಲ ಸುಖಸಂಸಾರ ನಡೆಸಿದ್ದರು. ಆ ಬಳಿಕ ಇಬ್ಬರೂ ಬೇರೆ ಆದರು. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ದಂಪತಿ ವಿಚ್ಛೇದನ ಪಡೆದಿರುವ ಬಗ್ಗೆ ಘೋಷಣೆ ಮಾಡಿದರು. ಇದು ಶಾಕಿಂಗ್ ಆಗಿತ್ತು. ಇದಲ್ಲದೆ, ಖ್ಯಾತ ನಟ ಧನುಷ್ ಹಾಗೂ ಅವರ ಪತ್ನಿ, ರಜನಿಕಾಂತ್​ ಮಗಳು ಐಶ್ವರ್ಯಾ ಕೂಡ ವಿಚ್ಛೇದನ ಪಡೆದು ಬೇರೆ ಆದರು. ಈಗ ಬಾಲ ಕೂಡ ವಿಚ್ಛೇದನ ಪಡೆದು ಪತ್ನಿಯಿಂದ ದೂರವಾಗಿದ್ದಾರೆ.

ಇದನ್ನೂ ಓದಿ: ವಿಚ್ಛೇದನದ ಬಳಿಕವೂ ಒಂದೇ ಹೋಟೆಲ್​ನಲ್ಲಿ ಉಳಿದುಕೊಳ್ಳುತ್ತಿದ್ದಾರೆ ಧನುಷ್​-ಐಶ್ವರ್ಯಾ? 

ವಿಚ್ಛೇದನದ ನಂತರವೂ ಸಮಂತಾ ಮೇಲೆ ಕಡಿಮೆಯಾಗಿಲ್ಲ ಗೌರವ; ಸ್ಯಾಮ್ ಬಗ್ಗೆ ನಾಗ ಚೈತನ್ಯ ಹಂಚಿಕೊಂಡ್ರು ಅಚ್ಚರಿಯ ಮಾಹಿತಿ

Published On - 9:48 pm, Tue, 8 March 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ