AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ದಳಪತಿ ವಿಜಯ್ ಭೇಟಿಯಾದ ಲೋಕೇಶ್ ಕನಗರಾಜ್: ‘ಲಿಯೋ 2’ ನಿರೀಕ್ಷೆಯಲ್ಲಿ ಅಭಿಮಾನಿಗಳು

ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ತಮಿಳುನಾಡು ಸಿಎಂ ವಿಜಯ್ ಅವರನ್ನು ಭೇಟಿ ಮಾಡಿರುವ ಫೋಟೋ ವೈರಲ್ ಆಗಿದೆ. ಈ ಫೋಟೋ ನೋಡಿದ ಅಭಿಮಾನಿಗಳಿಗೆ ‘ಲಿಯೋ 2’ ಸಿನಿಮಾ ಬಗ್ಗೆ ಆಸೆ ಮೂಡಿದೆ. ಆದರೆ ವಿಜಯ್ ಅವರು ಈಗಾಗಲೇ ಚಿತ್ರರಂಗದಲ್ಲಿ ನಿವೃತ್ತಿ ಘೋಷಿಸಿದ್ದಾರೆ.

ಸಿಎಂ ದಳಪತಿ ವಿಜಯ್ ಭೇಟಿಯಾದ ಲೋಕೇಶ್ ಕನಗರಾಜ್: ‘ಲಿಯೋ 2’ ನಿರೀಕ್ಷೆಯಲ್ಲಿ ಅಭಿಮಾನಿಗಳು
Thalapathy Vijay, Lokesh Kanagaraj
ಮದನ್​ ಕುಮಾರ್​
|

Updated on: May 27, 2026 | 5:49 PM

Share

ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ನಟ ಸಿ. ಜೋಸೆಫ್ ವಿಜಯ್ (CM Vijay) ಅವರು ಇತ್ತೀಚೆಗೆ ಸಿನಿಮಾ ರಂಗದ ಪ್ರಮುಖರೊಂದಿಗೆ ಸಭೆ ನಡೆಸಿ, ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಅನುಮತಿ ನೀಡುವ ಮೂಲಕ ಕಾಲಿವುಡ್‌ಗೆ ದೊಡ್ಡ ರಿಲೀಫ್ ನೀಡಿದ್ದಾರೆ. ಇದರ ಬೆನ್ನಲ್ಲೇ ತಮಿಳಿನ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ (Lokesh Kanagaraj) ಅವರು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿಯಾಗಿದ್ದು, ಈ ಕ್ಷಣದ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಕೂಡಲೇ ಅಭಿಮಾನಿಗಳಿಗೆ ‘ಲಿಯೋ 2’ (Leo 2) ಸಿನಿಮಾದ ನಿರೀಕ್ಷೆ ಮೂಡಿದೆ.

ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ವಿಜಯ್ ಜೊತೆಗಿನ ಫೋಟೋ ಹಂಚಿಕೊಂಡಿರುವ ಲೋಕೇಶ್ ಅವರು, ಮುಗುಳ್ನಗುತ್ತಾ ಪೋಸ್ ನೀಡಿದ್ದಾರೆ. ‘ಗೌರವಾನ್ವಿತ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು ಅಣ್ಣಾ’ ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ. ಈ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಭಿಮಾನಿಗಳಿಂದ ತರಹೇವಾರಿ ಕಮೆಂಟ್‌ಗಳು ಹರಿದುಬರುತ್ತಿವೆ.

ಲೋಕೇಶ್ ಕನಗರಾಜ್ ಪೋಸ್ಟ್:

ಈ ಇಬ್ಬರ ಕಾಂಬಿನೇಷನ್‌ನ ಫೋಟೋ ನೋಡಿದ ಅಭಿಮಾನಿಯೊಬ್ಬರು, ‘ಇದೇನಾದರೂ 2024ರಲ್ಲಿ ಆಗಿದ್ದರೆ, ನಾನು ಇದನ್ನು ‘ಲಿಯೋ 2’ ಚಿತ್ರದ ಅನೌನ್ಸ್‌ಮೆಂಟ್ ಫೋಟೋ ಎಂದು ಭಾವಿಸುತ್ತಿದ್ದೆ. ಆದರೆ ದೇವರ ಲೆಕ್ಕಾಚಾರವೇ ಬೇರೆ ಇತ್ತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮತ್ತೊಬ್ಬ ಅಭಿಮಾನಿ, ‘ನೀವಿಬ್ಬರು ಸೇರಿ ಮತ್ತೊಂದು ಸಿನಿಮಾ ಮಾಡಬೇಕಿತ್ತು. ಲಿಯೋ ಮತ್ತು ಮಾಸ್ಟರ್ ಸಿನಿಮಾಗಳಿಗೆ ಧನ್ಯವಾದಗಳು’ ಎಂದು ಕಮೆಂಟ್ ಮಾಡಿದ್ದಾರೆ. ‘ನೀವು ವಿಜಯ್ ಅವರ ಬಳಿ ಲಿಯೋ ಸೀಕ್ವೆಲ್ ಬಗ್ಗೆ ಕೇಳಿದಿರಾ? ರಾಜಕೀಯಕ್ಕೆ ಹೋಗುವ ಮುನ್ನ ಅವರ ಕೊನೆಯ ಸಿನಿಮಾ ಇದಾಗಬೇಕಿತ್ತು’ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ವಿಜಯ್ ಅವರು ಲೋಕೇಶ್ ಕನಗರಾಜ್ ನಿರ್ದೇಶನದಲ್ಲಿ ‘ಮಾಸ್ಟರ್’ (2021) ಮತ್ತು ‘ಲಿಯೋ’ (2023) ಸಿನಿಮಾಗಳನ್ನು ನೀಡಿದ್ದಾರೆ. ‘ಲಿಯೋ’ ಚಿತ್ರವು ಲೋಕೇಶ್ ಸಿನಿಮ್ಯಾಟಿಕ್ ಯೂನಿವರ್ಸ್ (LCU) ಭಾಗವಾಗಿತ್ತು. ಈ ಹಿಂದೆ ಲೋಕೇಶ್ ಅವರು ‘ಲಿಯೋ 2’ ಮಾಡಲು ಆಸಕ್ತಿ ಹೊಂದಿದ್ದರಾದರೂ, ನಂತರದ ದಿನಗಳಲ್ಲಿ ವಿಜಯ್ ಜೊತೆ ‘ಮಾಸ್ಟರ್ 2’ ಮಾಡಲು ಹೆಚ್ಚು ಒಲವು ತೋರಿದ್ದರು. ಆದರೆ ವಿಜಯ್ ಅವರು ಸಿನಿಮಾ ರಂಗದಿಂದ ಸಂಪೂರ್ಣ ನಿವೃತ್ತಿ ಘೋಷಿಸಿದ ಕಾರಣ, ಲೋಕೇಶ್ ಕನಗರಾಜ್ ಅವರು ವಿಜಯ್ ಜೊತೆಗಿನ ಮುಂದಿನ ಸೀಕ್ವೆಲ್ ಯೋಜನೆಗಳನ್ನು ಕೈಬಿಟ್ಟಿರುವುದಾಗಿ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಸಿಎಂ ವಿಜಯ್ ಭೇಟಿ ಮಾಡಿ 6 ಬೇಡಿಕೆ ಇಟ್ಟ ನಟ ಕಮಲ್ ಹಾಸನ್; ಏನದು?

ರಾಜಕೀಯದತ್ತ ಸಂಪೂರ್ಣ ಗಮನ ಹರಿಸಲು ನಿರ್ಧರಿಸಿರುವ ವಿಜಯ್ ಅವರು, ‘ಜನ ನಾಯಗನ್’ ಆಡಿಯೋ ಲಾಂಚ್ ವೇಳೆ ಚಿತ್ರರಂಗದ ನಿವೃತ್ತಿ ಘೋಷಿಸಿದ್ದರು. ‘ಜನ ನಾಯಗನ್’ ಸಿನಿಮಾ ಜನವರಿ 9ರಂದೇ ಬಿಡುಗಡೆಯಾಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿಯಿಂದ ಸಮಯಕ್ಕೆ ಸರಿಯಾಗಿ ಪ್ರಮಾಣಪತ್ರ ಸಿಗದ ಕಾರಣ ಚಿತ್ರದ ರಿಲೀಸ್ ಮುಂದೂಡಲ್ಪಟ್ಟಿತ್ತು. ಪೂಜಾ ಹೆಗ್ಡೆ, ಮಮಿತಾ ಬೈಜು ಮತ್ತು ಬಾಬಿ ಡಿಯೋಲ್ ನಟಿಸಿರುವ ಈ ಬಹುನಿರೀಕ್ಷಿತ ಸಿನಿಮಾ ಜೂನ್ 19ರಂದು ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಆದರೆ ಚಿತ್ರತಂಡದಿಂದ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ