AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಗೆಳೆಯರ ದಿನವಲ್ಲ ವೈರಿಗಳ ದಿನ ಎಂದ ರಾಮ್​ ಗೋಪಾಲ್​ ವರ್ಮಾ

ಪ್ರತಿ ವರ್ಷ ಆಗಸ್ಟ್​ ತಿಂಗಳ ಮೊದಲ ಭಾನುವಾರವನ್ನು ಅಂತಾರಾಷ್ಟ್ರೀಯ ಫ್ರೆಂಡ್​ಶಿಪ್​ ಡೇ ಎಂದು ಆಚರಣೆ ಮಾಡಲಾಗುತ್ತದೆ. ಈ ಬಾರಿ ಫ್ರೆಂಡ್​ಶಿಪ್​ ಡೇ ಆಗಸ್ಟ್​ 1ಕ್ಕೆ ಬಂದಿದೆ.

ಇದು ಗೆಳೆಯರ ದಿನವಲ್ಲ ವೈರಿಗಳ ದಿನ ಎಂದ ರಾಮ್​ ಗೋಪಾಲ್​ ವರ್ಮಾ
ರಾಮ್​ ಗೋಪಾಲ್​ ವರ್ಮಾ
TV9 Web
| Edited By: |

Updated on: Aug 01, 2021 | 6:05 PM

Share

ತೆಲುಗು ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಅವರು ಕೆಲ ವಿಚಾರದ ಬಗ್ಗೆ ನೀಡುವ ಹೇಳಿಕೆಗಳು ಚಿತ್ರ ವಿಚಿತ್ರವಾಗಿರುತ್ತದೆ ಎಂಬುದನ್ನು ಮತ್ತೆ ಬಿಡಿಸಿ ಹೇಳಬೇಕಿಲ್ಲ. ಈ ಬಾರಿ ಆರ್​ಜಿವಿ ಕಣ್ಣು ಫ್ರೆಂಡ್​ಶಿಪ್​ ಡೇ ಮೇಲೆ ಬಿದ್ದಿದೆ. ಈ ಬಗ್ಗೆ ಅವರು ವಿಚಿತ್ರ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ.

ಪ್ರತಿ ವರ್ಷ ಆಗಸ್ಟ್​ ತಿಂಗಳ ಮೊದಲ ಭಾನುವಾರವನ್ನು ಅಂತಾರಾಷ್ಟ್ರೀಯ ಫ್ರೆಂಡ್​ಶಿಪ್​ ಡೇ ಎಂದು ಆಚರಣೆ ಮಾಡಲಾಗುತ್ತದೆ. ಈ ಬಾರಿ ಫ್ರೆಂಡ್​ಶಿಪ್​ ಡೇ ಆಗಸ್ಟ್​ 1ಕ್ಕೆ ಬಂದಿದೆ. ಈ ವಿಶೇಷ ದಿನದಂದು ಎಲ್ಲರೂ ತಮ್ಮ ಜೀವನದಲ್ಲಿ ಎದುರಾದ ಆಪತ್​ಬಾಂಧವರನ್ನು ನೆನೆದಿದ್ದಾರೆ. ಟ್ವೀಟ್​ಗಳನ್ನು ಮಾಡುವ ಮೂಲಕ ಶುಭಕೋರಿದ್ದಾರೆ. ಗೆಳೆಯರ ದಿನದ ಬಗ್ಗೆ ಸಾಕಷ್ಟು ಮೀಮ್​ಗಳು ಕೂಡ ಹರಿದಾಡುತ್ತಿದೆ. ಈ ಮಧ್ಯೆ ರಾಮ್​ ಗೋಪಾಲ್​ ವರ್ಮಾ ಅವರ ಟ್ವೀಟ್​ ವೈರಲ್​ ಆಗಿದೆ. ಫ್ರೆಂಡ್​ಶಿಪ್​ ಡೇಅನ್ನು ಅವರು ವೈರಿಗಳ ದಿನ ಎಂದು ಕರೆದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್​ ಮಾಡಿರುವ ಅವರು, ‘ನೀವು ನಿಮ್ಮ ಗೆಳೆಯರಿಗೆ ಸಹಾಯ ಮಾಡಿದಿರಿ ಎಂದಿಟ್ಟುಕೊಳ್ಳು. ಮುಂದಿನ ಬಾರಿ ಆತ ನಿಮ್ಮ ಬಳಿಯೇ ಬರುತ್ತಾನೆ’ ಎಂದು ಬರೆದುಕೊಂಡು #HappyEnemyshipDay ಎನ್ನುವ ಹ್ಯಾಷ್​ಟ್ಯಾಗ್​ ಹಾಕಿದ್ದಾರೆ.

‘ವೈರಿಗಳಲ್ಲಿರುವ ಒಳ್ಳೆಯ ಗುಣ ಎಂದರೆ ಅವರು ನಿಮ್ಮನ್ನು ಅರ್ಧದಲ್ಲಿಯೇ ಬಿಟ್ಟು ಹೋಗುವುದಿಲ್ಲ. #HappyEnemyshipDay’ ಎಂದಿದ್ದಾರೆ ಆರ್​ಜಿವಿ. ‘ಶತ್ರುಗಳು ನಿಮ್ಮ ಬಲವನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಮತ್ತು ಸ್ನೇಹಿತರು ನಿಮ್ಮ ವಿಶ್ವಾಸವನ್ನು ಕಳೆದು ಹಾಕುವಂತೆ ಮಾಡುತ್ತಾರೆ’ ಎಂದಿದ್ದಾರೆ. ಈ ಟ್ವೀಟ್​ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿವೆ.

ಇದನ್ನೂ ಓದಿ: ಇದು ನನ್ನ ಬರ್ತ್​ಡೇ ಅಲ್ಲ; ಡೆತ್​ ಡೇ! ಹುಟ್ಟುಹಬ್ಬದ ದಿನವೇ ರಾಮ್​ ಗೋಪಾಲ್​ ವರ್ಮಾ ಶಾಕಿಂಗ್​ ಮಾತು

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!