ಇದು ಗೆಳೆಯರ ದಿನವಲ್ಲ ವೈರಿಗಳ ದಿನ ಎಂದ ರಾಮ್​ ಗೋಪಾಲ್​ ವರ್ಮಾ

ಪ್ರತಿ ವರ್ಷ ಆಗಸ್ಟ್​ ತಿಂಗಳ ಮೊದಲ ಭಾನುವಾರವನ್ನು ಅಂತಾರಾಷ್ಟ್ರೀಯ ಫ್ರೆಂಡ್​ಶಿಪ್​ ಡೇ ಎಂದು ಆಚರಣೆ ಮಾಡಲಾಗುತ್ತದೆ. ಈ ಬಾರಿ ಫ್ರೆಂಡ್​ಶಿಪ್​ ಡೇ ಆಗಸ್ಟ್​ 1ಕ್ಕೆ ಬಂದಿದೆ.

ಇದು ಗೆಳೆಯರ ದಿನವಲ್ಲ ವೈರಿಗಳ ದಿನ ಎಂದ ರಾಮ್​ ಗೋಪಾಲ್​ ವರ್ಮಾ
ರಾಮ್​ ಗೋಪಾಲ್​ ವರ್ಮಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 01, 2021 | 6:05 PM

ತೆಲುಗು ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಅವರು ಕೆಲ ವಿಚಾರದ ಬಗ್ಗೆ ನೀಡುವ ಹೇಳಿಕೆಗಳು ಚಿತ್ರ ವಿಚಿತ್ರವಾಗಿರುತ್ತದೆ ಎಂಬುದನ್ನು ಮತ್ತೆ ಬಿಡಿಸಿ ಹೇಳಬೇಕಿಲ್ಲ. ಈ ಬಾರಿ ಆರ್​ಜಿವಿ ಕಣ್ಣು ಫ್ರೆಂಡ್​ಶಿಪ್​ ಡೇ ಮೇಲೆ ಬಿದ್ದಿದೆ. ಈ ಬಗ್ಗೆ ಅವರು ವಿಚಿತ್ರ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ.

ಪ್ರತಿ ವರ್ಷ ಆಗಸ್ಟ್​ ತಿಂಗಳ ಮೊದಲ ಭಾನುವಾರವನ್ನು ಅಂತಾರಾಷ್ಟ್ರೀಯ ಫ್ರೆಂಡ್​ಶಿಪ್​ ಡೇ ಎಂದು ಆಚರಣೆ ಮಾಡಲಾಗುತ್ತದೆ. ಈ ಬಾರಿ ಫ್ರೆಂಡ್​ಶಿಪ್​ ಡೇ ಆಗಸ್ಟ್​ 1ಕ್ಕೆ ಬಂದಿದೆ. ಈ ವಿಶೇಷ ದಿನದಂದು ಎಲ್ಲರೂ ತಮ್ಮ ಜೀವನದಲ್ಲಿ ಎದುರಾದ ಆಪತ್​ಬಾಂಧವರನ್ನು ನೆನೆದಿದ್ದಾರೆ. ಟ್ವೀಟ್​ಗಳನ್ನು ಮಾಡುವ ಮೂಲಕ ಶುಭಕೋರಿದ್ದಾರೆ. ಗೆಳೆಯರ ದಿನದ ಬಗ್ಗೆ ಸಾಕಷ್ಟು ಮೀಮ್​ಗಳು ಕೂಡ ಹರಿದಾಡುತ್ತಿದೆ. ಈ ಮಧ್ಯೆ ರಾಮ್​ ಗೋಪಾಲ್​ ವರ್ಮಾ ಅವರ ಟ್ವೀಟ್​ ವೈರಲ್​ ಆಗಿದೆ. ಫ್ರೆಂಡ್​ಶಿಪ್​ ಡೇಅನ್ನು ಅವರು ವೈರಿಗಳ ದಿನ ಎಂದು ಕರೆದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್​ ಮಾಡಿರುವ ಅವರು, ‘ನೀವು ನಿಮ್ಮ ಗೆಳೆಯರಿಗೆ ಸಹಾಯ ಮಾಡಿದಿರಿ ಎಂದಿಟ್ಟುಕೊಳ್ಳು. ಮುಂದಿನ ಬಾರಿ ಆತ ನಿಮ್ಮ ಬಳಿಯೇ ಬರುತ್ತಾನೆ’ ಎಂದು ಬರೆದುಕೊಂಡು #HappyEnemyshipDay ಎನ್ನುವ ಹ್ಯಾಷ್​ಟ್ಯಾಗ್​ ಹಾಕಿದ್ದಾರೆ.

‘ವೈರಿಗಳಲ್ಲಿರುವ ಒಳ್ಳೆಯ ಗುಣ ಎಂದರೆ ಅವರು ನಿಮ್ಮನ್ನು ಅರ್ಧದಲ್ಲಿಯೇ ಬಿಟ್ಟು ಹೋಗುವುದಿಲ್ಲ. #HappyEnemyshipDay’ ಎಂದಿದ್ದಾರೆ ಆರ್​ಜಿವಿ. ‘ಶತ್ರುಗಳು ನಿಮ್ಮ ಬಲವನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಮತ್ತು ಸ್ನೇಹಿತರು ನಿಮ್ಮ ವಿಶ್ವಾಸವನ್ನು ಕಳೆದು ಹಾಕುವಂತೆ ಮಾಡುತ್ತಾರೆ’ ಎಂದಿದ್ದಾರೆ. ಈ ಟ್ವೀಟ್​ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿವೆ.

ಇದನ್ನೂ ಓದಿ: ಇದು ನನ್ನ ಬರ್ತ್​ಡೇ ಅಲ್ಲ; ಡೆತ್​ ಡೇ! ಹುಟ್ಟುಹಬ್ಬದ ದಿನವೇ ರಾಮ್​ ಗೋಪಾಲ್​ ವರ್ಮಾ ಶಾಕಿಂಗ್​ ಮಾತು

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ