AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RGV: ತಮ್ಮ ಸಹಿ ಫೋರ್ಜರಿ ಮಾಡಲಾಗಿದೆ ಎಂದು ಪೊಲೀಸ್​ ಠಾಣೆ ಮೆಟ್ಟಿಲೇರಿದ ರಾಮ್ ಗೋಪಾಲ್ ವರ್ಮಾ; ಏನಿದು ಪ್ರಕರಣ?

Ram Gopal Varma: ತಮ್ಮ ಸಹಿಯನ್ನು ನಕಲಿಸಿ ವಂಚನೆ ಮಾಡಲಾಗಿದೆ ಎಂದು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

RGV: ತಮ್ಮ ಸಹಿ ಫೋರ್ಜರಿ ಮಾಡಲಾಗಿದೆ ಎಂದು ಪೊಲೀಸ್​ ಠಾಣೆ ಮೆಟ್ಟಿಲೇರಿದ ರಾಮ್ ಗೋಪಾಲ್ ವರ್ಮಾ; ಏನಿದು ಪ್ರಕರಣ?
ರಾಮ್ ಗೋಪಾಲ್ ವರ್ಮಾ
Follow us
TV9 Web
| Updated By: shivaprasad.hs

Updated on: May 29, 2022 | 3:39 PM

ತಮ್ಮ ಸಹಿಯನ್ನು ಫೋರ್ಜರಿ (Forgery) ಮಾಡಲಾಗಿದೆ ಎಂದು ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಹೈದರಾಬಾದ್‌ನ ಪಂಜಗುಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಿರ್ಮಾಪಕರಾದ ನಟ್ಟಿ ಕ್ರಾಂತಿ ಹಾಗೂ ನಟ್ಟಿ ಕರುಣಾ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರ್​ಜಿವಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಹಲವು ದಾಖಲೆಗಳಲ್ಲಿ ನಕಲಿ ಸಹಿ ಹಾಕಿ ತಮಗೆ ವಂಚಿಸಿದ್ದಾರೆ ಎಂದು ನಿರ್ದೇಶಕ ಆರೋಪಿಸಿದ್ದಾರೆ. ನಟ್ಟಿಸ್ ಎಂಟರ್‌ಟೈನ್‌ಮೆಂಟ್ಸ್‌ಗೆ ಬಾಕಿ ಉಳಿದಿರುವ ಪಾವತಿಸದ ಕಾರಣ ಆರ್‌ಜಿವಿ ನಿರ್ದೇಶನದ ‘ಮಾ ಇಷ್ಟಂ’ ಚಿತ್ರ ಪ್ರದರ್ಶನಕ್ಕೆ ಸಿಟಿ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಈ ಬಗ್ಗೆ ಹೈದರಾಬಾದ್ ಟೈಮ್ಸ್‌ನೊಂದಿಗೆ ಮಾತನಾಡಿದ ಆರ್‌ಜಿವಿ, ‘ನಟ್ಟಿಸ್ ಎಂಟರ್‌ಟೈನ್‌ಮೆಂಟ್‌ನ ನಿರ್ಮಾಪಕರು ಅನೇಕ ದಾಖಲೆಗಳಲ್ಲಿ ಸಹಿಯನ್ನು ಫೋರ್ಜರಿ ಮಾಡಿದ್ದಾರೆ. ಅಲ್ಲದೇ ತಡೆಯಾಜ್ಞೆ ತರಲು ನಕಲಿ ಲೆಟರ್‌ಹೆಡ್‌ನೊಂದಿಗೆ ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ನಾನು ನನ್ನ ಮೂಲ ಲೆಟರ್‌ಹೆಡ್ ಮತ್ತು ಸಹಿಯ ಮಾದರಿಗಳನ್ನು ಪೊಲೀಸರಿಗೆ ಸಲ್ಲಿಸಿದ್ದೇನೆ ಮತ್ತು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಕೇಳಿಕೊಂಡಿದ್ದೇನೆ’ ಎಂದು ಆರ್​ಜಿವಿ ತಿಳಿಸಿದ್ದಾರೆ.

ಇತ್ತೀಚೆಗೆ ಆರ್​ಜಿವಿ ಪ್ರಕರಣವೊಂದಕ್ಕೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್:

ಇತ್ತೀಚೆಗೆ ಆರ್​ಜಿವಿ ವಿರುದ್ಧ ಒಂದು ದೂರು ದಾಖಲಾಗಿತ್ತು. ರಾಮ್​ ಗೋಪಾಲ್ ವರ್ಮಾ ಚಿತ್ರ ನಿರ್ಮಾಣಕ್ಕಾಗಿ ಪಡೆದ 56 ಲಕ್ಷ ರೂಪಾಯಿ ಸಾಲ ಮರಳಿಸದೇ ವಂಚಿಸಿದ್ದಾರೆ ಎಂದು ಆರೋಪಿಸಿ ನಿರ್ಮಾಪಕರೋರ್ವರು ದೂರು ನೀಡಿದ್ದರು. ಮಿಯಾಪುರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿತ್ತು. ಈ ಪ್ರಕರಣದ ಮುಂದಿನ ವಿಚಾರಣೆ ಜೂನ್ 17ಕ್ಕೆ ನಡೆಯಲಿದೆ.

ಇದನ್ನೂ ಓದಿ
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
Abhishek Ambareesh Movies: ಹೆಸರಿಗೆ ತಕ್ಕಂತೆ ‘ರೆಬಲ್’ ಅವತಾರ ತೊಟ್ಟ ಯಂಗ್ ರೆಬಲ್ ಸ್ಟಾರ್; ಅಭಿಷೇಕ್​ ಅಂಬರೀಷ್ 2 ಹೊಸ ಚಿತ್ರಗಳು ಅನೌನ್ಸ್
Image
Janhvi Kapoor: ಬ್ಯಾಕ್​​ಲೆಸ್​ ಫೋಟೋದಲ್ಲಿ ಮಿಂಚಿದ ಜಾನ್ವಿ ಕಪೂರ್
Image
ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ

ಇದನ್ನೂ ಓದಿ: Ram Gopal Varma: ರಾಮ್​ ಗೋಪಾಲ್ ವರ್ಮಾ ವಿರುದ್ಧ ವಂಚನೆ ಪ್ರಕರಣ ದಾಖಲು; ಚಿತ್ರ ನಿರ್ಮಿಸುತ್ತಿದ್ದೇನೆಂದು ಹೇಳಿ ಮೋಸ ಮಾಡಿದ್ರಾ ನಿರ್ದೇಶಕ?

ಆರ್​ಜಿವಿ ಕ್ರೈಮ್ ಡ್ರಾಮಾ ಚಿತ್ರವಾದ ‘ಸತ್ಯ’, ಥ್ರಿಲ್ಲರ್ ಚಿತ್ರ ‘ಕೌನ್’, ಗ್ಯಾಂಗ್‌ಸ್ಟರ್ ಚಿತ್ರಗಳಾದ ‘ಕಂಪನಿ’ ಮತ್ತು ‘ಸರ್ಕಾರ್’ ಮತ್ತು ಹಾರರ್ ಮಾದರಿಯ ‘ಭೂತ್‌’ನಂತಹ ಚಲನಚಿತ್ರಗಳಿಂದ ಖ್ಯಾತಿ ಗಳಿಸಿದ್ದಾರೆ. ಕನ್ನಡದ ‘ಕಿಲ್ಲಿಂಗ್ ವೀರಪ್ಪನ್’ ಚಿತ್ರವನ್ನೂ ಅವರು ನಿರ್ದೇಶಿಸಿದ್ದರು. ಉಪೇಂದ್ರ ನಟನೆಯ ‘ಐ ಆ್ಯಮ್​ ಆರ್​’ ಚಿತ್ರವನ್ನು ಆರ್​ಜಿವಿ ನಿರ್ದೇಶಿಸಬೇಕಿದೆ. ಅದು ಇತ್ತೀಚೆಗೆ ಅನೌನ್ಸ್ ಆಗಿತ್ತು. ಗ್ಯಾಂಗ್​ಸ್ಟರ್ ಕತೆಯನ್ನು ಚಿತ್ರ ಹೊಂದಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ