Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟಿಗನ ಜತೆ ಹಸೆಮಣೆ ಏರುತ್ತಿದ್ದಾರೆ ದಕ್ಷಿಣ ಭಾರತದ ಖ್ಯಾತ ನಿರ್ದೇಶಕನ ಮಗಳು

ರಜನಿಕಾಂತ್ ನಟನೆಯ ‘ಇಂದಿರನ್’, ಕಮಲ್ ಹಾಸನ್ ಅಭಿನಯದ ‘ಇಂಡಿಯನ್’ ನಂಥ ಹಿಟ್ ಚಿತ್ರಗಳನ್ನು ನೀಡಿದ ಎಸ್.ಶಂಕರ್ ಮಗಳು ಐಶ್ವರ್ಯಾ ಹಸೆಮಣೆ ಎರುತ್ತಿದ್ದಾರೆ.

ಕ್ರಿಕೆಟಿಗನ ಜತೆ ಹಸೆಮಣೆ ಏರುತ್ತಿದ್ದಾರೆ ದಕ್ಷಿಣ ಭಾರತದ ಖ್ಯಾತ ನಿರ್ದೇಶಕನ ಮಗಳು
ಐಶ್ವರ್ಯಾ-ರೋಹಿತ್​-ಶಂಕರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 26, 2021 | 7:13 PM

ಕ್ರಿಕೆಟ್ ಜಗತ್ತಿಗೂ ಹಾಗೂ ಚಿತ್ರರಂಗಕ್ಕೆ ಎಲ್ಲಿಲ್ಲದ ನಂಟು. ಈ ಮೊದಲು ಕ್ರಿಕೆಟ್ ಆಟಗಾರರು ಸಿನಿಮಾ ರಂಗದವರನ್ನು ವರಿಸಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮದುವೆ ಆಗಿದ್ದು ಇತ್ತೀಚಿನ ವರ್ಷಗಳ ಉದಾಹರಣೆ. ಈಗ ಖ್ಯಾತ ನಿರ್ದೇಶಕನ ಮಗಳು ಕ್ರಿಕೆಟಿಗನನ್ನು ಮದುವೆ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.

ರಜನಿಕಾಂತ್ ನಟನೆಯ ‘ಎಂದಿರನ್’, ಕಮಲ್ ಹಾಸನ್ ಅಭಿನಯದ ‘ಇಂಡಿಯನ್’ ನಂಥ ಹಿಟ್ ಚಿತ್ರಗಳನ್ನು ನೀಡಿದ ಎಸ್.ಶಂಕರ್ ಮಗಳು ಐಶ್ವರ್ಯಾ ಹಸೆಮಣೆ ಎರುತ್ತಿದ್ದಾರೆ. ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್ಪಿಎಲ್) ಆಟಗಾರ ರೋಹಿತ್ ದಾಮೋದರನ್ ಅವರನ್ನು ಜೂನ್ 27ರಂದು ಐಶ್ವರ್ಯಾ ಮಹಾಬಲಿಪುರಂನಲ್ಲಿ ವರಿಸುತ್ತಿದ್ದಾರೆ ಎನ್ನಲಾಗಿದೆ. ರೋಹಿತ್ ತಂದೆ ದಾಮೋದರನ್ ಉದ್ಯಮಿ. ಟಿಎನ್ಪಿಎಲ್ನಲ್ಲಿರುವ ‘ಮಧುರೈ ಪ್ಯಾಂಥರ್ಸ್’ ಫ್ರಾಂಚೈಸಿ ಒಡೆತನವನ್ನು ದಾಮೋದರನ್ ಹೊಂದಿದ್ದಾರೆ. ರೋಹಿತ್ ಈ ತಂಡವನ್ನು ಮುನ್ನಡೆಸುತ್ತಿದ್ದಾರೆ. ಐಶ್ವರ್ಯಾ ವೃತ್ತಿಯಲ್ಲಿ ವೈದ್ಯೆ.

ಕೊವಿಡ್ ಎರಡನೇ ಅಲೆ ಜೋರಾಗಿದೆ. ಈ ಕಾರಣಕ್ಕೆ ತಮಿಳುನಾಡಿನಲ್ಲಿ ಮದುವೆಯನ್ನು ಅದ್ದೂರಿಯಾಗಿ ನಡೆಸುವಂತಿಲ್ಲ. ಹೀಗಾಗಿ, ಆಪ್ತರ ಸಮ್ಮುಖದಲ್ಲಿ ರೋಹಿತ್-ಐಶ್ವರ್ಯಾ ಮದುವೆ ನಡೆಯಲಿದೆ. ಶಂಕರ್ ನಿರ್ದೇಶನದ ಸಿನಿಮಾಗಳು ಅದ್ದೂರಿಯಾಗಿ ಸಿದ್ಧಗೊಳ್ಳುತ್ತವೆ. ಇನ್ನು, ಚಿತ್ರದ ಸೆಟ್​ಗಳು ಕೂಡ ದೊಡ್ಡ ಮಟ್ಟದಲ್ಲಿ ಹಾಕಲಾಗುತ್ತದೆ. ಆದರೆ, ಮಗಳ ಮದುವೆಯನ್ನು ಯಾವುದೇ ಆಡಂಬರವಿಲ್ಲದೆ ಶಂಕರ್ ನೆರವೇರಿಸುತ್ತಿದ್ದಾರೆ.

1993ರಲ್ಲಿ ತೆರೆಗೆ ಬಂದ ‘ಜಂಟಲ್ಮ್ಯಾನ್’ ಸಿನಿಮಾ ಮೂಲಕ ಶಂಕರ್ ನಿರ್ದೇಶನಕ್ಕೆ ಕಾಲಿಟ್ಟರು. ವೃತ್ತಿಜೀವನದಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗಿದೆ. 2010ರಲ್ಲಿ ತೆರೆಗೆ ಬಂದ ‘ಎಂದಿರನ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಸದ್ಯ, ಅವರು ‘ಇಂಡಿಯನ್ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕಮಲ್ ಹಾಸನ್ ಈ ಚಿತ್ರದ ನಾಯಕ. ‘ಇಂಡಿಯನ್’ ಚಿತ್ರದ ಮುಂದಿನ ಭಾಗ ಇದಾಗಿದೆ.

ಇದನ್ನೂ ಓದಿ: Rajinikanth: ನಿವೃತ್ತಿ ಬಗ್ಗೆ ಕೊನೆಗೂ ಮೌನ ಮುರಿದ ರಜನಿಕಾಂತ್​; ಅವರ ಕೊನೆಯ ಚಿತ್ರ ಯಾವುದು?

ಕೊವಿಡ್​ ಇಳಿಮುಖ ಆಗುತ್ತಿದ್ದಂತೆಯೇ ವಿದೇಶಕ್ಕೆ ಹಾರಿದ ರಜನಿಕಾಂತ್​; ಕಾರಣ ಏನು?

Published On - 5:54 pm, Sat, 26 June 21

Daily Horoscope: ಸಿಂಹ ರಾಶಿಯವರಿಗೆ ಇಂದು ಧನಯೋಗ ಮತ್ತು ಆರ್ಥಿಕ ಪ್ರಗತಿ
Daily Horoscope: ಸಿಂಹ ರಾಶಿಯವರಿಗೆ ಇಂದು ಧನಯೋಗ ಮತ್ತು ಆರ್ಥಿಕ ಪ್ರಗತಿ
ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ