AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟಿಗನ ಜತೆ ಹಸೆಮಣೆ ಏರುತ್ತಿದ್ದಾರೆ ದಕ್ಷಿಣ ಭಾರತದ ಖ್ಯಾತ ನಿರ್ದೇಶಕನ ಮಗಳು

ರಜನಿಕಾಂತ್ ನಟನೆಯ ‘ಇಂದಿರನ್’, ಕಮಲ್ ಹಾಸನ್ ಅಭಿನಯದ ‘ಇಂಡಿಯನ್’ ನಂಥ ಹಿಟ್ ಚಿತ್ರಗಳನ್ನು ನೀಡಿದ ಎಸ್.ಶಂಕರ್ ಮಗಳು ಐಶ್ವರ್ಯಾ ಹಸೆಮಣೆ ಎರುತ್ತಿದ್ದಾರೆ.

ಕ್ರಿಕೆಟಿಗನ ಜತೆ ಹಸೆಮಣೆ ಏರುತ್ತಿದ್ದಾರೆ ದಕ್ಷಿಣ ಭಾರತದ ಖ್ಯಾತ ನಿರ್ದೇಶಕನ ಮಗಳು
ಐಶ್ವರ್ಯಾ-ರೋಹಿತ್​-ಶಂಕರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jun 26, 2021 | 7:13 PM

Share

ಕ್ರಿಕೆಟ್ ಜಗತ್ತಿಗೂ ಹಾಗೂ ಚಿತ್ರರಂಗಕ್ಕೆ ಎಲ್ಲಿಲ್ಲದ ನಂಟು. ಈ ಮೊದಲು ಕ್ರಿಕೆಟ್ ಆಟಗಾರರು ಸಿನಿಮಾ ರಂಗದವರನ್ನು ವರಿಸಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮದುವೆ ಆಗಿದ್ದು ಇತ್ತೀಚಿನ ವರ್ಷಗಳ ಉದಾಹರಣೆ. ಈಗ ಖ್ಯಾತ ನಿರ್ದೇಶಕನ ಮಗಳು ಕ್ರಿಕೆಟಿಗನನ್ನು ಮದುವೆ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.

ರಜನಿಕಾಂತ್ ನಟನೆಯ ‘ಎಂದಿರನ್’, ಕಮಲ್ ಹಾಸನ್ ಅಭಿನಯದ ‘ಇಂಡಿಯನ್’ ನಂಥ ಹಿಟ್ ಚಿತ್ರಗಳನ್ನು ನೀಡಿದ ಎಸ್.ಶಂಕರ್ ಮಗಳು ಐಶ್ವರ್ಯಾ ಹಸೆಮಣೆ ಎರುತ್ತಿದ್ದಾರೆ. ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್ಪಿಎಲ್) ಆಟಗಾರ ರೋಹಿತ್ ದಾಮೋದರನ್ ಅವರನ್ನು ಜೂನ್ 27ರಂದು ಐಶ್ವರ್ಯಾ ಮಹಾಬಲಿಪುರಂನಲ್ಲಿ ವರಿಸುತ್ತಿದ್ದಾರೆ ಎನ್ನಲಾಗಿದೆ. ರೋಹಿತ್ ತಂದೆ ದಾಮೋದರನ್ ಉದ್ಯಮಿ. ಟಿಎನ್ಪಿಎಲ್ನಲ್ಲಿರುವ ‘ಮಧುರೈ ಪ್ಯಾಂಥರ್ಸ್’ ಫ್ರಾಂಚೈಸಿ ಒಡೆತನವನ್ನು ದಾಮೋದರನ್ ಹೊಂದಿದ್ದಾರೆ. ರೋಹಿತ್ ಈ ತಂಡವನ್ನು ಮುನ್ನಡೆಸುತ್ತಿದ್ದಾರೆ. ಐಶ್ವರ್ಯಾ ವೃತ್ತಿಯಲ್ಲಿ ವೈದ್ಯೆ.

ಕೊವಿಡ್ ಎರಡನೇ ಅಲೆ ಜೋರಾಗಿದೆ. ಈ ಕಾರಣಕ್ಕೆ ತಮಿಳುನಾಡಿನಲ್ಲಿ ಮದುವೆಯನ್ನು ಅದ್ದೂರಿಯಾಗಿ ನಡೆಸುವಂತಿಲ್ಲ. ಹೀಗಾಗಿ, ಆಪ್ತರ ಸಮ್ಮುಖದಲ್ಲಿ ರೋಹಿತ್-ಐಶ್ವರ್ಯಾ ಮದುವೆ ನಡೆಯಲಿದೆ. ಶಂಕರ್ ನಿರ್ದೇಶನದ ಸಿನಿಮಾಗಳು ಅದ್ದೂರಿಯಾಗಿ ಸಿದ್ಧಗೊಳ್ಳುತ್ತವೆ. ಇನ್ನು, ಚಿತ್ರದ ಸೆಟ್​ಗಳು ಕೂಡ ದೊಡ್ಡ ಮಟ್ಟದಲ್ಲಿ ಹಾಕಲಾಗುತ್ತದೆ. ಆದರೆ, ಮಗಳ ಮದುವೆಯನ್ನು ಯಾವುದೇ ಆಡಂಬರವಿಲ್ಲದೆ ಶಂಕರ್ ನೆರವೇರಿಸುತ್ತಿದ್ದಾರೆ.

1993ರಲ್ಲಿ ತೆರೆಗೆ ಬಂದ ‘ಜಂಟಲ್ಮ್ಯಾನ್’ ಸಿನಿಮಾ ಮೂಲಕ ಶಂಕರ್ ನಿರ್ದೇಶನಕ್ಕೆ ಕಾಲಿಟ್ಟರು. ವೃತ್ತಿಜೀವನದಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗಿದೆ. 2010ರಲ್ಲಿ ತೆರೆಗೆ ಬಂದ ‘ಎಂದಿರನ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಸದ್ಯ, ಅವರು ‘ಇಂಡಿಯನ್ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕಮಲ್ ಹಾಸನ್ ಈ ಚಿತ್ರದ ನಾಯಕ. ‘ಇಂಡಿಯನ್’ ಚಿತ್ರದ ಮುಂದಿನ ಭಾಗ ಇದಾಗಿದೆ.

ಇದನ್ನೂ ಓದಿ: Rajinikanth: ನಿವೃತ್ತಿ ಬಗ್ಗೆ ಕೊನೆಗೂ ಮೌನ ಮುರಿದ ರಜನಿಕಾಂತ್​; ಅವರ ಕೊನೆಯ ಚಿತ್ರ ಯಾವುದು?

ಕೊವಿಡ್​ ಇಳಿಮುಖ ಆಗುತ್ತಿದ್ದಂತೆಯೇ ವಿದೇಶಕ್ಕೆ ಹಾರಿದ ರಜನಿಕಾಂತ್​; ಕಾರಣ ಏನು?

Published On - 5:54 pm, Sat, 26 June 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ