AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳನ್ನು ಸೂರ್ಯ-ಜ್ಯೋತಿಕಾ ದಂಪತಿಯ ಕೈಗೆ ಒಪ್ಪಿಸಿದ ಸ್ಟಾರ್​ ನಿರ್ದೇಶಕ; ಏನಾಗಲಿದೆ ಅದಿತಿ ಶಂಕರ್​ ಭವಿಷ್ಯ?

1993ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ನಿರ್ದೇಶಕ ಶಂಕರ್​ ಅವರು ಇಂದಿಗೂ ಅದೇ ಬೇಡಿಕೆಯನ್ನು ಉಳಿಸಿಕೊಂಡಿದ್ದಾರೆ. ಈಗ ಅವರ ಮಗಳು ಅದಿತಿ ಶಂಕರ್​ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ.

ಮಗಳನ್ನು ಸೂರ್ಯ-ಜ್ಯೋತಿಕಾ ದಂಪತಿಯ ಕೈಗೆ ಒಪ್ಪಿಸಿದ ಸ್ಟಾರ್​ ನಿರ್ದೇಶಕ; ಏನಾಗಲಿದೆ ಅದಿತಿ ಶಂಕರ್​ ಭವಿಷ್ಯ?
ಜ್ಯೋತಿಕಾ, ಸೂರ್ಯ, ಅದಿತಿ, ಶಂಕರ್​
TV9 Web
| Edited By: |

Updated on: Sep 06, 2021 | 9:09 AM

Share

ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಶೈಲಿಯ ಸಿನಿಮಾಗಳ ಮೂಲಕ ಗುರುತಿಸಿಕೊಂಡವರು ನಿರ್ದೇಶಕ ಶಂಕರ್​. ಕಮಲ್​ ಹಾಸನ್​, ರಜನಿಕಾಂತ್​ ಮುಂತಾದ ಸ್ಟಾರ್​ ಕಲಾವಿದರ ಜೊತೆ ಹಿಟ್​ ಸಿನಿಮಾಗಳನ್ನು ನೀಡಿದ್ದು ಶಂಕರ್​ ಹೆಗ್ಗಳಿಕೆ. ಇಂಡಿಯನ್​, ಅನ್ನಿಯನ್​, ಜಂಟಲ್​ಮ್ಯಾನ್​, ಕಾದಲನ್​ ಮುಂತಾದ ಸಿನಿಮಾಗಳ ಮೂಲಕ ಶಂಕರ್​ ಪ್ರೇಕ್ಷಕರ ಮನ ಗೆದ್ದರು. 1993ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಇಂದಿಗೂ ಅದೇ ಬೇಡಿಕೆಯನ್ನು ಉಳಿಸಿಕೊಂಡಿದ್ದಾರೆ. ಈಗ ಅವರ ಮಗಳು ಅದಿತಿ ಶಂಕರ್​ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಅವರನ್ನು ಲಾಂಚ್​ ಮಾಡುವ ಹೊಣೆಯನ್ನು ಕಾಲಿವುಡ್​ ಸ್ಟಾರ್​ ದಂಪತಿಗಳಾದ ಸೂರ್ಯ ಮತ್ತು ಜ್ಯೋತಿಕಾ ಹೊತ್ತಿಕೊಂಡಿದ್ದಾರೆ.

ಸೂರ್ಯ ಮತ್ತು ಜ್ಯೋತಿಕಾ ಒಡೆತನದ 2ಡಿ ಎಂಟರ್​ಟೇನ್ಮೆಂಟ್​ ಬ್ಯಾನರ್​ನಲ್ಲಿ ‘ವಿರುಮಾನ್​’ ಸಿನಿಮಾ ಸೆಟ್ಟೇರಿದೆ. ಆ ಚಿತ್ರಕ್ಕೆ ಸೂರ್ಯ ಸಹೋದರ ಕಾರ್ತಿ ಹೀರೋ. ಅವರಿಗೆ ಜೋಡಿಯಾಗಿ ಶಂಕರ್​ ಪುತ್ರಿ ಅದಿತಿ ಜೋಡಿಯಾಗುತ್ತಿದ್ದಾರೆ. ಚೊಚ್ಚಲ ಸಿನಿಮಾದಲ್ಲಿಯೇ ಇಂಥ ದೊಡ್ಡ ಬ್ಯಾನರ್​ನ ಜೊತೆ ಕೆಲಸ ಮಾಡುವ ಅವಕಾಶ ಅದಿತಿಗೆ ಸಿಕ್ಕಂತಾಗಿದೆ. ಒಳ್ಳೆಯ ಟೀಮ್​ಗೆ ಮಗಳನ್ನು ಸೇರಿಸಿ, ನಿರ್ದೇಶಕ ಶಂಕರ್​ ಈಗ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.

‘ನನ್ನ ಮಗಳನ್ನು ಲಾಂಚ್​ ಮಾಡುತ್ತಿರುವುದಕ್ಕೆ ಸೂರ್ಯ ಮತ್ತು ಜ್ಯೋತಿಕಾಗೆ ಧನ್ಯವಾದಗಳು. ನಿಮ್ಮ ಸಂಸ್ಥೆಯಿಂದ ಯಾವಾಗಲೂ ಗುಣಮಟ್ಟದ ಸಿನಿಮಾಗಳೇ ಮೂಡಿಬಂದಿವೆ. ಸಂಪೂರ್ಣ ತಯಾರಿ ಮಾಡಿಕೊಂಡು ಚಿತ್ರರಂಗಕ್ಕೆ ಕಾಲಿಡುತ್ತಿರುವ ನನ್ನ ಮಗಳಿಗೆ ಸಿನಿಪ್ರಿಯರು ಪ್ರೀತಿ ತೋರಿಸುತ್ತಾರೆ ಅಂತ ನಂಬಿದ್ದೇನೆ’ ಎಂದು ಶಂಕರ್​ ಟ್ವೀಟ್​ ಮಾಡಿ​ದ್ದಾರೆ.

ಹೊಸ ಸಿನಿಮಾ ಬಗ್ಗೆ ಟ್ವೀಟ್​ ಮಾಡಿರುವ ಸೂರ್ಯ ಅವರು ತಮ್ಮ ತಂಡಕ್ಕೆ ಅದಿತಿಯನ್ನು ಸ್ವಾಗತಿಸಿದ್ದಾರೆ. ‘ನಿಮಗೆ ಸುಸ್ವಾಗತ. ನೀವು ಎಲ್ಲರ ಹೃದಯ ಗೆಲ್ಲುತ್ತೀರಿ. ದೇವರು ಒಳ್ಳೆಯದು ಮಾಡಲಿ’ ಎಂದು ಸೂರ್ಯ ಹಾರೈಸಿದ್ದಾರೆ. ‘ಈ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು. ನಾನು ನಿಮಗೆ ಹೆಮ್ಮೆ ತರುವಂತಹ ಕೆಲಸ ಮಾಡುತ್ತೇನೆ. ಶೇ.100ರಷ್ಟು ಶ್ರಮಪಡುತ್ತೇನೆ’ ಎಂದು ನಟಿ ಅದಿತಿ ಶಂಕರ್​ ಭರವಸೆ ನೀಡಿದ್ದಾರೆ.

ಇದನ್ನೂ ಓದಿ:

‘ಜೈ ಭೀಮ್​’ ಎನ್ನುತ್ತ ಕರ್ನಾಟಕದಲ್ಲೂ ಸದ್ದು ಮಾಡಲು ಸಜ್ಜಾದ ತಮಿಳು ಸ್ಟಾರ್​ ನಟ ಸೂರ್ಯ

ಜೈ ಭೀಮ್; ಸೂರ್ಯ ನಟನೆಯ ಹೊಸ ಚಿತ್ರದ ಕಥೆ ಬಗ್ಗೆ ಸಿಕ್ತು ಮಹತ್ವದ ಸುಳಿವು; ಪಾತ್ರ ರಿವೀಲ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ