AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಸೋತ ಬೆನ್ನಲ್ಲೇ ಕಮಲ್​ ಹಾಸನ್​ ಮೇಲೆ ಕೇಳಿಬಂತು ಆರೋಪ; ಕೋರ್ಟ್​ ಮೆಟ್ಟಿಲೇರಿದ ದೊಡ್ಡವರ ಕಿರಿಕ್​

Kamal Haasan: ‘ಇಂಡಿಯನ್​ 2’ ಚಿತ್ರದ ಕೆಲಸಗಳು ಪೂರ್ಣವಾಗದ ಹೊರತು ನಿರ್ದೇಶಕ ಶಂಕರ್​ ಬೇರೆ ಯಾವುದೇ ಸಿನಿಮಾವನ್ನೂ ಮಾಡದಂತೆ ನಿಷೇಧ ಹೇರಬೇಕು ಎಂದು ಲೈಕಾ ಪ್ರೊಡಕ್ಷನ್​ ಸಂಸ್ಥೆ ದೂರು ಸಲ್ಲಿಸಿದೆ. ಇದಕ್ಕೆ ಪ್ರತಿಯಾಗಿ ಶಂಕರ್​ ಅವರು ತಮ್ಮ ವಾದ ಮಂಡಿಸಿದ್ದಾರೆ.

ಚುನಾವಣೆ ಸೋತ ಬೆನ್ನಲ್ಲೇ ಕಮಲ್​ ಹಾಸನ್​ ಮೇಲೆ ಕೇಳಿಬಂತು ಆರೋಪ; ಕೋರ್ಟ್​ ಮೆಟ್ಟಿಲೇರಿದ ದೊಡ್ಡವರ ಕಿರಿಕ್​
ಕಮಲ್ ಹಾಸನ್​
ಮದನ್​ ಕುಮಾರ್​
|

Updated on: May 13, 2021 | 9:10 AM

Share

ಸಿನಿಮಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಬಳಿಕ ನಟ ಕಮಲ್​ ಹಾಸನ್​ ಅವರು ರಾಜಕೀಯಕ್ಕೆ ಎಂಟ್ರಿ ನೀಡಿದರು. ಆದರೆ ಅವರಿಗೆ ಚುನಾವಣೆಯಲ್ಲಿ ಸೋಲು ಉಂಟಾಯಿತು. ಆ ಬೇಸರದ ಬೆನ್ನಲ್ಲೇ ಅವರ ಮೇಲೆ ಸ್ಟಾರ್​ ನಿರ್ದೇಶಕ ಶಂಕರ್​ ಅವರು ಒಂದು ಆರೋಪ ಹೊರಿಸಿದ್ದಾರೆ. ಬಹುನಿರೀಕ್ಷಿತ ‘ಇಂಡಿಯನ್​ 2’ ಸಿನಿಮಾ ತಂಡದಲ್ಲಿ ವಿವಾದ ಭುಗಿಲೆದ್ದುದ್ದು, ಅದೀಗ ಕೋರ್ಟ್​ ಮೆಟ್ಟಿಲೇರಿದೆ. ಈ ಚಿತ್ರದ ನಿರ್ದೇಶಕ ಶಂಕರ್​ ಮತ್ತು ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್​ ನಡುವೆ ದೊಡ್ಡ ಜಟಾಪಟಿ ಶುರುವಾಗಿದೆ.

2018ರಲ್ಲಿಯೇ ಇಂಡಿಯನ್ 2 ಸಿನಿಮಾದ ಶೂಟಿಂಗ್​ ಆರಂಭ ಆಗಿತ್ತು. ಆದರೆ ಪದೇಪದೇ ವಿಳಂಬವಾದ ಕಾರಣ ಇನ್ನೂ ಚಿತ್ರದ ಕೆಲಸಗಳು ಪೂರ್ಣಗೊಂಡಿಲ್ಲ. ಅಂದಾಜು 250 ಕೋಟಿ ರೂ. ಬಜೆಟ್​ನ ಈ ಸಿನಿಮಾದಲ್ಲಿ ಕಮಲ್​ ಹಾಸನ್​ ಅವರು ವಿಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೊದಲೇ ಬಿಡುಗಡೆಯಾದ ಪೋಸ್ಟರ್​ಗಳು ಸಿನಿಪ್ರಿಯರಲ್ಲಿ ಭಾರಿ ಕುತೂಹಲ ಮೂಡಿಸಿದ್ದವು. ಸದ್ಯಕ್ಕಂತೂ ಚಿತ್ರದ ಶೂಟಿಂಗ್​ ಮುಗಿಯುವಂತೆ ಕಾಣುತ್ತಿಲ್ಲ. ಸಿನಿಮಾ ತಡವಾಗುತ್ತಿರುವ ಕಾರಣಕ್ಕೆ ನಿರ್ಮಾಪಕರು ಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಚಿತ್ರದ ಕೆಲಸಗಳು ಪೂರ್ಣವಾಗದ ಹೊರತು ಶಂಕರ್​ ಬೇರೆ ಯಾವುದೇ ಸಿನಿಮಾವನ್ನೂ ನಿರ್ದೇಶನ ಮಾಡದಂತೆ ನಿಷೇಧ ಹೇರಬೇಕು ಎಂದು ಲೈಕಾ ಪ್ರೊಡಕ್ಷನ್​ ಸಂಸ್ಥೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಇದಕ್ಕೆ ಪ್ರತಿಯಾಗಿ ಶಂಕರ್​ ಅವರು ತಮ್ಮ ವಾದ ಮಂಡಿಸಿದ್ದಾರೆ. ಈ ಚಿತ್ರ ತಡವಾಗಲು ಲೈಕಾ ಪ್ರೊಡಕ್ಷನ್​ ಕಾರಣ ಎಂದು ಅವರು ಪ್ರತ್ಯಾರೋಪ ಮಾಡಿದ್ದಾರೆ. ಮೊದಲು ಒಪ್ಪಿಕೊಂಡು ಬಜೆಟ್​ಅನ್ನು ನಿರ್ಮಾಪಕರು ನೀಡಲಿಲ್ಲ. ಸೆಟ್​ನಲ್ಲಿ ಕ್ರೇನ್​ ಅನಾಹುತ ಸಂಭವಿಸಿತು. ಇಷ್ಟೇ ಅಲ್ಲದೆ, ಶೂಟಿಂಗ್​ ತಡವಾಗುವಲ್ಲಿ ಕಮಲ್​ ಹಾಸನ್​ ಕೂಡ ಕಾರಣರು ಎಂದು ಶಂಕರ್​ ಆರೋಪಿಸಿದ್ದಾರೆ.

ಹಾಗೋ ಹೀಗೋ ಚಿತ್ರೀಕರಣ ಆರಂಭಿಸಿದ ಬಳಿಕ ಕಮಲ್​ ಹಾಸನ್​ ಅವರಿಗೆ ಮೇಕಪ್​ ಅಲರ್ಜಿ ಶುರು ಆಯಿತು. ಆ ಕಾರಣದಿಂದಲೂ ಚಿತ್ರೀಕರಣ ತಡವಾಯಿತು. ಒಟ್ಟಾರೆ ಈ ಎಲ್ಲ ಬೆಳವಣಿಗೆಗಳಿಗೆ ತಮ್ಮ ಮೂರು ವರ್ಷ ವ್ಯರ್ಥ ಆಗಿದೆ ಎಂದು ಶಂಕರ್​ ಹೇಳಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲ್​ ಹಾಸನ್​ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜೂ.4ರಂದು ಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದ್ದು, ಇಂಡಿಯನ್​ 2 ಚಿತ್ರದ ಭವಿಷ್ಯ ಏನಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ:

ಕಮಲ್​ ಹಾಸನ್​ ಚುನಾವಣಾ ಸೋಲಿನ ನಂತರ ನನ್ನ ತಂದೆ ಫೈಟರ್​ ಎಂದ ಶ್ರುತಿ ಹಾಸನ್​

ಕೆಲಸ ಮಾಡುವುದು ಬಿಟ್ಟು ಬೇರೆ ಯಾವುದೇ ಆಯ್ಕೆ ಉಳಿದಿಲ್ಲ; ಆರ್ಥಿಕ ಸಂಕಷ್ಟದಲ್ಲಿ ಶ್ರುತಿ ಹಾಸನ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?