AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಸೋತ ಬೆನ್ನಲ್ಲೇ ಕಮಲ್​ ಹಾಸನ್​ ಮೇಲೆ ಕೇಳಿಬಂತು ಆರೋಪ; ಕೋರ್ಟ್​ ಮೆಟ್ಟಿಲೇರಿದ ದೊಡ್ಡವರ ಕಿರಿಕ್​

Kamal Haasan: ‘ಇಂಡಿಯನ್​ 2’ ಚಿತ್ರದ ಕೆಲಸಗಳು ಪೂರ್ಣವಾಗದ ಹೊರತು ನಿರ್ದೇಶಕ ಶಂಕರ್​ ಬೇರೆ ಯಾವುದೇ ಸಿನಿಮಾವನ್ನೂ ಮಾಡದಂತೆ ನಿಷೇಧ ಹೇರಬೇಕು ಎಂದು ಲೈಕಾ ಪ್ರೊಡಕ್ಷನ್​ ಸಂಸ್ಥೆ ದೂರು ಸಲ್ಲಿಸಿದೆ. ಇದಕ್ಕೆ ಪ್ರತಿಯಾಗಿ ಶಂಕರ್​ ಅವರು ತಮ್ಮ ವಾದ ಮಂಡಿಸಿದ್ದಾರೆ.

ಚುನಾವಣೆ ಸೋತ ಬೆನ್ನಲ್ಲೇ ಕಮಲ್​ ಹಾಸನ್​ ಮೇಲೆ ಕೇಳಿಬಂತು ಆರೋಪ; ಕೋರ್ಟ್​ ಮೆಟ್ಟಿಲೇರಿದ ದೊಡ್ಡವರ ಕಿರಿಕ್​
ಕಮಲ್ ಹಾಸನ್​
ಮದನ್​ ಕುಮಾರ್​
|

Updated on: May 13, 2021 | 9:10 AM

Share

ಸಿನಿಮಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಬಳಿಕ ನಟ ಕಮಲ್​ ಹಾಸನ್​ ಅವರು ರಾಜಕೀಯಕ್ಕೆ ಎಂಟ್ರಿ ನೀಡಿದರು. ಆದರೆ ಅವರಿಗೆ ಚುನಾವಣೆಯಲ್ಲಿ ಸೋಲು ಉಂಟಾಯಿತು. ಆ ಬೇಸರದ ಬೆನ್ನಲ್ಲೇ ಅವರ ಮೇಲೆ ಸ್ಟಾರ್​ ನಿರ್ದೇಶಕ ಶಂಕರ್​ ಅವರು ಒಂದು ಆರೋಪ ಹೊರಿಸಿದ್ದಾರೆ. ಬಹುನಿರೀಕ್ಷಿತ ‘ಇಂಡಿಯನ್​ 2’ ಸಿನಿಮಾ ತಂಡದಲ್ಲಿ ವಿವಾದ ಭುಗಿಲೆದ್ದುದ್ದು, ಅದೀಗ ಕೋರ್ಟ್​ ಮೆಟ್ಟಿಲೇರಿದೆ. ಈ ಚಿತ್ರದ ನಿರ್ದೇಶಕ ಶಂಕರ್​ ಮತ್ತು ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್​ ನಡುವೆ ದೊಡ್ಡ ಜಟಾಪಟಿ ಶುರುವಾಗಿದೆ.

2018ರಲ್ಲಿಯೇ ಇಂಡಿಯನ್ 2 ಸಿನಿಮಾದ ಶೂಟಿಂಗ್​ ಆರಂಭ ಆಗಿತ್ತು. ಆದರೆ ಪದೇಪದೇ ವಿಳಂಬವಾದ ಕಾರಣ ಇನ್ನೂ ಚಿತ್ರದ ಕೆಲಸಗಳು ಪೂರ್ಣಗೊಂಡಿಲ್ಲ. ಅಂದಾಜು 250 ಕೋಟಿ ರೂ. ಬಜೆಟ್​ನ ಈ ಸಿನಿಮಾದಲ್ಲಿ ಕಮಲ್​ ಹಾಸನ್​ ಅವರು ವಿಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೊದಲೇ ಬಿಡುಗಡೆಯಾದ ಪೋಸ್ಟರ್​ಗಳು ಸಿನಿಪ್ರಿಯರಲ್ಲಿ ಭಾರಿ ಕುತೂಹಲ ಮೂಡಿಸಿದ್ದವು. ಸದ್ಯಕ್ಕಂತೂ ಚಿತ್ರದ ಶೂಟಿಂಗ್​ ಮುಗಿಯುವಂತೆ ಕಾಣುತ್ತಿಲ್ಲ. ಸಿನಿಮಾ ತಡವಾಗುತ್ತಿರುವ ಕಾರಣಕ್ಕೆ ನಿರ್ಮಾಪಕರು ಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಚಿತ್ರದ ಕೆಲಸಗಳು ಪೂರ್ಣವಾಗದ ಹೊರತು ಶಂಕರ್​ ಬೇರೆ ಯಾವುದೇ ಸಿನಿಮಾವನ್ನೂ ನಿರ್ದೇಶನ ಮಾಡದಂತೆ ನಿಷೇಧ ಹೇರಬೇಕು ಎಂದು ಲೈಕಾ ಪ್ರೊಡಕ್ಷನ್​ ಸಂಸ್ಥೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಇದಕ್ಕೆ ಪ್ರತಿಯಾಗಿ ಶಂಕರ್​ ಅವರು ತಮ್ಮ ವಾದ ಮಂಡಿಸಿದ್ದಾರೆ. ಈ ಚಿತ್ರ ತಡವಾಗಲು ಲೈಕಾ ಪ್ರೊಡಕ್ಷನ್​ ಕಾರಣ ಎಂದು ಅವರು ಪ್ರತ್ಯಾರೋಪ ಮಾಡಿದ್ದಾರೆ. ಮೊದಲು ಒಪ್ಪಿಕೊಂಡು ಬಜೆಟ್​ಅನ್ನು ನಿರ್ಮಾಪಕರು ನೀಡಲಿಲ್ಲ. ಸೆಟ್​ನಲ್ಲಿ ಕ್ರೇನ್​ ಅನಾಹುತ ಸಂಭವಿಸಿತು. ಇಷ್ಟೇ ಅಲ್ಲದೆ, ಶೂಟಿಂಗ್​ ತಡವಾಗುವಲ್ಲಿ ಕಮಲ್​ ಹಾಸನ್​ ಕೂಡ ಕಾರಣರು ಎಂದು ಶಂಕರ್​ ಆರೋಪಿಸಿದ್ದಾರೆ.

ಹಾಗೋ ಹೀಗೋ ಚಿತ್ರೀಕರಣ ಆರಂಭಿಸಿದ ಬಳಿಕ ಕಮಲ್​ ಹಾಸನ್​ ಅವರಿಗೆ ಮೇಕಪ್​ ಅಲರ್ಜಿ ಶುರು ಆಯಿತು. ಆ ಕಾರಣದಿಂದಲೂ ಚಿತ್ರೀಕರಣ ತಡವಾಯಿತು. ಒಟ್ಟಾರೆ ಈ ಎಲ್ಲ ಬೆಳವಣಿಗೆಗಳಿಗೆ ತಮ್ಮ ಮೂರು ವರ್ಷ ವ್ಯರ್ಥ ಆಗಿದೆ ಎಂದು ಶಂಕರ್​ ಹೇಳಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲ್​ ಹಾಸನ್​ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜೂ.4ರಂದು ಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದ್ದು, ಇಂಡಿಯನ್​ 2 ಚಿತ್ರದ ಭವಿಷ್ಯ ಏನಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ:

ಕಮಲ್​ ಹಾಸನ್​ ಚುನಾವಣಾ ಸೋಲಿನ ನಂತರ ನನ್ನ ತಂದೆ ಫೈಟರ್​ ಎಂದ ಶ್ರುತಿ ಹಾಸನ್​

ಕೆಲಸ ಮಾಡುವುದು ಬಿಟ್ಟು ಬೇರೆ ಯಾವುದೇ ಆಯ್ಕೆ ಉಳಿದಿಲ್ಲ; ಆರ್ಥಿಕ ಸಂಕಷ್ಟದಲ್ಲಿ ಶ್ರುತಿ ಹಾಸನ್

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ