Thalaivar 173: ರಜನಿಕಾಂತ್ ಮುಂದಿನ ಸಿನಿಮಾದಲ್ಲಿ ಖ್ಯಾತ ನಿರ್ದೇಶಕ ಶಂಕರ್ ವಿಲನ್?

ನಿರ್ದೇಶಕ ಶಂಕರ್ ಅವರು ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಈಗ ಅವರು ವಿಲನ್ ಆಗುತ್ತಿದ್ದಾರೆ ಎನ್ನಲಾಗಿದೆ. ರಜನಿಕಾಂತ್ ನಟನೆಯ ಹೊಸ ಸಿನಿಮಾದಲ್ಲಿ ಖಳನಾಯಕನ ಪಾತ್ರವನ್ನು ಶಂಕರ್ ಅವರು ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಕೇಳಿಬಂದಿದೆ. ಆದರೆ ಚಿತ್ರತಂಡ ಇನ್ನೂ ಅಧಿಕೃತವಾಗಿ ಏನನ್ನೂ ಹೇಳಿಲ್ಲ.

Thalaivar 173: ರಜನಿಕಾಂತ್ ಮುಂದಿನ ಸಿನಿಮಾದಲ್ಲಿ ಖ್ಯಾತ ನಿರ್ದೇಶಕ ಶಂಕರ್ ವಿಲನ್?
Shankar, Rajinikanth

Updated on: Apr 26, 2026 | 12:13 PM

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ 173ನೇ ಸಿನಿಮಾ ಬಗ್ಗೆ ಸಾಕಷ್ಟು ಇಂಟರೆಸ್ಟಿಂಗ್ ಸುದ್ದಿಗಳು ಕೇಳಿಬರುತ್ತಿವೆ. ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರವನ್ನು ತಾತ್ಕಾಲಿಕವಾಗಿ ‘ತಲೈವರ್ 173’ (Thalaivar 173) ಎಂದು ಕರೆಯಲಾಗುತ್ತಿದೆ. ದಿನದಿಂದ ದಿನಕ್ಕೆ ಈ ಸಿನಿಮಾ ಕುತೂಹಲ ಕೆರಳಿಸುತ್ತಿದೆ. ಈಗ ಈ ಚಿತ್ರದ ಬಗ್ಗೆ ಒಂದು ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಖ್ಯಾತ ನಿರ್ದೇಶಕ ಎಸ್. ಶಂಕರ್ (Shankar) ಅವರು ಈ ಸಿನಿಮಾದಲ್ಲಿ ರಜನಿಕಾಂತ್ ಎದುರು ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿ ಹಬ್ಬಿದೆ.

ದಕ್ಷಿಣ ಭಾರತದ ಲೆಜೆಂಡರಿ ನಿರ್ದೇಶಕ ಎಂದೇ ಖ್ಯಾತರಾಗಿರುವ ಶಂಕರ್ ಅವರು ಈ ಹಿಂದೆ ಕೆಲವು ಚಿತ್ರಗಳಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ, ‘ತಲೈವರ್ 173’ ಚಿತ್ರದಲ್ಲಿ ಅವರು ಪೂರ್ಣ ಪ್ರಮಾಣದ ವಿಲನ್ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಸಿನಿರಂಗದಲ್ಲಿ ಸಂಚಲನ ಮೂಡಿಸಿದೆ. ಇದು ನಿಜವಾದರೆ, ಬೆಳ್ಳಿತೆರೆಯ ಮೇಲೆ ರಜನಿ ಮತ್ತು ಶಂಕರ್ ಅವರನ್ನು ಮುಖಾಮುಖಿಯಾಗಿ ನೋಡಲು ಅಭಿಮಾನಿಗಳಿಗೆ ಹಬ್ಬವೇ ಸರಿ.

ವಿಶೇಷವೆಂದರೆ, ಈ ಚಿತ್ರವನ್ನು ಮತ್ತೊಬ್ಬ ದಿಗ್ಗಜ ಕಮಲ್ ಹಾಸನ್ ಅವರು ತಮ್ಮ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ. ದಶಕಗಳ ನಂತರ ರಜನಿ ಮತ್ತು ಕಮಲ್ ಈ ಚಿತ್ರದ ಮೂಲಕ ಒಂದಾಗುತ್ತಿರುವುದು ವಿಶೇಷ. ಅಷ್ಟೇ ಅಲ್ಲದೆ, ಈ ಚಿತ್ರದಲ್ಲಿ ಕಮಲ್ ಹಾಸನ್ ಅವರು ಒಂದು ಪ್ರಮುಖ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯೂ ದಟ್ಟವಾಗಿದೆ.

ಮೊದಲು ಈ ಚಿತ್ರಕ್ಕೆ ಬೇರೆ ನಿರ್ದೇಶಕರ ಹೆಸರು ಕೇಳಿಬಂದಿತ್ತಾದರೂ, ಈಗ ಸಿಬಿ ಚಕ್ರವರ್ತಿ ಅವರು ‘ತಲೈವರ್ 173’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಕಮಲ್ ಹಾಸನ್ ನಿರ್ಮಾಣ, ರಜನಿಕಾಂತ್ ನಟನೆ ಮತ್ತು ಶಂಕರ್ ಖಳನಾಯಕನಾಗಿ ಕಾಣಿಸಿಕೊಳ್ಳಲಿರುವ ಈ ಸಿನಿಮಾ ಕಾಲಿವುಡ್‌ನ ಅತಿದೊಡ್ಡ ಮಲ್ಟಿಸ್ಟಾರರ್ ಚಿತ್ರವಾಗಿ ಹೊರಹೊಮ್ಮಲಿದೆ.

ಇದನ್ನೂ ಓದಿ: ‘ಜನ ನಾಯಗನ್’ ಯಾಕೆ ವಿಳಂಬ ಆಗಿದೆ ಅಂತ ಕೇಳಿದ್ದಕ್ಕೆ ಸೈಲೆಂಟ್ ಆದ ರಜನಿಕಾಂತ್

ರಜನಿಕಾಂತ್ ಅವರಿಗೆ ಭರ್ಜರಿ ಬೇಡಿಕೆ ಇದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಸದ್ಯಕ್ಕೆ ಅವರು ‘ಜೈಲರ್ 2’ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಆ ಸಿನಿಮಾದಲ್ಲಿ ಮೋಹನ್​ಲಾಲ್, ಶಿವರಾಜ್​ಕುಮಾರ್ ಮುಂತಾದ ಹಿರಿಯ ನಟರು ಅಭಿನಯಿಸಿರುವುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us