AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಹಾಗೂ ‘ಪುಷ್ಪ 2‘ ಸಿನಿಮಾಗಳ ಬಗ್ಗೆ ನಿರ್ದೇಶಕ ಸುಕುಮಾರ್ ಮಾತು

Pushpa: ‘ಪುಷ್ಪ’ ಸಿನಿಮಾದ ನಿರ್ದೇಶಕ ಸುಕುಮಾರ್ ‘ಪುಷ್ಪ 2’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ‘ಪುಷ್ಪ 2’ ಸಿನಿಮಾ ಆಗಸ್ಟ್ 15ರಂದು ಬಿಡುಗಡೆ ಆಗಲಿದೆ.

‘ಪುಷ್ಪ’ ಹಾಗೂ ‘ಪುಷ್ಪ 2‘ ಸಿನಿಮಾಗಳ ಬಗ್ಗೆ ನಿರ್ದೇಶಕ ಸುಕುಮಾರ್ ಮಾತು
ಮಂಜುನಾಥ ಸಿ.
|

Updated on:Feb 08, 2024 | 5:47 PM

Share

ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ’ (Pushpa) ಸಿನಿಮಾ 2021ರಲ್ಲಿ ಬಿಡುಗಡೆ ಆಗಿ ಗಳಿಕೆಯಲ್ಲಿ ಕೆಲ ದಾಖಲೆಗಳನ್ನು ಬರೆದಿತ್ತು. ಕೋವಿಡ್ ಬಳಿಕ ಬಿಡುಗಡೆ ಆದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದ್ದು, ದಕ್ಷಿಣದ ಸಿನಿಮಾಗಳಿಗೆ ಉತ್ತರ ಭಾರತದಲ್ಲಿರುವ ಯಥೇಚ್ಚ ಮಾರುಕಟ್ಟೆಯನ್ನು ತೆರೆದಿಟ್ಟಿತ್ತು. ಇದೀಗ ಪುಷ್ಪ ಸಿನಿಮಾದ ಎರಡನೇ ಭಾಗ ತಯಾರಾಗುತ್ತಿದ್ದು, ಸಿನಿಮಾ ಇದೇ ವರ್ಷ ಆಗಸ್ಟ್ 15ಕ್ಕೆ ತೆರೆಗೆ ಬರಲಿದೆ. ಸಿನಿಮಾದ ಒಂದು ಟೀಸರ್, ಪೋಸ್ಟರ್ ಬಿಟ್ಟರೆ ಇನ್ಯಾವುದೇ ಅಪ್​ಡೇಟ್ ಹೊರಬಿದ್ದಿಲ್ಲ. ಇದೀಗ ನಿರ್ದೇಶಕ ಸುಕುಮಾರ್ ‘ಪುಷ್ಪ 2’ ಬಗ್ಗೆ ಇತ್ತೀಚೆಗಿನ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

‘ಪುಷ್ಪ’ ಸಿನಿಮಾಕ್ಕಿಂತಲೂ ‘ಪುಷ್ಪ 2’ ಸಿನಿಮಾ ದುಪ್ಪಟ್ಟು ಚೆನ್ನಾಗಿರುತ್ತದೆ. ‘ಪುಷ್ಪ’ ಸಿನಿಮಾಕ್ಕಿಂತಲೂ ಒಳ್ಳೆಯ ಚಿತ್ರಕತೆ ‘ಪುಷ್ಪ 2’ ಸಿನಿಮಾದ್ದು ಎಂದಿದ್ದಾರೆ ಸುಕುಮಾರ್, ಮುಂದುವರೆದು, ‘ಭೈರೋಸಿಂಗ್ ಶೇಖಾವತ್ ಹಾಗೂ ಪುಷ್ಪನ ನಡುವಿನ ಯುದ್ಧದ ಜೊತೆಗೆ ಪುಷ್ಪನ ಆಂತರಿಕ ಯುದ್ಧವು ಅದ್ಭುತವಾಗಿ ಇರಲಿದೆ’ ಎಂದಿದ್ದಾರೆ. ‘ಪುಷ್ಪ 2’ ಸಿನಿಮಾದ ಚಿತ್ರಕತೆಯ ಮೇಲೆ ಬಹಳ ನಂಬಿಕೆ ಇರುವುದಾಗಿಯೂ ಸುಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಪುಷ್ಪ ಸಿನಿಮಾ ಸ್ಟೈಲಲ್ಲಿ ರಕ್ತಚಂದನ ಸಾಗಿಸುತಿದ್ದ ಗ್ಯಾಂಗ್ ಸೆರೆ

ಪುಷ್ಪ ಸಿನಿಮಾದ ಅಂತ್ಯದಲ್ಲಿ ಅರಣ್ಯಾಧಿಕಾರಿ ಬೈರೋಸಿಂಗ್ ಶೇಖಾವತ್ ಜೊತೆಗೆ ಪುಷ್ಪನಿಗೆ ವೈರತ್ವ ಶುರುವಾಗುತ್ತದೆ. ಅದರ ಜೊತೆಗೆ ರಕ್ತ ಚಂದನ ಕಳ್ಳಸಾಗಣೆ ಮಾಡುವ ಸಿಂಡಿಕೇಟ್​ನ ಮುಖ್ಯ ಮೆಂಬರ್ ಸಹ ಆಗಿರುವ ಪುಷ್ಪನ ವಿರುದ್ಧ ಅದೇ ಸಿಂಡಿಕೇಟ್​ನ ಹಲವರು ಕತ್ತಿ ಮಸೆಯುತ್ತಿದ್ದಾರೆ. ಕೆಲವು ರಾಜಕೀಯ ಶತ್ರುಗಳು ಸಹ ಪುಷ್ಪನಿಗೆ ಎದುರಾಗಿದ್ದಾರೆ. ಅವರೆಲ್ಲರ ವಿರುದ್ಧ ಪುಷ್ಪ ಹೇಗೆ ಹೋರಾಡುತ್ತಾನೆ, ಅವರೆಲ್ಲರನ್ನೂ ಹೇಗೆ ಮಣಿಸುತ್ತಾನೆ ಎಂಬ ಕತೆಯನ್ನು ಪುಷ್ಪ 2 ಒಳಗೊಂಡಿರಲಿದೆ.

‘ಪುಷ್ಪ’ ಸಿನಿಮಾದಲ್ಲಿ ನಟಿಸಿದ್ದ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ರಾವ್ ರಮೇಶ್, ಸುನಿಲ್ ಇನ್ನೂ ಕೆಲವರು ‘ಪುಷ್ಪ 2’ ಸಿನಿಮಾದಲ್ಲಿಯೂ ಮುಂದುವರೆಯಲಿದ್ದಾರೆ. ಇವರ ಜೊತೆಗೆ ಇನ್ನೂ ಕೆಲವು ಹೊಸ ಪಾತ್ರಗಳು ಸಹ ಸೇರಿಕೊಳ್ಳಲಿವೆ. ಮೊದಲ ಸಿನಿಮಾಕ್ಕೆ ಕೆಲಸ ಮಾಡಿದ್ದ ಬಹುತೇಕ ತಂತ್ರಜ್ಞರು ‘ಪುಷ್ಪ 2’ಗೆ ಸಹ ಕೆಲಸ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Thu, 8 February 24

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ