‘ಪುಷ್ಪ’ ಹಾಗೂ ‘ಪುಷ್ಪ 2‘ ಸಿನಿಮಾಗಳ ಬಗ್ಗೆ ನಿರ್ದೇಶಕ ಸುಕುಮಾರ್ ಮಾತು

Pushpa: ‘ಪುಷ್ಪ’ ಸಿನಿಮಾದ ನಿರ್ದೇಶಕ ಸುಕುಮಾರ್ ‘ಪುಷ್ಪ 2’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ‘ಪುಷ್ಪ 2’ ಸಿನಿಮಾ ಆಗಸ್ಟ್ 15ರಂದು ಬಿಡುಗಡೆ ಆಗಲಿದೆ.

‘ಪುಷ್ಪ’ ಹಾಗೂ ‘ಪುಷ್ಪ 2‘ ಸಿನಿಮಾಗಳ ಬಗ್ಗೆ ನಿರ್ದೇಶಕ ಸುಕುಮಾರ್ ಮಾತು
Follow us
|

Updated on:Feb 08, 2024 | 5:47 PM

ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ’ (Pushpa) ಸಿನಿಮಾ 2021ರಲ್ಲಿ ಬಿಡುಗಡೆ ಆಗಿ ಗಳಿಕೆಯಲ್ಲಿ ಕೆಲ ದಾಖಲೆಗಳನ್ನು ಬರೆದಿತ್ತು. ಕೋವಿಡ್ ಬಳಿಕ ಬಿಡುಗಡೆ ಆದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದ್ದು, ದಕ್ಷಿಣದ ಸಿನಿಮಾಗಳಿಗೆ ಉತ್ತರ ಭಾರತದಲ್ಲಿರುವ ಯಥೇಚ್ಚ ಮಾರುಕಟ್ಟೆಯನ್ನು ತೆರೆದಿಟ್ಟಿತ್ತು. ಇದೀಗ ಪುಷ್ಪ ಸಿನಿಮಾದ ಎರಡನೇ ಭಾಗ ತಯಾರಾಗುತ್ತಿದ್ದು, ಸಿನಿಮಾ ಇದೇ ವರ್ಷ ಆಗಸ್ಟ್ 15ಕ್ಕೆ ತೆರೆಗೆ ಬರಲಿದೆ. ಸಿನಿಮಾದ ಒಂದು ಟೀಸರ್, ಪೋಸ್ಟರ್ ಬಿಟ್ಟರೆ ಇನ್ಯಾವುದೇ ಅಪ್​ಡೇಟ್ ಹೊರಬಿದ್ದಿಲ್ಲ. ಇದೀಗ ನಿರ್ದೇಶಕ ಸುಕುಮಾರ್ ‘ಪುಷ್ಪ 2’ ಬಗ್ಗೆ ಇತ್ತೀಚೆಗಿನ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

‘ಪುಷ್ಪ’ ಸಿನಿಮಾಕ್ಕಿಂತಲೂ ‘ಪುಷ್ಪ 2’ ಸಿನಿಮಾ ದುಪ್ಪಟ್ಟು ಚೆನ್ನಾಗಿರುತ್ತದೆ. ‘ಪುಷ್ಪ’ ಸಿನಿಮಾಕ್ಕಿಂತಲೂ ಒಳ್ಳೆಯ ಚಿತ್ರಕತೆ ‘ಪುಷ್ಪ 2’ ಸಿನಿಮಾದ್ದು ಎಂದಿದ್ದಾರೆ ಸುಕುಮಾರ್, ಮುಂದುವರೆದು, ‘ಭೈರೋಸಿಂಗ್ ಶೇಖಾವತ್ ಹಾಗೂ ಪುಷ್ಪನ ನಡುವಿನ ಯುದ್ಧದ ಜೊತೆಗೆ ಪುಷ್ಪನ ಆಂತರಿಕ ಯುದ್ಧವು ಅದ್ಭುತವಾಗಿ ಇರಲಿದೆ’ ಎಂದಿದ್ದಾರೆ. ‘ಪುಷ್ಪ 2’ ಸಿನಿಮಾದ ಚಿತ್ರಕತೆಯ ಮೇಲೆ ಬಹಳ ನಂಬಿಕೆ ಇರುವುದಾಗಿಯೂ ಸುಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಪುಷ್ಪ ಸಿನಿಮಾ ಸ್ಟೈಲಲ್ಲಿ ರಕ್ತಚಂದನ ಸಾಗಿಸುತಿದ್ದ ಗ್ಯಾಂಗ್ ಸೆರೆ

ಪುಷ್ಪ ಸಿನಿಮಾದ ಅಂತ್ಯದಲ್ಲಿ ಅರಣ್ಯಾಧಿಕಾರಿ ಬೈರೋಸಿಂಗ್ ಶೇಖಾವತ್ ಜೊತೆಗೆ ಪುಷ್ಪನಿಗೆ ವೈರತ್ವ ಶುರುವಾಗುತ್ತದೆ. ಅದರ ಜೊತೆಗೆ ರಕ್ತ ಚಂದನ ಕಳ್ಳಸಾಗಣೆ ಮಾಡುವ ಸಿಂಡಿಕೇಟ್​ನ ಮುಖ್ಯ ಮೆಂಬರ್ ಸಹ ಆಗಿರುವ ಪುಷ್ಪನ ವಿರುದ್ಧ ಅದೇ ಸಿಂಡಿಕೇಟ್​ನ ಹಲವರು ಕತ್ತಿ ಮಸೆಯುತ್ತಿದ್ದಾರೆ. ಕೆಲವು ರಾಜಕೀಯ ಶತ್ರುಗಳು ಸಹ ಪುಷ್ಪನಿಗೆ ಎದುರಾಗಿದ್ದಾರೆ. ಅವರೆಲ್ಲರ ವಿರುದ್ಧ ಪುಷ್ಪ ಹೇಗೆ ಹೋರಾಡುತ್ತಾನೆ, ಅವರೆಲ್ಲರನ್ನೂ ಹೇಗೆ ಮಣಿಸುತ್ತಾನೆ ಎಂಬ ಕತೆಯನ್ನು ಪುಷ್ಪ 2 ಒಳಗೊಂಡಿರಲಿದೆ.

‘ಪುಷ್ಪ’ ಸಿನಿಮಾದಲ್ಲಿ ನಟಿಸಿದ್ದ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ರಾವ್ ರಮೇಶ್, ಸುನಿಲ್ ಇನ್ನೂ ಕೆಲವರು ‘ಪುಷ್ಪ 2’ ಸಿನಿಮಾದಲ್ಲಿಯೂ ಮುಂದುವರೆಯಲಿದ್ದಾರೆ. ಇವರ ಜೊತೆಗೆ ಇನ್ನೂ ಕೆಲವು ಹೊಸ ಪಾತ್ರಗಳು ಸಹ ಸೇರಿಕೊಳ್ಳಲಿವೆ. ಮೊದಲ ಸಿನಿಮಾಕ್ಕೆ ಕೆಲಸ ಮಾಡಿದ್ದ ಬಹುತೇಕ ತಂತ್ರಜ್ಞರು ‘ಪುಷ್ಪ 2’ಗೆ ಸಹ ಕೆಲಸ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Thu, 8 February 24

ತಾಜಾ ಸುದ್ದಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ