AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನೀಕಾಂತ್ ಜೊತೆ ಸಮಂತಾ ಹೋಲಿಕೆ, ಖ್ಯಾತ ನಿರ್ದೇಶಕ ಕೊಟ್ಟ ಕಾರಣವೇನು?

Samantha: ರಜನೀಕಾಂತ್ ಭಾರತದ ಸೂಪರ್ ಸ್ಟಾರ್ ನಟ. ಅವರ ಎತ್ತರಕ್ಕೆ ಏರುವ ಮತ್ತೊಬ್ಬ ನಟರಿಲ್ಲ. ಆದರೆ ಖ್ಯಾತ ನಿರ್ದೇಶಕರೊಬ್ಬರು ರಜನೀಕಾಂತ್ ಜೊತೆಗೆ ನಟಿ ಸಮಂತಾರನ್ನು ಹೋಲಿಸಿದ್ದಾರೆ. ಅದಕ್ಕೆ ಕಾರಣವನ್ನೂ ಸಹ ನೀಡಿದ್ದಾರೆ.

ರಜನೀಕಾಂತ್ ಜೊತೆ ಸಮಂತಾ ಹೋಲಿಕೆ, ಖ್ಯಾತ ನಿರ್ದೇಶಕ ಕೊಟ್ಟ ಕಾರಣವೇನು?
Follow us
ಮಂಜುನಾಥ ಸಿ.
|

Updated on: Oct 09, 2024 | 11:46 AM

ರಜನೀಕಾಂತ್ ಭಾರತದ ನಂಬರ್ 1 ಸೂಪರ್ ಸ್ಟಾರ್. ಎಲ್ಲ ರಾಜ್ಯಗಳಲ್ಲಿಯೂ ಅವರಿಗೆ ಅಭಿಮಾನಿಗಳಿದ್ದಾರೆ. ಇದೀಗ ತೆಲುಗಿನ ಖ್ಯಾತ ನಿರ್ದೇಶಕರೊಬ್ಬರು ನಟಿ ಸಮಂತಾರನ್ನು ಸೂಪರ್ ಸ್ಟಾರ್ ರಜನೀಕಾಂತ್​ಗೆ ಹೋಲಿಸಿದ್ದಾರೆ. ತಾವು ಈ ರೀತಿಯ ಹೋಲಿಕೆ ಮಾಡಿದ್ದೇಕೆ ಎಂದು ಕಾರಣವನ್ನು ಸಹ ನೀಡಿದ್ದಾರೆ. ಆಲಿಯಾ ಭಟ್ ನಟನೆಯ ‘ಜಿಗ್ರಾ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರ ವೇದಿಕೆಯನ್ನು ನಿರ್ದೇಶಕ ತ್ರಿವಿಕ್ರಮ್, ಸಮಂತಾರನ್ನು ರಜನೀಕಾಂತ್​ಗೆ ಹೋಲಿಸಿದ್ದಾರೆ.

ಹೈದರಾಬಾದ್​ನಲ್ಲಿ ನಡೆದ ‘ಜಿಗ್ರಾ’ ಸಿನಿಮಾದ ಇವೆಂಟ್​ನಲ್ಲಿ ಮಾತನಾಡಿದ ಖ್ಯಾತ ನಿರ್ದೇಶಕ ತ್ರಿವಿಕ್ರಮ್, ‘ಎಲ್ಲ ರಾಜ್ಯಗಳಲ್ಲಿಯೂ ಅಭಿಮಾನಿಗಳನ್ನು ಹೊಂದಿರುವ ನಟ ಯಾರಾದರೂ ಇದ್ದರೆ ಅದು ರಜನೀಕಾಂತ್ ಮಾತ್ರ. ನಟಿ ಸಮಂತಾ ಸಹ ರಜನೀಕಾಂತ್ ರೀತಿಯೇ ಅವರಿಗೂ ಸಹ ಎಲ್ಲ ಭಾಷೆಗಳಲ್ಲಿಯೂ ಸಮಾನ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ’ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಸಮಂತಾರನ್ನು ಸಾಕಷ್ಟು ಹೊಗಳಿದ ನಿರ್ದೇಶಕ ತ್ರಿವಿಕ್ರಮ್, ‘ಸಮಂತಾ ಜೊತೆಗೆ ಮೂರು ಸಿನಿಮಾಗಳಿಗೆ ನಾನು ಕೆಲಸ ಮಾಡಿದ್ದೇನೆ. ಆಕೆಯ ಜೊತೆ ಡಲ್ ಮೂಮೆಂಟ್ ಎಂಬುದೇ ಇರುವುದಿಲ್ಲ. ಸಾಯುವ ಸೀನ್ ಆಗಿದ್ದರೂ ಸಹ ನಗುತ್ತಲೇ ಇರುತ್ತಾರೆ, ನಗಿಸುತ್ತಲೇ ಇರುತ್ತಾರೆ. ಆಕೆಯ ಜೊತೆ ಕೆಲಸ ಮಾಡುವುದೇ ಖುಷಿ. ನಾನು ಸಹ ಸಮಂತಾ ಅಭಿಮಾನಿ. ಅವರ ‘ಯೇ ಮಾಯ ಚೇಸಾವೆ’ ಸಿನಿಮಾ ಮಾಡಿದಾಗ ಹಲವು ಭಾರಿ ನೋಡಿದ್ದೆ. ನಟ ಅಲ್ಲು ಅರ್ಜುನ್ ಫೋನ್ ಮಾಡಿ ನನಗೆ ಹೇಳಿದ್ದ, ಸಮಂತಾ ಎಂಬ ಹೊಸ ನಟಿ ಬಂದಿದ್ದಾಳೆ ನೋಡಿ ಬಹಳ ಚೆನ್ನಾಗಿ ನಟಿಸುತ್ತಾರೆ ಎಂದು, ಅಲ್ಲು ಅರ್ಜುನ್ ಸಹ ಸಮಂತಾ ಅಭಿಮಾನಿ’ ಎಂದಿದ್ದಾರೆ.

ಇದನ್ನೂ ಓದಿ:ಸಮಂತಾಗೆ ಏಕೆ ಹೀಗೆಲ್ಲ ಆಗುತ್ತೆ? ಅವರ ಬಗ್ಗೆ ಹುಟ್ಟಿದ ವದಂತಿಗಳು ಒಂದೆರಡಲ್ಲ

ನಾರಿ ಶಕ್ತಿಯ ಬಗ್ಗೆ ಸಮಂತಾ ಆಡಿದ ಮಾತುಗಳಿಗೆ ಪ್ರತಿಕ್ರಿಯಿಸಿ, ‘ಮಹಿಳೆಯರು ನಿಜವಾದ ‘ಹೀರೋ’ಗಳು, ನಾರಿ ಎಂದರೆ ಶಕ್ತಿ. ಯಾರೂ ಅವರನ್ನು ಶಕ್ತ ಗೊಳಿಸುವ ಅವಶ್ಯಕತೆ ಇಲ್ಲ. ಯಾರೂ ಸಹ ಅವರನ್ನು ಉದ್ದಾರ ಮಾಡುವ ಅವಶ್ಯಕತೆಯೂ ಇಲ್ಲ. ಅವರಿಗೆ ಶಕ್ತಿ ಇದೆ, ಅವರೇ ನಮ್ಮನ್ನು ಎಂಪವರ್ ಮಾಡಬೇಕು. ತಾಯಿ ಇಲ್ಲದಿದ್ದರೆ ನಾವ್ಯಾರು ಇಲ್ಲ. ಹಾಗೆಯೇ ನೀವು ಇಲ್ಲದಿದ್ದರೆ ನಾವ್ಯಾರೂ ಇಲ್ಲ’ ಎಂದರು ತ್ರಿವಿಕ್ರಮ್.

ಸಮಂತಾ ಸಿನಿಮಾಗಳ ಬಗ್ಗೆ ಮಾತನಾಡುತ್ತಾ, ‘ಸಮಂತಾ ನಟಿಸುವುದಿಲ್ಲವೇನೋ ಎಂದುಕೊಂಡು ನಾವು ಅವರಿಗೆ ಪಾತ್ರ ಬರೆಯುತ್ತಿಲ್ಲ. ಅವರು ಈಗ ಬಾಂಬೆಯಲ್ಲಿ ಬ್ಯುಸಿಯಾಗಿಬಿಟ್ಟಿದ್ದಾರೆ. ನಮ್ಮ ಸಿನಿಮಾಗಳಲ್ಲಿ ಎಲ್ಲಿ ನಟಿಸುತ್ತಾರೆ ಎಂದುಕೊಂಡು ನಾವು ಸುಮ್ಮನಿದ್ದೇವೆ. ಸಮಂತಾ ನಟಿಸುತ್ತಾರೆ ಎಂದರೆ ಖಂಡಿತ ಬರೆಯುತ್ತೀನಿ. ಆಗ ‘ಅತ್ತಾರಿಂಟಿಕಿ ದಾರೇದಿ’ (ಅತ್ತೆಯ ಮನೆಗೆ ದಾರಿ ಯಾವುದು?) ಎಂದು ಸಿನಿಮಾ ಮಾಡಿದ್ದೆವು. ಈಗ ಸಮಂತಾಗೆ ‘ಹೈದರಾಬಾದ್​ಗೆ ದಾರಿ ಯಾವುದು?’ ಎಂದು ಕಲಿಸಿಕೊಡುವಂತಾಗಿದೆ. ಸಮಂತಾ ಬರೀ ಮುಂಬೈನಲ್ಲಿ ನಡೆಯುವ ಇವೆಂಟ್​ನಲ್ಲಿ ಭಾಗವಹಿಸುತ್ತಾರೆ, ಅವರು ಹೈದರಾಬಾದ್​ಗೂ ಬರಬೇಕು’ ಎಂದು ಕಾಲೆಳೆದರು. ಕಾರ್ಯಕ್ರಮದಲ್ಲಿ ಆಲಿಯಾ ಭಟ್, ನಿರ್ದೇಶಕ ವಾಸನ್ ಬಾಲ, ರಾಣಾ ದಗ್ಗುಬಾಟಿ ಇನ್ನೂ ಹಲವರು ಭಾಗವಹಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ