AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಸ್ಕೃತಿ ಅರ್ಥೈಸಿಕೊಂಡು ಅದಕ್ಕೆ ಗೌರವ ನೀಡಬೇಕು’; ದೀಪಿಕಾ ಪಡುಕೋಣೆಗೆ ಕೌಂಟರ್

Deepika Padukone: ಕೆಲಸದ ಸಮಯದ ಮಿತಿಗಾಗಿ ನಟಿ ದೀಪಿಕಾ ಪಡುಕೋಣೆ ಬಿಗ್ ಬಜೆಟ್ ಚಿತ್ರಗಳಾದ 'ಕಲ್ಕಿ ಸೀಕ್ವೆಲ್' ಹಾಗೂ 'ಸ್ಪಿರಿಟ್'ನಿಂದ ಹೊರನಡೆದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ನಿರ್ದೇಶಕ ವೆಂಕಿ ಅಟ್ಲೂರಿ, ಆಯಾ ಚಿತ್ರರಂಗದ ಕೆಲಸದ ಸಂಸ್ಕೃತಿಗೆ ಕಲಾವಿದರು ಗೌರವ ನೀಡಬೇಕು ಎಂದು ಕಿವಿಮಾತು ಹೇಳಿದ್ದಾರೆ.

‘ಸಂಸ್ಕೃತಿ ಅರ್ಥೈಸಿಕೊಂಡು ಅದಕ್ಕೆ ಗೌರವ ನೀಡಬೇಕು’; ದೀಪಿಕಾ ಪಡುಕೋಣೆಗೆ ಕೌಂಟರ್
ವೆಂಕಿ-ದೀಪಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 31, 2026 | 11:16 AM

Share

ಮುಖ್ಯಾಂಶಗಳು

  • ದೀಪಿಕಾ ಪಡುಕೋಣೆ ನಿರ್ಧಾರಕ್ಕೆ ನಿರ್ದೇಶಕ ವೆಂಕಿ ಅಟ್ಲೂರಿ ಕೌಂಟರ್
  • ಟಾಲಿವುಡ್‌ನಲ್ಲಿ 12 ಗಂಟೆ ಶೂಟಿಂಗ್ ಮಾಮೂಲಿ ಎಂದ ನಿರ್ದೇಶಕ
  • ಕಲ್ಕಿ ಸೀಕ್ವೆಲ್‌ನಿಂದ ದೀಪಿಕಾ ಔಟ್

ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ (Deepika Padukone) ಕೆಲಸದ ಸಮಯದ ವಿವಾದ ಈಗ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ದಿನಕ್ಕೆ ಎಂಟು ಗಂಟೆಗಳ ಕಾಲ ಮಾತ್ರ ಕೆಲಸ ಮಾಡಲು ದೀಪಿಕಾ ಪಟ್ಟು ಹಿಡಿದಿದ್ದರು. ಈ ಕಾರಣದಿಂದಾಗಿ ಅವರು ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸೀಕ್ವೆಲ್ ಮತ್ತು ಸಂದೀಪ್ ರೆಡ್ಡಿ ವಂಗಾ ಅವರ ‘ಸ್ಪಿರಿಟ್’ ಚಿತ್ರದಿಂದ ಹೊರನಡೆದಿದ್ದಾರೆ.

ತೆಲುಗು ಚಿತ್ರರಂಗದ ಕೆಲಸದ ಸಂಸ್ಕೃತಿ

ದೀಪಿಕಾ ಪಡುಕೋಣೆ ಅವರ ಈ ನಿರ್ಧಾರದ ಬಗ್ಗೆ ಟಾಲಿವುಡ್ ನಿರ್ದೇಶಕ ವೆಂಕಿ ಅಟ್ಲೂರಿ ಇತ್ತೀಚಿನ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಪ್ರತಿ ಚಿತ್ರರಂಗಕ್ಕೂ ತನ್ನದೇ ಆದ ಕೆಲಸದ ಸಂಸ್ಕೃತಿ ಇರುತ್ತದೆ ಎಂದು ಅವರು ಹೇಳಿದ್ದಾರೆ. ’ತೆಲುಗು ಚಿತ್ರರಂಗದಲ್ಲಿ ಸಾಮಾನ್ಯವಾಗಿ ದಿನಕ್ಕೆ 11 ರಿಂದ 12 ಗಂಟೆಗಳ ಕಾಲ ಶೂಟಿಂಗ್ ನಡೆಯುತ್ತದೆ. ಬೇರೆ ಭಾಷೆಯ ಕಲಾವಿದರು ಇಲ್ಲಿಗೆ ಬಂದಾಗ ಆ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು ಮತ್ತು ಅದಕ್ಕೆ ಗೌರವ ನೀಡಬೇಕು’ ಎಂದು ವೆಂಕಿ ತಿಳಿಸಿದ್ದಾರೆ.

ರವೀನಾ ಟಂಡನ್ ಜೊತೆಗಿನ ಹಳೆಯ ನೆನಪು

ನಿರ್ದೇಶಕ ವೆಂಕಿ ಅಟ್ಲೂರಿ ಅವರು ತಾವು ನಿರ್ದೇಶಿಸುತ್ತಿರುವ ‘ವಿಶ್ವನಾಥ್ ಆ್ಯಂಡ್ ಸನ್ಸ್’ ಚಿತ್ರದ ಶೂಟಿಂಗ್ ನೆನಪೊಂದನ್ನು ಹಂಚಿಕೊಂಡಿದ್ದಾರೆ. ‘ಊಟಿಯ ಭಾರಿ ಚಳಿಯಲ್ಲಿ ನಟಿ ರವೀನಾ ಟಂಡನ್ ಮತ್ತು ನಟ ಸೂರ್ಯ ಜೊತೆ ಚಿತ್ರೀಕರಣ ನಡೆಯುತ್ತಿತ್ತು. ಅಂದು ಕೆಲಸ ಮುಗಿಸಲು ಸತತ 14 ಗಂಟೆಗಳ ಕಾಲ ಶೂಟಿಂಗ್ ಮಾಡಬೇಕಾದ ಅನಿವಾರ್ಯತೆ ಇತ್ತು. ರವೀನಾ ಟಂಡನ್ ಅವರ ಮ್ಯಾನೇಜರ್ ವಿರೋಧ ವ್ಯಕ್ತಪಡಿಸಿದರೂ ನಟಿ ಮಾತ್ರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಿದ್ದರು’ ಎಂದು ಅವರು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ:  ಸೋನಂ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹಕ್ಕೆ ದೀಪಿಕಾ ಪಡುಕೋಣೆ ಬೆಂಬಲ? ಅಸಲಿ ಕಥೆ ಇಲ್ಲಿದೆ

ವೈಜಯಂತಿ ಮೂವೀಸ್ ಅಧಿಕೃತ ಪ್ರಕಟಣೆ

ದೀಪಿಕಾ ಪಡುಕೋಣೆ ಅವರು ಎಂಟು ಗಂಟೆಗಳ ಶಿಫ್ಟ್ ನಿಯಮಕ್ಕೆ ಪಟ್ಟು ಹಿಡಿದ ಕಾರಣ ಕಲ್ಕಿ ಚಿತ್ರತಂಡದಿಂದ ಹೊರಬೀಳಬೇಕಾಯಿತು. ಇತ್ತೀಚೆಗೆ ವೈಜಯಂತಿ ಮೂವೀಸ್ ಸಂಸ್ಥೆಯು ಈ ವಿಷಯವನ್ನು ಅಧಿಕೃತವಾಗಿ ಖಚಿತಪಡಿಸಿದೆ. ಮೊದಲ ಭಾಗದಲ್ಲಿ ಒಟ್ಟಿಗೆ ಪ್ರಯಾಣ ಮಾಡಿದ್ದರೂ ಸೀಕ್ವೆಲ್ ಸಮಯದಲ್ಲಿ ಇಬ್ಬರ ನಡುವೆ ಒಮ್ಮತ ಮೂಡದ ಕಾರಣ ದೀಪಿಕಾ ಸಿನಿಮಾದಿಂದ ದೂರವಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ