AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನ್ನಪೂರ್ಣಿ’ ವಿವಾದ, ನಯನತಾರಾ ಬೆಂಬಲಕ್ಕೆ ವೆಟ್ರಿಮಾರನ್

Annapoorani: ವಿವಾದಕ್ಕೆ ಈಡಾಗಿರುವ ನಯನತಾರಾ ನಟನೆಯ ‘ಅನ್ನಪೂರ್ಣಿ’ ಸಿನಿಮಾವನ್ನು ನೆಟ್​ಫ್ಲಿಕ್ಸ್​ನಿಂದ ತೆಗೆದು ಹಾಕಿರುವುದಕ್ಕೆ ವೆಟ್ರಿಮಾರನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಅನ್ನಪೂರ್ಣಿ’ ವಿವಾದ, ನಯನತಾರಾ ಬೆಂಬಲಕ್ಕೆ ವೆಟ್ರಿಮಾರನ್
ಮಂಜುನಾಥ ಸಿ.
|

Updated on: Jan 17, 2024 | 4:56 PM

Share

ನಯನತಾರಾ (Nayanatara) ನಟಿಸಿರುವ ‘ಅನ್ನಪೂರ್ಣಿ’ ಸಿನಿಮಾ ವಿವಾದ ಎಬ್ಬಿಸಿದೆ. ಡಿಸೆಂಬರ್ 1ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಕಂಡಿತು. ಬಳಿಕ ಅದೇ ತಿಂಗಳು 29ಕ್ಕೆ ಒಟಿಟಿಯಲ್ಲಿ ಬಿಡುಗಡೆ ಆಯ್ತು. ಒಟಿಟಿಗೆ ಬಂದ ಬಳಿಕ ಹಲವು ಈ ಸಿನಿಮಾ ವೀಕ್ಷಿಸಿದರು. ಆದರೆ ಸಿನಿಮಾದ ಕಂಟೆಂಟ್, ಕೆಲವು ಸಂಭಾಷಣೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಯ್ತು. ನೆಟ್​ಫ್ಲಿಕ್ಸ್​, ನಯನತಾರಾ ಸೇರಿದಂತೆ ಚಿತ್ರತಂಡದ ಇನ್ನೂ ಕೆಲವರ ವಿರುದ್ಧ ದೂರುಗಳು ಸಹ ದಾಖಲಾದವು. ಕೊನೆಗೆ ಸಿನಿಮಾವನ್ನು ಒಟಿಟಿಯಿಂದ ಡಿಲೀಟ್ ಮಾಡಲಾಯ್ತು. ವಿವಾದ ಎಬ್ಬಿಸಿದ ಈ ಸಿನಿಮಾದ ಬೆಂಬಲಕ್ಕೆ ಖ್ಯಾತ ನಿರ್ದೇಶಕ ವೆಟ್ರಿಮಾರನ್ ನಿಂತಿದ್ದಾರೆ.

ಭಾರತದ ಪ್ರತಿಭಾವಂತ ನಿರ್ದೇಶಕರ ಸಾಲಿನಲ್ಲಿ ಗುರುತಿಸಲಾಗುವ ವೆಟ್ರಿಮಾರನ್, ‘ಅನ್ನಪೂರ್ಣಿ’ ಸಿನಿಮಾಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ‘ಭಾರತದಲ್ಲಿ ಸೆನ್ಸಾರ್ ಇಲ್ಲದ ಸೃಜನಾತ್ಮಕ ಸ್ವಾತಂತ್ರ್ಯ ಎಂಬುದು ಇಲ್ಲ. OTT ಯಲ್ಲಿ ಬಿಡುಗಡೆಯಾದ ಚಿತ್ರಗಳಿಗೂ ಸಹ ಇದು ಅನ್ವಯಿಸುತ್ತದೆ. ಸೆನ್ಸಾರ್ ಮಂಡಳಿಯಿಂದ ಚಲನಚಿತ್ರವನ್ನು ಅನುಮೋದಿಸಿದರೂ ಸಹ, ಬಾಹ್ಯ ಒತ್ತಡಗಳಿಗೆ ಮಣಿದು ಅದನ್ನು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಬಹುದು ಅದು ಭಾರತದಲ್ಲಿ ಮಾತ್ರ ಸಾಧ್ಯ’ ಎಂದು ಕುಟುಕಿದ್ದಾರೆ.

ಇದನ್ನೂ ಓದಿ:ಶ್ರೀರಾಮನಿಗೆ ಅಪಮಾನ ಆರೋಪ: ನಯನತಾರಾ ವಿರುದ್ಧ ಪ್ರಕರಣ ದಾಖಲು

‘ಚಲನಚಿತ್ರವನ್ನು ಅನುಮತಿಸುವ ಅಥವಾ ನಿರ್ಬಂಧಿಸುವ ಅಧಿಕಾರವುಳ್ಳ ಏಕೈಕ ಸಂಸ್ಥೆ ಸೆನ್ಸಾರ್ ಮಂಡಳಿ ಮತ್ತು ಸೆನ್ಸಾರ್ ಮಂಡಳಿಯಿಂದ ಅನುಮೋದಿಸಲಾದ ಚಲನಚಿತ್ರವನ್ನು ಬಾಹ್ಯ ಪ್ರಭಾವಗಳಿಂದ ತೆಗೆದುಹಾಕಲು ಹೇಗೆ ಒತ್ತಾಯಿಸಲಾಯಿತು ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಇಂತಹ ಘಟನೆಗಳು ಸೆನ್ಸಾರ್ ಮಂಡಳಿಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡುತ್ತವೆ ಎಂದು ವೆಟ್ರಿಮಾರನ್ ಹೇಳಿದ್ದಾರೆ.

‘ಅನ್ನಪೂರ್ಣಿ’ ಸಿನಿಮಾ ಲವ್ ಜಿಹಾದ್​ಗೆ ಪರೋಕ್ಷ ಪ್ರಚಾರ ನೀಡುತ್ತಿದೆ ಎಂದು, ಮತಾಂತರಕ್ಕೆ ಪ್ರಚಾರ ನೀಡುತ್ತಿದೆ ಅಲ್ಲದೆ ಸಿನಿಮಾದಲ್ಲಿ ಶ್ರೀರಾಮನನ್ನು ಮಾಂಸಾಹಾರಿ ಎಂದು ಹೇಳಲಾಗಿದೆ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ನಟಿ ನಯನತಾರಾ ಸೇರಿದಂತೆ ಸಿನಿಮಾದ ನಿರ್ದೇಶಕ, ನಿರ್ಮಾಪಕ, ಕತೆಗಾರ, ಸಿನಿಮಾವನ್ನು ಪ್ರದರ್ಶಿಸಿದ್ದ ನೆಟ್​ಫ್ಲಿಕ್ಸ್​ ಹಾಗೂ ಅದರ ಸಿಇಓ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!