AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನ್ನಪೂರ್ಣಿ’ ವಿವಾದ, ನಯನತಾರಾ ಬೆಂಬಲಕ್ಕೆ ವೆಟ್ರಿಮಾರನ್

Annapoorani: ವಿವಾದಕ್ಕೆ ಈಡಾಗಿರುವ ನಯನತಾರಾ ನಟನೆಯ ‘ಅನ್ನಪೂರ್ಣಿ’ ಸಿನಿಮಾವನ್ನು ನೆಟ್​ಫ್ಲಿಕ್ಸ್​ನಿಂದ ತೆಗೆದು ಹಾಕಿರುವುದಕ್ಕೆ ವೆಟ್ರಿಮಾರನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಅನ್ನಪೂರ್ಣಿ’ ವಿವಾದ, ನಯನತಾರಾ ಬೆಂಬಲಕ್ಕೆ ವೆಟ್ರಿಮಾರನ್
ಮಂಜುನಾಥ ಸಿ.
|

Updated on: Jan 17, 2024 | 4:56 PM

Share

ನಯನತಾರಾ (Nayanatara) ನಟಿಸಿರುವ ‘ಅನ್ನಪೂರ್ಣಿ’ ಸಿನಿಮಾ ವಿವಾದ ಎಬ್ಬಿಸಿದೆ. ಡಿಸೆಂಬರ್ 1ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಕಂಡಿತು. ಬಳಿಕ ಅದೇ ತಿಂಗಳು 29ಕ್ಕೆ ಒಟಿಟಿಯಲ್ಲಿ ಬಿಡುಗಡೆ ಆಯ್ತು. ಒಟಿಟಿಗೆ ಬಂದ ಬಳಿಕ ಹಲವು ಈ ಸಿನಿಮಾ ವೀಕ್ಷಿಸಿದರು. ಆದರೆ ಸಿನಿಮಾದ ಕಂಟೆಂಟ್, ಕೆಲವು ಸಂಭಾಷಣೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಯ್ತು. ನೆಟ್​ಫ್ಲಿಕ್ಸ್​, ನಯನತಾರಾ ಸೇರಿದಂತೆ ಚಿತ್ರತಂಡದ ಇನ್ನೂ ಕೆಲವರ ವಿರುದ್ಧ ದೂರುಗಳು ಸಹ ದಾಖಲಾದವು. ಕೊನೆಗೆ ಸಿನಿಮಾವನ್ನು ಒಟಿಟಿಯಿಂದ ಡಿಲೀಟ್ ಮಾಡಲಾಯ್ತು. ವಿವಾದ ಎಬ್ಬಿಸಿದ ಈ ಸಿನಿಮಾದ ಬೆಂಬಲಕ್ಕೆ ಖ್ಯಾತ ನಿರ್ದೇಶಕ ವೆಟ್ರಿಮಾರನ್ ನಿಂತಿದ್ದಾರೆ.

ಭಾರತದ ಪ್ರತಿಭಾವಂತ ನಿರ್ದೇಶಕರ ಸಾಲಿನಲ್ಲಿ ಗುರುತಿಸಲಾಗುವ ವೆಟ್ರಿಮಾರನ್, ‘ಅನ್ನಪೂರ್ಣಿ’ ಸಿನಿಮಾಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ‘ಭಾರತದಲ್ಲಿ ಸೆನ್ಸಾರ್ ಇಲ್ಲದ ಸೃಜನಾತ್ಮಕ ಸ್ವಾತಂತ್ರ್ಯ ಎಂಬುದು ಇಲ್ಲ. OTT ಯಲ್ಲಿ ಬಿಡುಗಡೆಯಾದ ಚಿತ್ರಗಳಿಗೂ ಸಹ ಇದು ಅನ್ವಯಿಸುತ್ತದೆ. ಸೆನ್ಸಾರ್ ಮಂಡಳಿಯಿಂದ ಚಲನಚಿತ್ರವನ್ನು ಅನುಮೋದಿಸಿದರೂ ಸಹ, ಬಾಹ್ಯ ಒತ್ತಡಗಳಿಗೆ ಮಣಿದು ಅದನ್ನು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಬಹುದು ಅದು ಭಾರತದಲ್ಲಿ ಮಾತ್ರ ಸಾಧ್ಯ’ ಎಂದು ಕುಟುಕಿದ್ದಾರೆ.

ಇದನ್ನೂ ಓದಿ:ಶ್ರೀರಾಮನಿಗೆ ಅಪಮಾನ ಆರೋಪ: ನಯನತಾರಾ ವಿರುದ್ಧ ಪ್ರಕರಣ ದಾಖಲು

‘ಚಲನಚಿತ್ರವನ್ನು ಅನುಮತಿಸುವ ಅಥವಾ ನಿರ್ಬಂಧಿಸುವ ಅಧಿಕಾರವುಳ್ಳ ಏಕೈಕ ಸಂಸ್ಥೆ ಸೆನ್ಸಾರ್ ಮಂಡಳಿ ಮತ್ತು ಸೆನ್ಸಾರ್ ಮಂಡಳಿಯಿಂದ ಅನುಮೋದಿಸಲಾದ ಚಲನಚಿತ್ರವನ್ನು ಬಾಹ್ಯ ಪ್ರಭಾವಗಳಿಂದ ತೆಗೆದುಹಾಕಲು ಹೇಗೆ ಒತ್ತಾಯಿಸಲಾಯಿತು ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಇಂತಹ ಘಟನೆಗಳು ಸೆನ್ಸಾರ್ ಮಂಡಳಿಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡುತ್ತವೆ ಎಂದು ವೆಟ್ರಿಮಾರನ್ ಹೇಳಿದ್ದಾರೆ.

‘ಅನ್ನಪೂರ್ಣಿ’ ಸಿನಿಮಾ ಲವ್ ಜಿಹಾದ್​ಗೆ ಪರೋಕ್ಷ ಪ್ರಚಾರ ನೀಡುತ್ತಿದೆ ಎಂದು, ಮತಾಂತರಕ್ಕೆ ಪ್ರಚಾರ ನೀಡುತ್ತಿದೆ ಅಲ್ಲದೆ ಸಿನಿಮಾದಲ್ಲಿ ಶ್ರೀರಾಮನನ್ನು ಮಾಂಸಾಹಾರಿ ಎಂದು ಹೇಳಲಾಗಿದೆ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ನಟಿ ನಯನತಾರಾ ಸೇರಿದಂತೆ ಸಿನಿಮಾದ ನಿರ್ದೇಶಕ, ನಿರ್ಮಾಪಕ, ಕತೆಗಾರ, ಸಿನಿಮಾವನ್ನು ಪ್ರದರ್ಶಿಸಿದ್ದ ನೆಟ್​ಫ್ಲಿಕ್ಸ್​ ಹಾಗೂ ಅದರ ಸಿಇಓ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ