AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​ ದೇವರಕೊಂಡ ಡಿಮ್ಯಾಂಡ್​ಗೆ ಬೇಸತ್ತ ನಿರ್ದೇಶಕ; ಇದು ದುರಹಂಕಾರ ಎಂದ ಫ್ಯಾನ್ಸ್​

 ಒಮ್ಮೆ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಗುರುತಿಸಿಕೊಂಡ ನಂತರದಲ್ಲಿ ಒಂದು ಭಾಷೆಗೆ ಮಾತ್ರ ಸೀಮಿತವಾಗೋಕೆ ಯಾರೂ ಇಷ್ಟಪಡುವುದಿಲ್ಲ. ಇದಕ್ಕೆ ವಿಜಯ್​ ಕೂಡ ಹೊರತಾಗಿಲ್ಲ.

ವಿಜಯ್​ ದೇವರಕೊಂಡ ಡಿಮ್ಯಾಂಡ್​ಗೆ ಬೇಸತ್ತ ನಿರ್ದೇಶಕ; ಇದು ದುರಹಂಕಾರ ಎಂದ ಫ್ಯಾನ್ಸ್​
ವಿಜಯ್ ದೇವರಕೊಂಡ
TV9 Web
| Edited By: |

Updated on: Aug 20, 2021 | 5:34 PM

Share

ವಿಜಯ್​ ದೇವರಕೊಂಡ ಅವರು ಟಾಲಿವುಡ್​ನಲ್ಲಿ ಹೊಸ ಟ್ರೆಂಡ್​​ ಸೃಷ್ಟಿ ಮಾಡಿದ್ದಾರೆ. ಅವರ ನಟನೆಯ ‘ಅರ್ಜುನ್​ ರೆಡ್ಡಿ’  ಹಾಗೂ ‘ಗೀತ ಗೋವಿಂದಂ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಸದ್ಯ ಪುರಿ ಜಗನ್ನಾಥ್​ ನಿರ್ದೇಶನದ ‘ಲೈಗರ್​’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿಯಾಗಿದ್ದಾರೆ. ಈ ಚಿತ್ರ ಹಿಂದಿಯಲ್ಲೂ ತೆರೆಗೆ ಬರುತ್ತಿದ್ದು, ಈ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಹೀಗಿರುವಾಗಲೇ ಟಾಲಿವುಡ್​ ಅಂಗಳದಿಂದ ಹೊಸ ವದಂತಿಯೊಂದು ಕೇಳಿ ಬಂದಿದೆ. ವಿಜಯ್​ ಇಟ್ಟಿರುವ ಬೇಡಿಕೆಗೆ ನಿರ್ದೇಶಕರು ಕಂಗಾಲಾಗಿದ್ದಾರೆ ಎನ್ನುವ ವರದಿ ಬಿತ್ತರವಾಗಿದೆ. 

ಒಮ್ಮೆ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಗುರುತಿಸಿಕೊಂಡ ನಂತರದಲ್ಲಿ ಒಂದು ಭಾಷೆಗೆ ಮಾತ್ರ ಸೀಮಿತವಾಗೋಕೆ ಯಾರೂ ಇಷ್ಟಪಡುವುದಿಲ್ಲ. ಇದಕ್ಕೆ ವಿಜಯ್​ ಕೂಡ ಹೊರತಾಗಿಲ್ಲ. ‘ಲೈಗರ್​’ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿರುವ ಅವರು ಮುಂದಿನ ಸಿನಿಮಾಗಳು ಕೂಡ ಹಾಗೆಯೇ ಇರಬೇಕು ಎಂದು ಇಚ್ಛಿಸುತ್ತಿದ್ದಾರೆ. ಖ್ಯಾತ ನಿರ್ದೇಶಕ ಸುಕುಮಾರ್ ಜತೆ ವಿಜಯ್​ ಸಿನಿಮಾ ಮಾಡುತ್ತಿದ್ದು, ಈ ಚಿತ್ರ ಪ್ಯಾನ್​ ಇಂಡಿಯಾ ಆಗಿರಲಿದೆ ಎನ್ನಲಾಗಿದೆ. ಆದರೆ, ಮತ್ತೋರ್ವ ನಿರ್ದೇಶಕ ಶಿವ ನಿರ್ವಣಗೆ ಇದು ಸಾಧ್ಯವಾಗುತ್ತಿಲ್ಲ.

ಶಿವ ನಿರ್ವಣ ಹಾಗೂ ವಿಜಯ್​ ಸಿನಿಮಾ ಮಾಡುತ್ತಿದ್ದಾರೆ. ಇದು ಕೇವಲ ತೆಲುಗಿನಲ್ಲಿ ರಿಲೀಸ್​ ಮಾಡಬೇಕು ಎನ್ನುವ ಆಲೋಚನೆ ನಿರ್ದೇಶಕ ಹಾಗೂ ನಿರ್ಮಾಪಕರದ್ದು. ಆದರೆ, ವಿಜಯ್​ ಈಗ ಮನಸ್ಸು ಬದಲಾಯಿಸಿದ್ದಾರೆ. ಸ್ಕ್ರಿಪ್ಟ್​ ಬದಲಾಯಿಸಿ, ಸಿನಿಮಾ ಪ್ಯಾನ್​ ಇಂಡಿಯಾ ಮಾಡಿ ಎನ್ನುವ ಸೂಚನೆ ನಿರ್ದೇಶಕರಿಗೆ ನೀಡಿದ್ದಾರೆ ವಿಜಯ್​. ಇದಕ್ಕೆ ಒಪ್ಪಿದ್ದ ಶಿವ ಕಥೆಯಲ್ಲಿ ಬದಲಾವಣೆ ಮಾಡಿದ್ದಾರೆ. ಆದರೆ, ವಿಜಯ್​ಗೆ ಇದು ತೃಪ್ತಿ ನೀಡಿಲ್ಲ. ಇನ್ನೂ ಕೆಲ ಪ್ರಮುಖ ಬದಲಾವಣೆಗೆ ಅವರು ನಿರ್ದೇಶಿಸಿದ್ದಾರೆ ಎನ್ನಲಾಗಿದೆ. ಹಾಗೆ ಮಾಡಿದರೆ, ಬಜೆಟ್​ ಹೆಚ್ಚುತ್ತದೆ. ಇದನ್ನು ಭರಿಸೋಕೆ ನಿರ್ಮಾಪಕರು ರೆಡಿ ಇಲ್ಲ. ಈ ಕಾರಣಕ್ಕೆ ಶಿವ ಬೇಸತ್ತಿದ್ದಾರೆ ಎನ್ನಲಾಗುತ್ತಿದೆ.

ಈ ವಿಚಾರ ಕೇಳಿದ ಅಭಿಮಾನಿಗಳು ವಿಜಯ್​ಗೆ ದುರಹಂಕಾರ ಎಂದು ಹೇಳಿದ್ದಾರೆ. ಸಿನಿಮಾ ಒಪ್ಪಿಕೊಳ್ಳುವಾಗಲೇ ಈ ಬಗ್ಗೆ ಹೇಳಬೇಕಿತ್ತು ಎಂದು ಕಿವಿಮಾತು ನುಡಿದಿದ್ದಾರೆ. ಇನ್ನೂ ಕೆಲವರು ವಿಜಯ್​ ಹೀಗೆ ನಿರೀಕ್ಷಿಸುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ತಮ್ಮ ನೆಚ್ಚಿನ ನಟನ ಪರ ಬ್ಯಾಟ್​ ಬೀಸಿದ್ದಾರೆ. ಸದ್ಯ, ಈ ವಿಚಾರ ಬಾಲಿವುಡ್​ ಅಂಗಳದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ವಿಜಯ್​ ದೇವರಕೊಂಡ ಜೊತೆ ಸೇರಿಕೊಂಡು ಸೈಲೆಂಟಾಗಿ ಮತ್ತೊಂದು ಸಾಧನೆ ಮಾಡಿದ ರಶ್ಮಿಕಾ ಮಂದಣ್ಣ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?