AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಚ್ಛೇದನವನ್ನು ಸಂಭ್ರಮಿಸಬೇಕು’; ಆಮಿರ್​-ಕಿರಣ್​ಗೆ ಕಿವಿಮಾತು ಹೇಳಿದ ಖ್ಯಾತ ನಿರ್ದೇಶಕ

ಆಮಿರ್​-ಕಿರಣ್​ ವಿಚ್ಛೇದನಕ್ಕೆ ಸಂಬಂಧಿಸಿ ನಿರ್ದೇಶಕ ರಾಮ್​ ಗೋಪಾಲ್​ ವರ್ಮ ಪ್ರತಿಕ್ರಿಯೆ ನೀಡಿದ್ದಾರೆ. ವಿಚ್ಛೇದನವನ್ನು ಸಂಭ್ರಮಿಸಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

‘ವಿಚ್ಛೇದನವನ್ನು ಸಂಭ್ರಮಿಸಬೇಕು’; ಆಮಿರ್​-ಕಿರಣ್​ಗೆ ಕಿವಿಮಾತು ಹೇಳಿದ ಖ್ಯಾತ ನಿರ್ದೇಶಕ
‘ವಿಚ್ಛೇದನವನ್ನು ಸಂಭ್ರಮಿಸಬೇಕು’; ಆಮಿರ್​-ಕಿರಣ್​ಗೆ ಕಿವಿಮಾತು ಹೇಳಿದ ಖ್ಯಾತ ನಿರ್ದೇಶಕ
TV9 Web
| Edited By: |

Updated on: Jul 04, 2021 | 3:07 PM

Share

ಬಾಲಿವುಡ್​ ನಟ ಆಮಿರ್​ ಖಾನ್​ ಹಾಗೂ ಅವರ ಪತ್ನಿ ಕಿರಣ್​ ರಾವ್​ ವಿಚ್ಛೇದನ ಪಡೆಯುವ ಮೂಲಕ 15 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡಿದ್ದಾರೆ. ಅವರು ವಿಚ್ಛೇದನ ಘೋಷಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಆಮಿರ್​ ಅವರನ್ನು ಟ್ರೋಲ್​ ಮಾಡಿದ್ದಾರೆ. ‘ದಂಗಲ್​’ ಚಿತ್ರದ ನಟಿ ಫಾತಿಮಾ ಶೇಖ್​ಗಾಗಿ ಆಮಿರ್​ ವಿಚ್ಛೇದನ ಪಡೆದರು ಎಂದು ಕೆಲವರು ಬರೆದುಕೊಂಡಿದ್ದಾರೆ. ಆಮಿರ್​-ಕಿರಣ್​ ವಿಚ್ಛೇದನಕ್ಕೆ ಸಂಬಂಧಿಸಿ ನಿರ್ದೇಶಕ ರಾಮ್​ ಗೋಪಾಲ್​ ವರ್ಮ ಪ್ರತಿಕ್ರಿಯೆ ನೀಡಿದ್ದಾರೆ. ವಿಚ್ಛೇದನವನ್ನು ಸಂಭ್ರಮಿಸಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಸರಣಿ ಟ್ವೀಟ್​ ಮಾಡಿರುವ ಆರ್​ಜಿವಿ, ‘ಆಮಿರ್​-ಕಿರಣ್​ ವಿಚ್ಛೇದನ ಪಡೆದುಕೊಂಡಿದ್ದಾರೆ. ಇದರಿಂದ ಅವರಿಗೆ ಸಮಸ್ಯೆ ಇಲ್ಲ. ಆದರೆ, ಉಳಿದವರು ಚಿಂತಿಸುತ್ತಿದ್ದಾರೆ. ಟ್ರೋಲ್​ ಪೇಜ್​ಗಳು ಟ್ರೋಲ್​ ಮಾಡುತ್ತಿವೆ. ಅದೂ ವೈಯಕ್ತಿಕವಾಗಿ’ ಎಂದಿದ್ದಾರೆ.

‘ಆಮಿರ್‌ ಖಾನ್ ಮತ್ತು ಕಿರಣ್‌ ರಾವ್ ನೀವು ಒಬ್ಬರಿಗೊಬ್ಬರು ಒಳ್ಳೆಯದನ್ನು ಬಯಸುತ್ತಿದ್ದೀರಿ. ನೀವು ಮಾಡುತ್ತಿರುವ ಈ ಕಾರ್ಯದಿಂದ ಭವಿಷ್ಯದಲ್ಲಿ ಸಂತೋಷ ಸಿಗಲಿದೆ. ನೀವು ತೆಗೆದುಕೊಳ್ಳುತ್ತಿರುವ ನಿರ್ಧಾರ ವೈಯಕ್ತಿಕವಾದುದ್ದು ಮತ್ತು ಅದಕ್ಕೆ ಕಾರಣ ನಿಮಗೆ ಮಾತ್ರ ಚೆನ್ನಾಗಿ ಗೊತ್ತು. ಹೀಗಾಗಿ, ಟ್ರೋಲ್​​​​ಗಳ ಬಗ್ಗೆ ಚಿಂತೆ ಬೇಡ’ ಎಂದಿದ್ದಾರೆ ಅವರು.

‘ಮದುವೆಗಿಂತ ಡೈವೋರ್ಸ್​ಅನ್ನು ಸಂಭ್ರಮಿಸಬೇಕು. ಏಕೆಂದರೆ ಜ್ಞಾನ ಮತ್ತು ಬುದ್ಧಿವಂತಿಕೆಯಿಂದ ವಿಚ್ಛೇದನ ಸಂಭವಿಸುತ್ತದೆ. ಅಜ್ಞಾನ ಮತ್ತು ಮೂರ್ಖತನದಿಂದ ವಿವಾಹ ನಡೆಯುತ್ತದೆ’ ಎಂದು ಆರ್​ಜಿವಿ ಹೇಳಿದ್ದಾರೆ.

1995ರಲ್ಲಿ ತೆರೆಗೆ ಬಂದಿದ್ದ ‘ರಂಗೀಲಾ’ ಸಿನಿಮಾಗೆ ರಾಮ್​ ಗೋಪಾಲ್​ ವರ್ಮಾ ನಿರ್ದೇಶನವಿತ್ತು. ಈ ಚಿತ್ರದಲ್ಲಿ ಆಮಿರ್​ ಖಾನ್​ ಹೀರೋ ಆಗಿ ಕಾಣಿಸಿಕೊಂಡಿದ್ದರು. ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿತ್ತು. ಈ ಚಿತ್ರ ತೆರೆಕಂಡ ನಂತರದಲ್ಲಿ ಆಮಿರ್​ ಹಾಗೂ ಆರ್​ಜಿವಿ ನಡುವಿನ ಫ್ರೆಂಡ್​ಶಿಪ್​ ಮುರಿದು ಬಿದ್ದಿತ್ತು. ಇದರಲ್ಲಿ ನನ್ನದೇ ತಪ್ಪಿದೆ ಎಂದು ಆರ್​ಜಿವಿ ಇತ್ತೀಚೆಗೆ ಹೇಳಿಕೊಂಡಿದ್ದರು.

ಇದನ್ನೂ ಓದಿ:

ಆಮೀರ್ ಖಾನ್​​ಗಿಂತ ವೇಯ್ಟರ್​ ಉತ್ತಮವಾಗಿ ಆ್ಯಕ್ಟ್​ ಮಾಡಿದ್ದ; ಆರ್​ಜಿವಿ ಹೀಗೆ ಹೇಳಿದ್ದರ ಹಿಂದಿತ್ತು ಬೇರೆ ಉದ್ದೇಶ

Aamir Khan: ಆಮಿರ್​​ ಖಾನ್​-ಕಿರಣ್​ ರಾವ್​ ವಿಚ್ಛೇದನ; 15 ವರ್ಷದ ದಾಂಪತ್ಯ ಜೀವನ ಅಂತ್ಯ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?