AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಚ್ಛೇದನವನ್ನು ಸಂಭ್ರಮಿಸಬೇಕು’; ಆಮಿರ್​-ಕಿರಣ್​ಗೆ ಕಿವಿಮಾತು ಹೇಳಿದ ಖ್ಯಾತ ನಿರ್ದೇಶಕ

ಆಮಿರ್​-ಕಿರಣ್​ ವಿಚ್ಛೇದನಕ್ಕೆ ಸಂಬಂಧಿಸಿ ನಿರ್ದೇಶಕ ರಾಮ್​ ಗೋಪಾಲ್​ ವರ್ಮ ಪ್ರತಿಕ್ರಿಯೆ ನೀಡಿದ್ದಾರೆ. ವಿಚ್ಛೇದನವನ್ನು ಸಂಭ್ರಮಿಸಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

‘ವಿಚ್ಛೇದನವನ್ನು ಸಂಭ್ರಮಿಸಬೇಕು’; ಆಮಿರ್​-ಕಿರಣ್​ಗೆ ಕಿವಿಮಾತು ಹೇಳಿದ ಖ್ಯಾತ ನಿರ್ದೇಶಕ
‘ವಿಚ್ಛೇದನವನ್ನು ಸಂಭ್ರಮಿಸಬೇಕು’; ಆಮಿರ್​-ಕಿರಣ್​ಗೆ ಕಿವಿಮಾತು ಹೇಳಿದ ಖ್ಯಾತ ನಿರ್ದೇಶಕ
TV9 Web
| Edited By: |

Updated on: Jul 04, 2021 | 3:07 PM

Share

ಬಾಲಿವುಡ್​ ನಟ ಆಮಿರ್​ ಖಾನ್​ ಹಾಗೂ ಅವರ ಪತ್ನಿ ಕಿರಣ್​ ರಾವ್​ ವಿಚ್ಛೇದನ ಪಡೆಯುವ ಮೂಲಕ 15 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡಿದ್ದಾರೆ. ಅವರು ವಿಚ್ಛೇದನ ಘೋಷಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಆಮಿರ್​ ಅವರನ್ನು ಟ್ರೋಲ್​ ಮಾಡಿದ್ದಾರೆ. ‘ದಂಗಲ್​’ ಚಿತ್ರದ ನಟಿ ಫಾತಿಮಾ ಶೇಖ್​ಗಾಗಿ ಆಮಿರ್​ ವಿಚ್ಛೇದನ ಪಡೆದರು ಎಂದು ಕೆಲವರು ಬರೆದುಕೊಂಡಿದ್ದಾರೆ. ಆಮಿರ್​-ಕಿರಣ್​ ವಿಚ್ಛೇದನಕ್ಕೆ ಸಂಬಂಧಿಸಿ ನಿರ್ದೇಶಕ ರಾಮ್​ ಗೋಪಾಲ್​ ವರ್ಮ ಪ್ರತಿಕ್ರಿಯೆ ನೀಡಿದ್ದಾರೆ. ವಿಚ್ಛೇದನವನ್ನು ಸಂಭ್ರಮಿಸಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಸರಣಿ ಟ್ವೀಟ್​ ಮಾಡಿರುವ ಆರ್​ಜಿವಿ, ‘ಆಮಿರ್​-ಕಿರಣ್​ ವಿಚ್ಛೇದನ ಪಡೆದುಕೊಂಡಿದ್ದಾರೆ. ಇದರಿಂದ ಅವರಿಗೆ ಸಮಸ್ಯೆ ಇಲ್ಲ. ಆದರೆ, ಉಳಿದವರು ಚಿಂತಿಸುತ್ತಿದ್ದಾರೆ. ಟ್ರೋಲ್​ ಪೇಜ್​ಗಳು ಟ್ರೋಲ್​ ಮಾಡುತ್ತಿವೆ. ಅದೂ ವೈಯಕ್ತಿಕವಾಗಿ’ ಎಂದಿದ್ದಾರೆ.

‘ಆಮಿರ್‌ ಖಾನ್ ಮತ್ತು ಕಿರಣ್‌ ರಾವ್ ನೀವು ಒಬ್ಬರಿಗೊಬ್ಬರು ಒಳ್ಳೆಯದನ್ನು ಬಯಸುತ್ತಿದ್ದೀರಿ. ನೀವು ಮಾಡುತ್ತಿರುವ ಈ ಕಾರ್ಯದಿಂದ ಭವಿಷ್ಯದಲ್ಲಿ ಸಂತೋಷ ಸಿಗಲಿದೆ. ನೀವು ತೆಗೆದುಕೊಳ್ಳುತ್ತಿರುವ ನಿರ್ಧಾರ ವೈಯಕ್ತಿಕವಾದುದ್ದು ಮತ್ತು ಅದಕ್ಕೆ ಕಾರಣ ನಿಮಗೆ ಮಾತ್ರ ಚೆನ್ನಾಗಿ ಗೊತ್ತು. ಹೀಗಾಗಿ, ಟ್ರೋಲ್​​​​ಗಳ ಬಗ್ಗೆ ಚಿಂತೆ ಬೇಡ’ ಎಂದಿದ್ದಾರೆ ಅವರು.

‘ಮದುವೆಗಿಂತ ಡೈವೋರ್ಸ್​ಅನ್ನು ಸಂಭ್ರಮಿಸಬೇಕು. ಏಕೆಂದರೆ ಜ್ಞಾನ ಮತ್ತು ಬುದ್ಧಿವಂತಿಕೆಯಿಂದ ವಿಚ್ಛೇದನ ಸಂಭವಿಸುತ್ತದೆ. ಅಜ್ಞಾನ ಮತ್ತು ಮೂರ್ಖತನದಿಂದ ವಿವಾಹ ನಡೆಯುತ್ತದೆ’ ಎಂದು ಆರ್​ಜಿವಿ ಹೇಳಿದ್ದಾರೆ.

1995ರಲ್ಲಿ ತೆರೆಗೆ ಬಂದಿದ್ದ ‘ರಂಗೀಲಾ’ ಸಿನಿಮಾಗೆ ರಾಮ್​ ಗೋಪಾಲ್​ ವರ್ಮಾ ನಿರ್ದೇಶನವಿತ್ತು. ಈ ಚಿತ್ರದಲ್ಲಿ ಆಮಿರ್​ ಖಾನ್​ ಹೀರೋ ಆಗಿ ಕಾಣಿಸಿಕೊಂಡಿದ್ದರು. ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿತ್ತು. ಈ ಚಿತ್ರ ತೆರೆಕಂಡ ನಂತರದಲ್ಲಿ ಆಮಿರ್​ ಹಾಗೂ ಆರ್​ಜಿವಿ ನಡುವಿನ ಫ್ರೆಂಡ್​ಶಿಪ್​ ಮುರಿದು ಬಿದ್ದಿತ್ತು. ಇದರಲ್ಲಿ ನನ್ನದೇ ತಪ್ಪಿದೆ ಎಂದು ಆರ್​ಜಿವಿ ಇತ್ತೀಚೆಗೆ ಹೇಳಿಕೊಂಡಿದ್ದರು.

ಇದನ್ನೂ ಓದಿ:

ಆಮೀರ್ ಖಾನ್​​ಗಿಂತ ವೇಯ್ಟರ್​ ಉತ್ತಮವಾಗಿ ಆ್ಯಕ್ಟ್​ ಮಾಡಿದ್ದ; ಆರ್​ಜಿವಿ ಹೀಗೆ ಹೇಳಿದ್ದರ ಹಿಂದಿತ್ತು ಬೇರೆ ಉದ್ದೇಶ

Aamir Khan: ಆಮಿರ್​​ ಖಾನ್​-ಕಿರಣ್​ ರಾವ್​ ವಿಚ್ಛೇದನ; 15 ವರ್ಷದ ದಾಂಪತ್ಯ ಜೀವನ ಅಂತ್ಯ

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು