AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾಷಣ ಚೆನ್ನಾಗಿ ಮಾಡ್ತೀರಾ’; ಬಿಗ್​ ಬಾಸ್​ ವೇದಿಕೆ ಮೇಲೆ ದಿವ್ಯಾ ಉರುಡುಗಗೆ ಸುದೀಪ್ ಎಚ್ಚರಿಕೆ

Bigg Boss 8 Second Innings: ಈ ಬಾರಿ ಪ್ರತಿ ಎಪಿಸೋಡ್​ಗಳನ್ನು ಸ್ಪರ್ಧಿಗಳು ನೋಡಿಕೊಂಡು ಬಂದಿದ್ದಾರೆ. ಯಾವುದೇ ಕಾರಣಕ್ಕೂ ಒಂದೇ ವ್ಯಕ್ತಿಗೆ ಸ್ಟಿಕ್​ ಆಗಬಾರದು ಎನ್ನುವ ನಿರ್ಧಾರ ತೆಗೆದುಕೊಂಡಿದ್ದಾರೆ.

‘ಭಾಷಣ ಚೆನ್ನಾಗಿ ಮಾಡ್ತೀರಾ’; ಬಿಗ್​ ಬಾಸ್​ ವೇದಿಕೆ ಮೇಲೆ ದಿವ್ಯಾ ಉರುಡುಗಗೆ ಸುದೀಪ್ ಎಚ್ಚರಿಕೆ
ದಿವ್ಯಾ ಉರುಡುಗ
ರಾಜೇಶ್ ದುಗ್ಗುಮನೆ
| Edited By: |

Updated on:Jun 23, 2021 | 7:11 PM

Share

ಬಿಗ್​ ಬಾಸ್​ ಮೊದಲ ಇನ್ನಿಂಗ್ಸ್​ನಲ್ಲಿ ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಬಗ್ಗೆ ವೀಕ್ಷಕರಿಂದ ಇದ್ದಿದ್ದು ಒಂದೇ ಆರೋಪ. ಇಬ್ಬರೂ ಒಂದೇ ವ್ಯಕ್ತಿ ಸುತ್ತ ಸುತ್ತುತ್ತಿದ್ದಾರೆ ಎಂದು. ಈಗ ಎರಡನೇ ಇನ್ನಿಂಗ್ಸ್​ ಆರಂಭವಾಗಿದೆ. ಮಹಾ ಸಂಚಿಕೆ ಮೂಲಕ ಎಲ್ಲಾ ಸ್ಪರ್ಧಿಗಳೂ ಮನೆ ಒಳಗೆ ತೆರಳುತ್ತಿದ್ದಾರೆ. ಈ ವೇಳೆ ಇಬ್ಬರೂ ದಿವ್ಯಾಗೆ ಸುದೀಪ್​ ಎಚ್ಚರಿಕೆ ನೀಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು 70 ದಿನ ಕಳೆದಿದ್ದರು. ಈ ವೇಳೆ ದಿವ್ಯಾ ಸುರೇಶ್​, ಮಂಜು ಪಾವಗಡ ಜತೆ ಹೆಚ್ಚು ಒಡನಾಟ ಹೊಂದಿದ್ದರೆ, ಅರವಿಂದ್ ಕೆ.ಪಿ. ಜತೆ ದಿವ್ಯಾ ಉರುಡುಗ ಹೆಚ್ಚು ಆಪ್ತವಾಗಿದ್ದರು. ಮನೆ ಮಂದಿ ದಿವ್ಯಾಗೆ ಮಂಜು ಬಾಲ ಎಂದು ಹೀಯಾಳಿಸುತ್ತಿದ್ದರು. ದಿವ್ಯಾ ಉರುಡುಗಗೆ ಎದುರಿನಿಂದ ಯಾರೂ ಏನು ಹೇಳದಿದ್ದರೂ ಹಿಂದಿನಿಂದ ಮಾತನಾಡಿಕೊಳ್ಳುತ್ತಿದ್ದರು.

ಈ ಬಾರಿ ಪ್ರತಿ ಎಪಿಸೋಡ್​ಗಳನ್ನು ಸ್ಪರ್ಧಿಗಳು ನೋಡಿಕೊಂಡು ಬಂದಿದ್ದಾರೆ. ಯಾವುದೇ ಕಾರಣಕ್ಕೂ ಒಂದೇ ವ್ಯಕ್ತಿಗೆ ಸ್ಟಿಕ್​ ಆಗಬಾರದು ಎನ್ನುವ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನು ಬಿಗ್​ ಬಾಸ್​​​ ವೇದಿಕೆ ಮೇಲೆ ಇಬ್ಬರೂ ಒಪ್ಪಿಕೊಂಡಿದ್ದಾರೆ. ಆದರೆ, ಮರುಕ್ಷಣವೇ ತಮ್ಮ ಹಳೆ ಚಾಳಿ ಮುಂದುವರಿಸಿದರು.

ನೀವು ಕ್ಯಾಪ್ಟನ್​ ಆದಿರಿ ಎಂದುಕೊಳ್ಳಿ, ಯಾರನ್ನು ಸೇವ್​ ಮಾಡ್ತೀರಾ ಎಂದು ಸುದೀಪ್​ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ದಿವ್ಯಾ ಸುರೇಶ್​, ಮಂಜು ಹೆಸರನ್ನು ಹೇಳಿದರು. ದಿವ್ಯಾ ಉರುಡುಗ ಎಂದಿನಂತೆ ಅರವಿಂದ್​ ಹೆಸರನ್ನು ಉಚ್ಛರಿಸಿದರು.

ಆಗ ಸುದೀಪ್​, ನೀವಿಬ್ಬರೂ ಭಾಷಣ ಚೆನ್ನಾಗಿ ಮಾಡ್ತೀರಾ. ಆದ್ರೆ ಇಬ್ಬರೂ ಎಲ್ಲಿದ್ದೀರೋ ಅಲ್ಲಿಯೇ ಇದ್ದೀರಾ. ಏನೂ ಬದಲಾಗಲಿಲ್ಲ ಎಂದರು.  ಆಗ ದಿವ್ಯಾ ಸುರೇಶ್, ಪ್ರಿಯಾಂಕ ತಿಮ್ಮೇಶ್​ ಹೆಸರು ಹೇಳಿದರು. ಆದರೆ, ದಿವ್ಯಾ ಉರುಡುಗ ಮಾತ್ರ ತಮ್ಮ ನಿರ್ಧಾರ ಬದಲಿಸಲಿಲ್ಲ.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನಲ್ಲಿ ರಘು ಗೌಡ ಕಾಲಿಗೆ ಬಿದ್ದಿದ್ದೇಕೆ ವೈಷ್ಣವಿ?

Published On - 6:51 pm, Wed, 23 June 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್