AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾಷಣ ಚೆನ್ನಾಗಿ ಮಾಡ್ತೀರಾ’; ಬಿಗ್​ ಬಾಸ್​ ವೇದಿಕೆ ಮೇಲೆ ದಿವ್ಯಾ ಉರುಡುಗಗೆ ಸುದೀಪ್ ಎಚ್ಚರಿಕೆ

Bigg Boss 8 Second Innings: ಈ ಬಾರಿ ಪ್ರತಿ ಎಪಿಸೋಡ್​ಗಳನ್ನು ಸ್ಪರ್ಧಿಗಳು ನೋಡಿಕೊಂಡು ಬಂದಿದ್ದಾರೆ. ಯಾವುದೇ ಕಾರಣಕ್ಕೂ ಒಂದೇ ವ್ಯಕ್ತಿಗೆ ಸ್ಟಿಕ್​ ಆಗಬಾರದು ಎನ್ನುವ ನಿರ್ಧಾರ ತೆಗೆದುಕೊಂಡಿದ್ದಾರೆ.

‘ಭಾಷಣ ಚೆನ್ನಾಗಿ ಮಾಡ್ತೀರಾ’; ಬಿಗ್​ ಬಾಸ್​ ವೇದಿಕೆ ಮೇಲೆ ದಿವ್ಯಾ ಉರುಡುಗಗೆ ಸುದೀಪ್ ಎಚ್ಚರಿಕೆ
ದಿವ್ಯಾ ಉರುಡುಗ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Jun 23, 2021 | 7:11 PM

ಬಿಗ್​ ಬಾಸ್​ ಮೊದಲ ಇನ್ನಿಂಗ್ಸ್​ನಲ್ಲಿ ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಬಗ್ಗೆ ವೀಕ್ಷಕರಿಂದ ಇದ್ದಿದ್ದು ಒಂದೇ ಆರೋಪ. ಇಬ್ಬರೂ ಒಂದೇ ವ್ಯಕ್ತಿ ಸುತ್ತ ಸುತ್ತುತ್ತಿದ್ದಾರೆ ಎಂದು. ಈಗ ಎರಡನೇ ಇನ್ನಿಂಗ್ಸ್​ ಆರಂಭವಾಗಿದೆ. ಮಹಾ ಸಂಚಿಕೆ ಮೂಲಕ ಎಲ್ಲಾ ಸ್ಪರ್ಧಿಗಳೂ ಮನೆ ಒಳಗೆ ತೆರಳುತ್ತಿದ್ದಾರೆ. ಈ ವೇಳೆ ಇಬ್ಬರೂ ದಿವ್ಯಾಗೆ ಸುದೀಪ್​ ಎಚ್ಚರಿಕೆ ನೀಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು 70 ದಿನ ಕಳೆದಿದ್ದರು. ಈ ವೇಳೆ ದಿವ್ಯಾ ಸುರೇಶ್​, ಮಂಜು ಪಾವಗಡ ಜತೆ ಹೆಚ್ಚು ಒಡನಾಟ ಹೊಂದಿದ್ದರೆ, ಅರವಿಂದ್ ಕೆ.ಪಿ. ಜತೆ ದಿವ್ಯಾ ಉರುಡುಗ ಹೆಚ್ಚು ಆಪ್ತವಾಗಿದ್ದರು. ಮನೆ ಮಂದಿ ದಿವ್ಯಾಗೆ ಮಂಜು ಬಾಲ ಎಂದು ಹೀಯಾಳಿಸುತ್ತಿದ್ದರು. ದಿವ್ಯಾ ಉರುಡುಗಗೆ ಎದುರಿನಿಂದ ಯಾರೂ ಏನು ಹೇಳದಿದ್ದರೂ ಹಿಂದಿನಿಂದ ಮಾತನಾಡಿಕೊಳ್ಳುತ್ತಿದ್ದರು.

ಈ ಬಾರಿ ಪ್ರತಿ ಎಪಿಸೋಡ್​ಗಳನ್ನು ಸ್ಪರ್ಧಿಗಳು ನೋಡಿಕೊಂಡು ಬಂದಿದ್ದಾರೆ. ಯಾವುದೇ ಕಾರಣಕ್ಕೂ ಒಂದೇ ವ್ಯಕ್ತಿಗೆ ಸ್ಟಿಕ್​ ಆಗಬಾರದು ಎನ್ನುವ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನು ಬಿಗ್​ ಬಾಸ್​​​ ವೇದಿಕೆ ಮೇಲೆ ಇಬ್ಬರೂ ಒಪ್ಪಿಕೊಂಡಿದ್ದಾರೆ. ಆದರೆ, ಮರುಕ್ಷಣವೇ ತಮ್ಮ ಹಳೆ ಚಾಳಿ ಮುಂದುವರಿಸಿದರು.

ನೀವು ಕ್ಯಾಪ್ಟನ್​ ಆದಿರಿ ಎಂದುಕೊಳ್ಳಿ, ಯಾರನ್ನು ಸೇವ್​ ಮಾಡ್ತೀರಾ ಎಂದು ಸುದೀಪ್​ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ದಿವ್ಯಾ ಸುರೇಶ್​, ಮಂಜು ಹೆಸರನ್ನು ಹೇಳಿದರು. ದಿವ್ಯಾ ಉರುಡುಗ ಎಂದಿನಂತೆ ಅರವಿಂದ್​ ಹೆಸರನ್ನು ಉಚ್ಛರಿಸಿದರು.

ಆಗ ಸುದೀಪ್​, ನೀವಿಬ್ಬರೂ ಭಾಷಣ ಚೆನ್ನಾಗಿ ಮಾಡ್ತೀರಾ. ಆದ್ರೆ ಇಬ್ಬರೂ ಎಲ್ಲಿದ್ದೀರೋ ಅಲ್ಲಿಯೇ ಇದ್ದೀರಾ. ಏನೂ ಬದಲಾಗಲಿಲ್ಲ ಎಂದರು.  ಆಗ ದಿವ್ಯಾ ಸುರೇಶ್, ಪ್ರಿಯಾಂಕ ತಿಮ್ಮೇಶ್​ ಹೆಸರು ಹೇಳಿದರು. ಆದರೆ, ದಿವ್ಯಾ ಉರುಡುಗ ಮಾತ್ರ ತಮ್ಮ ನಿರ್ಧಾರ ಬದಲಿಸಲಿಲ್ಲ.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನಲ್ಲಿ ರಘು ಗೌಡ ಕಾಲಿಗೆ ಬಿದ್ದಿದ್ದೇಕೆ ವೈಷ್ಣವಿ?

Published On - 6:51 pm, Wed, 23 June 21

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ