AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗ ಯಾವುದೂ ಮೊದಲಿನ ರೀತಿ ಇಲ್ಲ; ಕೊನೆಗೂ ಸತ್ಯ ಒಪ್ಪಿಕೊಂಡ ದಿವ್ಯಾ

ಬಿಗ್​ ಬಾಸ್​ ಮನೆಯಲ್ಲಿ ಮಂಜು ಸರಿಯಾಗಿ ಮಾತನಾಡುತ್ತಿಲ್ಲ ಎನ್ನುವ ವಿಚಾರ ದಿವ್ಯಾಗೆ ಬೇಸರ ಮೂಡಿಸಿದೆ. ಮಂಜು ಜತೆ ಮಾತನಾಡೋಕೆ ಅವರು ಕಾರಣವನ್ನೂ ಹುಡುಕಿದ್ದಾರೆ.

ಈಗ ಯಾವುದೂ ಮೊದಲಿನ ರೀತಿ ಇಲ್ಲ; ಕೊನೆಗೂ ಸತ್ಯ ಒಪ್ಪಿಕೊಂಡ ದಿವ್ಯಾ
ಮಂಜು-ದಿವ್ಯಾ ಸುರೇಶ್​
ರಾಜೇಶ್ ದುಗ್ಗುಮನೆ
|

Updated on: Mar 27, 2021 | 9:42 PM

Share

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಸುರೇಶ್​ ತುಂಬಾನೇ ಬದಲಾಗಿದ್ದಾರೆ. ಮಂಜು ಪಾವಗಡ ಜತೆಗೆ ಸುತ್ತಾಡುತ್ತಾ ಇದ್ದ ಅವರು ಈಗ ಪ್ರಶಾಂತ್​ ಸಂಬರಗಿಗೆ ಹತ್ತಿರವಾಗುತ್ತಿದ್ದಾರೆ. ಈ ಬದಲಾವಣೆಯನ್ನು ವೀಕ್ಷಕರು ಕೂಡ ಗಮನಿಸಿದ್ದಾರೆ. ಈ ಮಧ್ಯೆ ನಾವಿಬ್ಬರೂ ಮೊದಲಿನಂತೆ ಇಲ್ಲ ಎಂದು ದಿವ್ಯಾ ಉರುಡುಗ ಎದುರು ದಿವ್ಯಾ ಸುರೇಶ್​ ಒಪ್ಪಿಕೊಂಡಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಮಂಜುಗೆ ಕಿಚನ್​ ಡಿಪಾರ್ಟ್​ಮೆಂಡ್ ನೀಡಲಾಗಿದೆ. ಹೀಗಾಗಿ ಅವರು ಶುಕ್ರವಾರದ (ಮಾರ್ಚ್​​ 26) ಎಪಿಸೋಡ್​ನಲ್ಲಿ ಪಾತ್ರೆ ತೊಳೆಯಬೇಕಿತ್ತು. ಆದರೆ, ಮಂಜು ಅಡುಗೆ ಮನೆಗೆ ಹೋಗದೆ ಹೊರ ಭಾಗದಲ್ಲಿ ಕುಳಿತು ಸುದ್ದಿ ಹೇಳುತ್ತಾರೆ ನಿಂತಿದ್ದರು. ಅಷ್ಟೇ ಅಲ್ಲ, ನಾನು ವಾಕಿಂಗ್​ ಮುಗಿಸಿ ಬಂದು ತೊಳೆಯುತ್ತೇನೆ ಕಾಯಿರಿ ಎಂದಿದ್ದರು. ಆದರೆ, ದಿವ್ಯಾ ಕಾದಿಲ್ಲ. ಬದಲಿಗೆ ಅವರು ಪಾತ್ರೆ ತೊಳೆಯುವ ಕೆಲಸ ಮಾಡಿದ್ದಾರೆ. ಇದು ಮಂಜುಗೆ ಬೇಸರ ತರಿಸಿದೆ. ಇದೇ ವಿಚಾರಕ್ಕೆ ಇಬ್ಬರೂ ಮಾತು ಬಿಟ್ಟಿದ್ದರು.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಸರಿಯಾಗಿ ಮಾತನಾಡುತ್ತಿಲ್ಲ ಎನ್ನುವ ವಿಚಾರ ದಿವ್ಯಾಗೆ ಬೇಸರ ಮೂಡಿಸಿದೆ. ಮಂಜು ಜತೆ ಮಾತನಾಡೋಕೆ ಅವರು ಕಾರಣವನ್ನೂ ಹುಡುಕಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಜತೆ ಮಾತನಾಡುವಾಗ ದಿವ್ಯಾ ಸುರೇಶ್​ ಒಂದಷ್ಟು ವಿಚಾರ ಹೇಳಿಕೊಂಡರು. ನನ್ನ ಹಾಗೂ ಮಂಜನ ನಡುವೆ ಮೊದಲಿನ ರೀತಿ ಯಾವುದೂ ಇಲ್ಲ. ಅವನನ್ನು ಮಾತನಾಡಿಸೋಕೆ ನಾನು ತುಂಬಾನೇ ಪ್ರಯತ್ನ ಮಾಡಿದ್ದೇನೆ. ಆದರೆ, ಅದು ಸಾಧ್ಯವಾಗಿಲ್ಲ ಎಂದು ಬೇಸರು ಹೊರ ಹಾಕಿದ್ದಾರೆ.

ಕೊನೆಗೆ ದಿವ್ಯಾ ಉರುಡುಗ ಮಧ್ಯಸ್ಥಿಕೆ ವಹಿಸಿದ ನಂತರ ದಿವ್ಯಾ ಸುರೇಶ್​ ಹಾಗೂ ಮಂಜು ಒಂದಾಗಿದ್ದಾರೆ. ಇಬ್ಬರೂ ಸಿಟ್ಟು ಬಿಟ್ಟು ಪರಸ್ಪರ ಮಾತನಾಡಿದ್ದಾರೆ.

ಇದನ್ನೂ ಓದಿ: Divya Uruduga: ಬಿಗ್​ ಬಾಸ್​ ಮನೆಯಲ್ಲಿರುವ ದಿವ್ಯಾ ಉರುಡುಗಗೆ ಪ್ರಾಣ ಬೆದರಿಕೆ!

BBK8 Elimination: 14 ಸ್ಪರ್ಧಿಗಳ ಪೈಕಿ ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇನಾ?

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು