AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಟ್ಟಾಗಿ ನಡೆಯುತ್ತಿದ್ದದ್ದು ಬಯಲಾಯ್ತು; ಮೊದಲ ಬಾರಿಗೆ ಮಂಜು ವಿರುದ್ಧ ತಿರುಗಿ ಬಿದ್ರು ದಿವ್ಯಾ ಸುರೇಶ್​

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ತಮ್ಮ ನಿಜವಾದ ಆಟ ಶುರು ಮಾಡಿದ್ದಾರೆ. ಮಂಜು ವಿರುದ್ಧ ಎಲ್ಲರನ್ನೂ ಎತ್ತಿಕಟ್ಟುತ್ತಿದ್ದಾರೆ.

ಗುಟ್ಟಾಗಿ ನಡೆಯುತ್ತಿದ್ದದ್ದು ಬಯಲಾಯ್ತು; ಮೊದಲ ಬಾರಿಗೆ ಮಂಜು ವಿರುದ್ಧ ತಿರುಗಿ ಬಿದ್ರು ದಿವ್ಯಾ ಸುರೇಶ್​
ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 27, 2021 | 7:00 AM

Share

ಬಿಗ್​ ಬಾಸ್ ಮನೆಯಲ್ಲಿ ದಿವ್ಯಾ ಸುರೇಶ್​ ಡಬಲ್​ ಗೇಮ್​ ಆಡುತ್ತಿದ್ದಾರೆ. ಮಂಜು ಪಾವಗಡ ಎದುರಿಗೆ ನಗು ನಗುತ್ತಾ ಮಾತನಾಡುವ ಅವರು, ಪ್ರಶಾಂತ್​ ಸಂಬರಗಿ ಎದುರು ಹೋಗಿ ಮಂಜು ವಿರುದ್ಧವೇ ಮಾತನಾಡುತ್ತಾರೆ. ಮಂಜು ಜತೆಗಿನ ಫ್ರೆಂಡ್​ಶಿಪ್​ ಜಾಸ್ತಿ ಆಗಿರುವುದರಿಂದ ನಾನು ವೀಕ್​ ಅನಿಸೋ ತರ ಫೀಲ್​ ಆಯ್ತು ಎಂದು ಹೇಳಿದ್ದರು. ಇದೆಲ್ಲವೂ ಗುಟ್ಟಾಗಿಯೇ ನಡೆಯುತ್ತಾ ಇತ್ತು. ಆದರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಇದೇ ಮೊದಲ ಬಾರಿಗೆ ದಿವ್ಯಾ ಸುರೇಶ್​ ನೇರವಾಗಿ ಮಂಜು ವಿರುದ್ಧ ತಿರುಗಿ ಬಿದ್ದಿದ್ದಾರೆ. ಗುಟ್ಟಾಗಿ ನಡೆಯುತ್ತಿದ್ದಿದ್ದು ಈಗ ಬಯಲಾದಂತಾಗಿದೆ. ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ತಮ್ಮ ನಿಜವಾದ ಆಟ ಶುರು ಮಾಡಿದ್ದಾರೆ. ಮಂಜು ವಿರುದ್ಧ ಎಲ್ಲರನ್ನೂ ಎತ್ತಿಕಟ್ಟುತ್ತಿದ್ದಾರೆ. ಮಂಜು ಆಪ್ತೆ ಎನಿಸಿಕೊಂಡ ದಿವ್ಯಾ ಸುರೇಶ್​ ಬಳಿಯೂ ಚಾಡಿ ಹೇಳುವ ಕೆಲಸ ಮಾಡಿದ್ದರು. ಎಲ್ಲರೂ ಒಂದೊಂದು ಐಡೆಂಟಿಟಿ ಹೊಂದಿದ್ದಾರೆ. ಶುಭಾಗೆ ಅವರದ್ದೇ ಆದ ಚಾರ್ಮ್​ ಇದೆ. ಮಹಿಳೆಯರಲ್ಲಿ ನೀನೇ ಸ್ಟ್ರಾಂಗ್​. ಆದರೆ, ನೀನು ಮಂಜುನ ಬಾಲ ಆಗ್ತಾ ಇದೀಯಾ. ನೆರಳಲ್ಲಿ ಬದುಕುಬೇಡ. ನೀನು ಒಬ್ಬರ ಪ್ರಾಪರ್ಟಿ ಆಗಬಾರದು ಎಂದು ಬುದ್ಧಿ ಹೇಳಿದ್ದರು. ಇದಾದ ಬೆನ್ನಲ್ಲೇ ದಿವ್ಯಾ ಇದೇ ಮೊದಲ ಬಾರಿಗೆ ಮಂಜು ಅವರ ವಿರುದ್ಧವಾಗಿ ಮಾತನಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಮಂಜುಗೆ ಕಿಚನ್​ ಡಿಪಾರ್ಟ್​ಮೆಂಡ್ ನೀಡಲಾಗಿದೆ. ಹೀಗಾಗಿ, ಪಾತ್ರೆ ತೊಳೆಯಬೇಕಿತ್ತು. ಆದರೆ, ಮಂಜು ಅಡುಗೆ ಮನೆಗೆ ಹೋಗದೆ ಹೊರ ಭಾಗದಲ್ಲಿ ಕುಳಿತು ಸುದ್ದಿ ಹೇಳುತ್ತಾರೆ ನಿಂತಿದ್ದರು. ಅಷ್ಟೇ ಅಲ್ಲ, ನಾನು ವಾಕಿಂಗ್​ ಮುಗಿಸಿ ಬಂದು ತೊಳೆಯುತ್ತೇನೆ ಕಾಯಿರಿ ಎಂದಿದ್ದರು.

ಆದರೆ, ದಿವ್ಯಾ ಕಾದಿಲ್ಲ. ಬದಲಿಗೆ ಅವರು ಪಾತ್ರೆ ತೊಳೆಯುವ ಕೆಲಸ ಮಾಡಿದ್ದಾರೆ. ಹೀಗಾಗಿ ನಾನು ಕಿಚನ್​ ಹೋಗಲ್ಲ ಎಂದಿದ್ದಾರೆ ಮಂಜು. ಈ ವಿಚಾರ ದಿವ್ಯಾ ಅವರ ಸಿಟ್ಟಿಗೆ ಕಾರಣವಾಗಿದೆ. ಇಬ್ಬರ ನಡುವೆಯೂ ಈ ವಿಚಾರಕ್ಕೆ ವಾಗ್ವಾದ ಕೂಡ ಏರ್ಪಟ್ಟಿದೆ. ದಿವ್ಯಾ ಸುರೇಶ್​ ನಗೋಕೆ ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ.

ಇದನ್ನೂ ಓದಿ: Divya Uruduga: ಬಿಗ್​ ಬಾಸ್​ ಮನೆಯಲ್ಲಿರುವ ದಿವ್ಯಾ ಉರುಡುಗಗೆ ಪ್ರಾಣ ಬೆದರಿಕೆ!

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್