AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಟ್ಟಾಗಿ ನಡೆಯುತ್ತಿದ್ದದ್ದು ಬಯಲಾಯ್ತು; ಮೊದಲ ಬಾರಿಗೆ ಮಂಜು ವಿರುದ್ಧ ತಿರುಗಿ ಬಿದ್ರು ದಿವ್ಯಾ ಸುರೇಶ್​

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ತಮ್ಮ ನಿಜವಾದ ಆಟ ಶುರು ಮಾಡಿದ್ದಾರೆ. ಮಂಜು ವಿರುದ್ಧ ಎಲ್ಲರನ್ನೂ ಎತ್ತಿಕಟ್ಟುತ್ತಿದ್ದಾರೆ.

ಗುಟ್ಟಾಗಿ ನಡೆಯುತ್ತಿದ್ದದ್ದು ಬಯಲಾಯ್ತು; ಮೊದಲ ಬಾರಿಗೆ ಮಂಜು ವಿರುದ್ಧ ತಿರುಗಿ ಬಿದ್ರು ದಿವ್ಯಾ ಸುರೇಶ್​
ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 27, 2021 | 7:00 AM

Share

ಬಿಗ್​ ಬಾಸ್ ಮನೆಯಲ್ಲಿ ದಿವ್ಯಾ ಸುರೇಶ್​ ಡಬಲ್​ ಗೇಮ್​ ಆಡುತ್ತಿದ್ದಾರೆ. ಮಂಜು ಪಾವಗಡ ಎದುರಿಗೆ ನಗು ನಗುತ್ತಾ ಮಾತನಾಡುವ ಅವರು, ಪ್ರಶಾಂತ್​ ಸಂಬರಗಿ ಎದುರು ಹೋಗಿ ಮಂಜು ವಿರುದ್ಧವೇ ಮಾತನಾಡುತ್ತಾರೆ. ಮಂಜು ಜತೆಗಿನ ಫ್ರೆಂಡ್​ಶಿಪ್​ ಜಾಸ್ತಿ ಆಗಿರುವುದರಿಂದ ನಾನು ವೀಕ್​ ಅನಿಸೋ ತರ ಫೀಲ್​ ಆಯ್ತು ಎಂದು ಹೇಳಿದ್ದರು. ಇದೆಲ್ಲವೂ ಗುಟ್ಟಾಗಿಯೇ ನಡೆಯುತ್ತಾ ಇತ್ತು. ಆದರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಇದೇ ಮೊದಲ ಬಾರಿಗೆ ದಿವ್ಯಾ ಸುರೇಶ್​ ನೇರವಾಗಿ ಮಂಜು ವಿರುದ್ಧ ತಿರುಗಿ ಬಿದ್ದಿದ್ದಾರೆ. ಗುಟ್ಟಾಗಿ ನಡೆಯುತ್ತಿದ್ದಿದ್ದು ಈಗ ಬಯಲಾದಂತಾಗಿದೆ. ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ತಮ್ಮ ನಿಜವಾದ ಆಟ ಶುರು ಮಾಡಿದ್ದಾರೆ. ಮಂಜು ವಿರುದ್ಧ ಎಲ್ಲರನ್ನೂ ಎತ್ತಿಕಟ್ಟುತ್ತಿದ್ದಾರೆ. ಮಂಜು ಆಪ್ತೆ ಎನಿಸಿಕೊಂಡ ದಿವ್ಯಾ ಸುರೇಶ್​ ಬಳಿಯೂ ಚಾಡಿ ಹೇಳುವ ಕೆಲಸ ಮಾಡಿದ್ದರು. ಎಲ್ಲರೂ ಒಂದೊಂದು ಐಡೆಂಟಿಟಿ ಹೊಂದಿದ್ದಾರೆ. ಶುಭಾಗೆ ಅವರದ್ದೇ ಆದ ಚಾರ್ಮ್​ ಇದೆ. ಮಹಿಳೆಯರಲ್ಲಿ ನೀನೇ ಸ್ಟ್ರಾಂಗ್​. ಆದರೆ, ನೀನು ಮಂಜುನ ಬಾಲ ಆಗ್ತಾ ಇದೀಯಾ. ನೆರಳಲ್ಲಿ ಬದುಕುಬೇಡ. ನೀನು ಒಬ್ಬರ ಪ್ರಾಪರ್ಟಿ ಆಗಬಾರದು ಎಂದು ಬುದ್ಧಿ ಹೇಳಿದ್ದರು. ಇದಾದ ಬೆನ್ನಲ್ಲೇ ದಿವ್ಯಾ ಇದೇ ಮೊದಲ ಬಾರಿಗೆ ಮಂಜು ಅವರ ವಿರುದ್ಧವಾಗಿ ಮಾತನಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಮಂಜುಗೆ ಕಿಚನ್​ ಡಿಪಾರ್ಟ್​ಮೆಂಡ್ ನೀಡಲಾಗಿದೆ. ಹೀಗಾಗಿ, ಪಾತ್ರೆ ತೊಳೆಯಬೇಕಿತ್ತು. ಆದರೆ, ಮಂಜು ಅಡುಗೆ ಮನೆಗೆ ಹೋಗದೆ ಹೊರ ಭಾಗದಲ್ಲಿ ಕುಳಿತು ಸುದ್ದಿ ಹೇಳುತ್ತಾರೆ ನಿಂತಿದ್ದರು. ಅಷ್ಟೇ ಅಲ್ಲ, ನಾನು ವಾಕಿಂಗ್​ ಮುಗಿಸಿ ಬಂದು ತೊಳೆಯುತ್ತೇನೆ ಕಾಯಿರಿ ಎಂದಿದ್ದರು.

ಆದರೆ, ದಿವ್ಯಾ ಕಾದಿಲ್ಲ. ಬದಲಿಗೆ ಅವರು ಪಾತ್ರೆ ತೊಳೆಯುವ ಕೆಲಸ ಮಾಡಿದ್ದಾರೆ. ಹೀಗಾಗಿ ನಾನು ಕಿಚನ್​ ಹೋಗಲ್ಲ ಎಂದಿದ್ದಾರೆ ಮಂಜು. ಈ ವಿಚಾರ ದಿವ್ಯಾ ಅವರ ಸಿಟ್ಟಿಗೆ ಕಾರಣವಾಗಿದೆ. ಇಬ್ಬರ ನಡುವೆಯೂ ಈ ವಿಚಾರಕ್ಕೆ ವಾಗ್ವಾದ ಕೂಡ ಏರ್ಪಟ್ಟಿದೆ. ದಿವ್ಯಾ ಸುರೇಶ್​ ನಗೋಕೆ ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ.

ಇದನ್ನೂ ಓದಿ: Divya Uruduga: ಬಿಗ್​ ಬಾಸ್​ ಮನೆಯಲ್ಲಿರುವ ದಿವ್ಯಾ ಉರುಡುಗಗೆ ಪ್ರಾಣ ಬೆದರಿಕೆ!

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್