AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಟ್ಟಾಗಿ ನಡೆಯುತ್ತಿದ್ದದ್ದು ಬಯಲಾಯ್ತು; ಮೊದಲ ಬಾರಿಗೆ ಮಂಜು ವಿರುದ್ಧ ತಿರುಗಿ ಬಿದ್ರು ದಿವ್ಯಾ ಸುರೇಶ್​

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ತಮ್ಮ ನಿಜವಾದ ಆಟ ಶುರು ಮಾಡಿದ್ದಾರೆ. ಮಂಜು ವಿರುದ್ಧ ಎಲ್ಲರನ್ನೂ ಎತ್ತಿಕಟ್ಟುತ್ತಿದ್ದಾರೆ.

ಗುಟ್ಟಾಗಿ ನಡೆಯುತ್ತಿದ್ದದ್ದು ಬಯಲಾಯ್ತು; ಮೊದಲ ಬಾರಿಗೆ ಮಂಜು ವಿರುದ್ಧ ತಿರುಗಿ ಬಿದ್ರು ದಿವ್ಯಾ ಸುರೇಶ್​
ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 27, 2021 | 7:00 AM

Share

ಬಿಗ್​ ಬಾಸ್ ಮನೆಯಲ್ಲಿ ದಿವ್ಯಾ ಸುರೇಶ್​ ಡಬಲ್​ ಗೇಮ್​ ಆಡುತ್ತಿದ್ದಾರೆ. ಮಂಜು ಪಾವಗಡ ಎದುರಿಗೆ ನಗು ನಗುತ್ತಾ ಮಾತನಾಡುವ ಅವರು, ಪ್ರಶಾಂತ್​ ಸಂಬರಗಿ ಎದುರು ಹೋಗಿ ಮಂಜು ವಿರುದ್ಧವೇ ಮಾತನಾಡುತ್ತಾರೆ. ಮಂಜು ಜತೆಗಿನ ಫ್ರೆಂಡ್​ಶಿಪ್​ ಜಾಸ್ತಿ ಆಗಿರುವುದರಿಂದ ನಾನು ವೀಕ್​ ಅನಿಸೋ ತರ ಫೀಲ್​ ಆಯ್ತು ಎಂದು ಹೇಳಿದ್ದರು. ಇದೆಲ್ಲವೂ ಗುಟ್ಟಾಗಿಯೇ ನಡೆಯುತ್ತಾ ಇತ್ತು. ಆದರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಇದೇ ಮೊದಲ ಬಾರಿಗೆ ದಿವ್ಯಾ ಸುರೇಶ್​ ನೇರವಾಗಿ ಮಂಜು ವಿರುದ್ಧ ತಿರುಗಿ ಬಿದ್ದಿದ್ದಾರೆ. ಗುಟ್ಟಾಗಿ ನಡೆಯುತ್ತಿದ್ದಿದ್ದು ಈಗ ಬಯಲಾದಂತಾಗಿದೆ. ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ತಮ್ಮ ನಿಜವಾದ ಆಟ ಶುರು ಮಾಡಿದ್ದಾರೆ. ಮಂಜು ವಿರುದ್ಧ ಎಲ್ಲರನ್ನೂ ಎತ್ತಿಕಟ್ಟುತ್ತಿದ್ದಾರೆ. ಮಂಜು ಆಪ್ತೆ ಎನಿಸಿಕೊಂಡ ದಿವ್ಯಾ ಸುರೇಶ್​ ಬಳಿಯೂ ಚಾಡಿ ಹೇಳುವ ಕೆಲಸ ಮಾಡಿದ್ದರು. ಎಲ್ಲರೂ ಒಂದೊಂದು ಐಡೆಂಟಿಟಿ ಹೊಂದಿದ್ದಾರೆ. ಶುಭಾಗೆ ಅವರದ್ದೇ ಆದ ಚಾರ್ಮ್​ ಇದೆ. ಮಹಿಳೆಯರಲ್ಲಿ ನೀನೇ ಸ್ಟ್ರಾಂಗ್​. ಆದರೆ, ನೀನು ಮಂಜುನ ಬಾಲ ಆಗ್ತಾ ಇದೀಯಾ. ನೆರಳಲ್ಲಿ ಬದುಕುಬೇಡ. ನೀನು ಒಬ್ಬರ ಪ್ರಾಪರ್ಟಿ ಆಗಬಾರದು ಎಂದು ಬುದ್ಧಿ ಹೇಳಿದ್ದರು. ಇದಾದ ಬೆನ್ನಲ್ಲೇ ದಿವ್ಯಾ ಇದೇ ಮೊದಲ ಬಾರಿಗೆ ಮಂಜು ಅವರ ವಿರುದ್ಧವಾಗಿ ಮಾತನಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಮಂಜುಗೆ ಕಿಚನ್​ ಡಿಪಾರ್ಟ್​ಮೆಂಡ್ ನೀಡಲಾಗಿದೆ. ಹೀಗಾಗಿ, ಪಾತ್ರೆ ತೊಳೆಯಬೇಕಿತ್ತು. ಆದರೆ, ಮಂಜು ಅಡುಗೆ ಮನೆಗೆ ಹೋಗದೆ ಹೊರ ಭಾಗದಲ್ಲಿ ಕುಳಿತು ಸುದ್ದಿ ಹೇಳುತ್ತಾರೆ ನಿಂತಿದ್ದರು. ಅಷ್ಟೇ ಅಲ್ಲ, ನಾನು ವಾಕಿಂಗ್​ ಮುಗಿಸಿ ಬಂದು ತೊಳೆಯುತ್ತೇನೆ ಕಾಯಿರಿ ಎಂದಿದ್ದರು.

ಆದರೆ, ದಿವ್ಯಾ ಕಾದಿಲ್ಲ. ಬದಲಿಗೆ ಅವರು ಪಾತ್ರೆ ತೊಳೆಯುವ ಕೆಲಸ ಮಾಡಿದ್ದಾರೆ. ಹೀಗಾಗಿ ನಾನು ಕಿಚನ್​ ಹೋಗಲ್ಲ ಎಂದಿದ್ದಾರೆ ಮಂಜು. ಈ ವಿಚಾರ ದಿವ್ಯಾ ಅವರ ಸಿಟ್ಟಿಗೆ ಕಾರಣವಾಗಿದೆ. ಇಬ್ಬರ ನಡುವೆಯೂ ಈ ವಿಚಾರಕ್ಕೆ ವಾಗ್ವಾದ ಕೂಡ ಏರ್ಪಟ್ಟಿದೆ. ದಿವ್ಯಾ ಸುರೇಶ್​ ನಗೋಕೆ ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ.

ಇದನ್ನೂ ಓದಿ: Divya Uruduga: ಬಿಗ್​ ಬಾಸ್​ ಮನೆಯಲ್ಲಿರುವ ದಿವ್ಯಾ ಉರುಡುಗಗೆ ಪ್ರಾಣ ಬೆದರಿಕೆ!

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ