AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಮಾಡಿದ ತಪ್ಪಿಗೆ ಮಂಜುಗೆ ಶಿಕ್ಷೆ; ಗಳಗಳನೆ ಅತ್ತ ಗೆಳತಿ

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ ನಡೆಯುತ್ತಿದೆ. ಮನೆಯ ಎಲ್ಲಾ ಸದಸ್ಯರು ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ಟಾಸ್ಕ್​ ಒಂದರಲ್ಲಿ ಬಿಸ್ಕತ್​ ತಿನ್ನುವ ಚಟುವಟಿಕೆ​ ನೀಡಲಾಗಿತ್ತು.

ದಿವ್ಯಾ ಮಾಡಿದ ತಪ್ಪಿಗೆ ಮಂಜುಗೆ ಶಿಕ್ಷೆ; ಗಳಗಳನೆ ಅತ್ತ ಗೆಳತಿ
ಮಂಜು ಪಾವಗಡ - ದಿವ್ಯಾ ಸುರೇಶ್​
ರಾಜೇಶ್ ದುಗ್ಗುಮನೆ
|

Updated on: May 05, 2021 | 5:58 PM

Share

ಬಿಗ್​ ಬಾಸ್​ ಮನೆಯಲ್ಲಿ ತಪ್ಪು ಮಾಡಿದರೆ ಶಿಕ್ಷೆ ಖಚಿತ. ಈ ಮೊದಲು ಮನೆಯ ಟೀ ಕಪ್​ ಹಾಗೂ ಗ್ಲಾಸ್​ಗಳನ್ನು ಒಡೆದು ಹಾಕಿದ ಮಂಜು ಪಾವಗಡ, ನಿಧಿ ಸುಬ್ಬಯ್ಯ ಹಾಗೂ ವೈಷ್ಣವಿ ಗೌಡ ಅವರಿಗೆ ಬಿಗ್​ ಬಾಸ್​ ಫನ್ನಿ ಶಿಕ್ಷೆ ನೀಡಿದ್ದರು. ಆದರೆ, ಈ ಬಾರಿ ದಿವ್ಯಾ ಸುರೇಶ್​ ಹಾಗೂ ನಿಧಿ ಸುಬ್ಬಯ್ಯ ಮಾಡಿದ ತಪ್ಪಿಗೆ ಮಂಜು ಸೇರಿದಂತೆ ಮನೆಯ ಇತರೆ ಸದಸ್ಯರಿಗೆ ಶಿಕ್ಷೆ ಸಿಕ್ಕಿದೆ. ಇದಕ್ಕೆ ದಿವ್ಯಾ ಸುರೇಶ್​ ಗಳಗಳನೆ ಅತ್ತಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ ನಡೆಯುತ್ತಿದೆ. ಮನೆಯ ಎಲ್ಲಾ ಸದಸ್ಯರು ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ಟಾಸ್ಕ್​ ಒಂದರಲ್ಲಿ ಬಿಸ್ಕತ್​ ತಿನ್ನುವ ಚಟುವಟಿಕೆ​ ನೀಡಲಾಗಿತ್ತು. ಹಣೆಯ ಮೇಲೆ ಬಿಸ್ಕತ್​ ಇಟ್ಟುಕೊಳ್ಳಬೇಕು. ಅದನ್ನು ಉರುಳಿಸುತ್ತಾ ಬಾಯಿಗೆ ತರಬೇಕು. ನೀಡಿದ ಸಮಯಾವಕಾಶದಲ್ಲಿ ಹೆಚ್ಚು ಬಿಸ್ಕತ್​ ತಿಂದವರು ಗೆದ್ದಂತೆ. ಈ ಟಾಸ್ಕ್​ನಲ್ಲಿ ರಘು ಗೌಡ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಭಾಗಿಯಾಗಿದ್ದರು. ಟಾಸ್ಕ್​ನ ಉಸ್ತುವಾರಿ ಮಂಜು ಹಾಗೂ ಶಮಂತ್​ ಬ್ರೋ ಗೌಡಗೆ ನೀಡಲಾಗಿತ್ತು.

ಟಾಸ್ಕ್​ ಪೂರ್ಣಗೊಂಡ ನಂತರದಲ್ಲಿ ಬಿಸ್ಕತ್​ ಬಳಿ ಬಂದ ದಿವ್ಯಾ ಹಾಗೂ ನಿಧಿ ಅದನ್ನು ತಿನ್ನೋಕೆ ನೋಡಿದರು. ಆಗ ಶಮಂತ್​ ಹಾಗೂ ಮಂಜು ಇದನ್ನು ತಿನ್ನಬಾರದು ಎನ್ನುವ ಆದೇಶ ಇದೆ ಎಂದು ತಿಳಿಸಿದರು. ಆದರೂ ಇದನ್ನು ಕೇಳದ ದಿವ್ಯಾ ಹಾಗೂ ನಿಧಿ ಬಿಸ್ಕತ್​ ತುಂಡನ್ನು ಬಾಯಲ್ಲಿ ಹಾಕಿಕೊಂಡು ಚಪ್ಪರಿಸಿದರು.

ಇದಾದ ಸ್ವಲ್ಪ ಸಮಯದ ನಂತರದಲ್ಲಿ ಬಿಗ್​ ಬಾಸ್​ನಿಂದ ಧ್ವನಿ ಬಂದಿತ್ತು. ಅಷ್ಟೇ ಅಲ್ಲ, ಆಟ ಮುಗಿದ ಮೇಲೆ ಮನೆಯ ಪ್ರಾಪರ್ಟಿ ಮುಟ್ಟಿದ್ದಕ್ಕೆ ನಿಧಿ ಹಾಗೂ ದಿವ್ಯಾ ಬಳಿ ಇದ್ದ 100 ಪಾಯಿಂಟ್​ ಹಿಂಪಡೆಯಲಾಯಿತು. ಈ ಆಟದ ಉಸ್ತುವಾರಿ ವಹಿಸಿಕೊಂಡಿದ್ದ ಶಮಂತ್​ ಹಾಗೂ ಮಂಜುಗೂ ಇದೇ ಶಿಕ್ಷೆ ನೀಡಲಾಯಿತು. ಕ್ಯಾಪ್ಟನ್ ಆಗಿದ್ದ ಚಕ್ರವರ್ತಿ ಚಂದ್ರಚೂಡ್ ಕೂಡ ಪಾಯಿಂಟ್​ ಕಳೆದುಕೊಂಡರು.

ಈ ವಿಚಾರದಲ್ಲಿ ದಿವ್ಯಾ ಸುರೇಶ್​ಗೆ ತುಂಬಾನೇ ಬೇಸರವಾಯಿತು. ಅಲ್ಲದೇ ಅವರು ಕಣ್ಣೀರು ಹಾಕಿದರು. ಈ ವೇಳೆ ಮಾತನಾಡಿದ ದಿವ್ಯಾ, ಬಿಗ್​ ಬಾಸ್​ ನಾವು ಮಾಡಿದ ತಪ್ಪಿಗೆ ಇವರಿಗೇಕೆ ಶಿಕ್ಷೆ ನೀಡಿದಿರಿ? ದಯವಿಟ್ಟು ನಮಗೆ ಶಿಕ್ಷೆ ನೀಡಿ ಎಂದು ಕೇಳಿಕೊಂಡರು.

ಇದನ್ನೂ ಓದಿ: Prashanth Sambargi: ಸುದೀಪ್​ ಮಾತಿಗೆ ಬೆಲೆಕೊಟ್ಟು ದೊಡ್ಡ ನಿರ್ಧಾರ ತೆಗೆದುಕೊಂಡ ಪ್ರಶಾಂತ್​ ಸಂಬರಗಿ; ಮನೆಯವರಿಗೆ ಶಾಕ್

Shubha Poonja: ನನ್ನ ಹುಡುಗನಿಗೆ ಪ್ರಪೋಸ್​​ ಮಾಡಿದ್ದು ನಾನಲ್ಲ, ನನ್ನ ಅಮ್ಮ; ಶುಭಾ ಪೂಂಜಾ ಪ್ರೇಮಕಥೆ ಕೇಳಿ ಬಿಗ್​ ಬಾಸ್​ ಮಂದಿ ಶಾಕ್

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ