AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಜತೆ ಕುಳಿತುಕೊಳ್ಳೋಕೆ ಯೋಚನೆ ಮಾಡುತ್ತಿದ್ದೇನೆ; ಕಣ್ಣೀರು ಹಾಕಿದ ದಿವ್ಯಾ ಸುರೇಶ್​

ಬಿಗ್​ ಬಾಸ್​ ಮನೆಯಲ್ಲಿ ಬೇರೆ ಬೇರೆ ಟಾಸ್ಕ್​ ನೀಡಲಾಗುತ್ತಿದೆ. ಪ್ರತಿ ಟಾಸ್ಕ್​ ಬರುವುದಕ್ಕೂ ಮೊದಲು ಹಾಡೊಂದು ಬರುತ್ತದೆ. ಈ ಹಾಡು ಬಂದಾಗ ಕ್ಯಾಪ್ಟನ್​ಗಳು ಕನ್​ಫೆಷನ್​ ರೂಮ್​ಗೆ ಹೋಗಬೇಕು.

ಮಂಜು ಜತೆ ಕುಳಿತುಕೊಳ್ಳೋಕೆ ಯೋಚನೆ ಮಾಡುತ್ತಿದ್ದೇನೆ; ಕಣ್ಣೀರು ಹಾಕಿದ ದಿವ್ಯಾ ಸುರೇಶ್​
ದಿವ್ಯಾ ಸುರೇಶ್​
TV9 Web
| Edited By: |

Updated on: Jul 15, 2021 | 8:42 AM

Share

‘ಕನ್ನಡ ಬಿಗ್​ ಬಾಸ್​ ಸೀಸನ್ 8’ ಎರಡನೇ ಇನ್ನಿಂಗ್ಸ್​ನಲ್ಲಿ ದಿವ್ಯಾ ಸುರೇಶ್​ ಹಾಗೂ ಮಂಜು ಪಾವಗಡ ಮೊದಲಿನಂತಿಲ್ಲ. ಇಬ್ಬರೂ ಎಷ್ಟಕ್ಕೆಬೇಕೋ ಅಷ್ಟಕ್ಕೆ ಮಾತ್ರ ಮಾತನಾಡಿಕೊಳ್ಳುತ್ತಿದ್ದಾರೆ. ಶುಭಾ ಪೂಂಜಾಗೆ ಮಂಜು ಪಾವಗಡ ಕ್ಲೋಸ್​ ಆಗಿದ್ದಾರೆ. ಈ ಕಾರಣಕ್ಕೆ ಶಮಂತ್​ ಬ್ರೋ ಗೌಡ ಜತೆ ದಿವ್ಯಾ ಫ್ರೆಂಡ್​ಶಿಪ್​ ಬೆಳೆಸಿಕೊಂಡಿದ್ದಾರೆ. ಈ ವಿಚಾರ ಮಂಜುಗೆ ಹೊಟ್ಟೆ ಉರಿ ತರಿಸುತ್ತಿದೆ. ಇದನ್ನು ಅವರು ಒಪನ್​ ಆಗಿ ತೋರಿಸುತ್ತಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಬೇರೆಬೇರೆ ಟಾಸ್ಕ್​ ನೀಡಲಾಗುತ್ತಿದೆ. ಪ್ರತಿ ಟಾಸ್ಕ್​ ಬರುವುದಕ್ಕೂ ಮೊದಲು ಮ್ಯೂಸಿಕ್​ ಒಂದು ಬರುತ್ತದೆ. ಈ ಹಾಡು ಬಂದಾಗ ಎರಡು ತಂಡದ ಕ್ಯಾಪ್ಟನ್​ಗಳು ಕನ್​ಫೆಷನ್​ ರೂಮ್​ಗೆ ಹೋಗಬೇಕು. ಬಿಗ್​ ಬಾಸ್​ ಮ್ಯೂಸಿಕ್​ ಹಾಕಿದರು. ದಿವ್ಯಾ ಇದಕ್ಕೆ ಡಾನ್ಸ್​ ಮಾಡುತ್ತಾ ಬಂದರು. ಆಗ ದಿವ್ಯಾಗೆ ಮಂಜು ಬೈದರು.

ಇದಕ್ಕೆ ದಿವ್ಯಾ ಬೇಸರ ಮಾಡಿಕೊಂಡರು. ಪ್ರಿಯಾಂಕಾ ತಿಮ್ಮೇಶ್​ ಬಳಿ ತೆರಳಿದ ದಿವ್ಯಾ ಈ ಬಗ್ಗೆ ಅಳಲು ತೋಡಿಕೊಂಡರು. ‘ಮಂಜು ಅಷ್ಟು ಸಣ್ಣ ವಿಚಾರಕ್ಕೆ ಯಾಕೆ ಕೂಗಾಡಬೇಕಿತ್ತು? ಅವನಿಗೆ ಮೊದಲಿನ ರೀತಿ ಇರಕಾಗಲ್ಲ ಅಂದ್ರೆ ನಂಗು ಇರಕಾಗಲ್ಲ. ಸುದೀಪ್​ ಅವರು ಚೆನ್ನಾಗಿ ಆಡ್ತಿದೀಯಾ ಅಂತ ನಂಗೆ ಹೇಳಿದ್ರು. ಅದನ್ನು ಕಾಪಾಡಿಕೊಳ್ಳಬೇಕು. ನನ್ನ ಮೇಲೆ ರೇಗಾಡುವ ಅವಶ್ಯಕತೆ ಇದೆಯಾ? ಶುಭಾ ಜತೆ ಮಂಜು ಕ್ಲೋಸ್​ ಆಗಿದಾನೆ. ಮಂಜು ಬೀನ್​ ಬ್ಯಾಗ್​ ಮೇಲೆ ಕೂತಾಗ ಅವನ ಜತೆ ಕೂರೋಕು ಯೋಚನೆ ಮಾಡ್ತೀನಿ’ ಎಂದು ದಿವ್ಯಾ ಬೇಸರ ಹೊರ ಹಾಕಿದರು.

ಟಾಸ್ಕ್​ ಪೂರ್ಣಗೊಂಡ ನಂತರದಲ್ಲಿ ಮಂಜು ಈ ಬಗ್ಗೆ ಪ್ರಶ್ನೆ ಮಾಡಿದರು. ನನ್ನಿಂದ ಏನಾದರೂ ಬೇಸರವಾಗಿದೆಯೇ ಎಂದು ಕೇಳಿದರು. ‘ಎಲ್ಲರ ಎದುರು ಆ ರೀತಿ ಕೂಗಾಡಬೇಡ, ಬಯ್ಯಬೇಡ’ ಎಂದು ಕೋರಿಕೊಂಡರು.

ಆರಂಭದಲ್ಲಿ ಶಮಂತ್ ಅವರನ್ನು ಕಂಡರೆ ದಿವ್ಯಾ ಸುರೇಶ್ ಮಾರು ದೂರ ಹೋಗಿ ನಿಲ್ಲುತ್ತಿದ್ದರು. ಈಗ ಬಿಗ್ ಬಾಸ್ ಸೆಕೆಂಡ್ ಇನ್ನಿಂಗ್ಸ್ನಲ್ಲಿ ಶಮಂತ್ ಜತೆ ಒಳ್ಳೆಯ ಗೆಳೆತನ ಹೊಂದಿದ್ದಾರೆ ದಿವ್ಯಾ. ಈ ವಾರ ‘ನಿಂಗ್ ಐತೆ’ ತಂಡದಲ್ಲಿ ಶಮಂತ್ ಹಾಗೂ ದಿವ್ಯಾ ಸುರೇಶ್ ಇಬ್ಬರೂ ಇದ್ದಾರೆ. ಈ ತಂಡಕ್ಕೆ ಬಿಗ್ ಬಾಸ್ ಚಾಲೆಂಜ್ ಒಂದನ್ನು ನೀಡಿದ್ದರು. ಈ ಟಾಸ್ಕ್​ನ ಅನುಸಾರ ನಿಂಗ್ ಐತೆ ತಂಡದ ಇಬ್ಬರು 10 ಜತೆ ಬಟ್ಟೆಯಲ್ಲಿ ಮಿಂಚಬೇಕು. ಈ ಟಾಸ್ಕ್​ಗೆ ದಿವ್ಯಾ ಹಾಗೂ ಶಮಂತ್ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಮ್ಯಾಚಿಂಗ್ ಡ್ರೆಸ್, ಸಮ್ಮರ್ ಕಪಲ್ ಲುಕ್ ಸೇರಿ ನಾನಾ ವಿಧವಾದ ಲುಕ್​​ನಲ್ಲಿ ಇವರು ಮಿಂಚಿದ್ದಾರೆ. ಮಂಜು ಉರಿದಕೊಳ್ಳೋಕೆ ಇದು ಕಾರಣ.

ಇದನ್ನೂ ಓದಿ: ದಿವ್ಯಾ ಉರುಡುಗ ಮಾಡಿದ ತಪ್ಪಿಗೆ ಮನೆ ಮಂದಿಗೆ ಶಿಕ್ಷೆ ನೀಡಿದ ಬಿಗ್​ ಬಾಸ್​

ಬಿಗ್ ಬಾಸ್ ಮನೆಯಲ್ಲಿ ಅವಘಡ; ದಿವ್ಯಾ ಉರುಡುಗ ಹೊಡೆದ ಫೋರ್ಸ್​ಗೆ ಗಾಜು ನುಚ್ಚುನೂರು, ಕೈಯಲ್ಲಿ ರಕ್ತ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ