AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಮದುವೆ ಆಗಲ್ವ?; ಮಂಜುಗೆ ಕಣ್ಣಲ್ಲಿ ಕಣ್ಣಿಟ್ಟು ಕೇಳಿದ ದಿವ್ಯಾ

ಮಂಜು-ದಿವ್ಯಾ ನಡುವೆ ಇರೋದು ನಿಜವಾದ ಪ್ರೀತಿಯಾ ಅಥವಾ ಗೆಳೆತನವೋ ಎನ್ನುವ ವಿಚಾರ ಅವರಿಗೇ ಗೊತ್ತಾಗಿಲ್ಲ. ಇದು ಪ್ರೇಕ್ಷಕರಿಗೆ ಒಂದಷ್ಟು ಮನರಂಜನೆ ಕೊಡುತ್ತಿರುವುದಂತೂ ಸುಳ್ಳಲ್ಲ.

ನನ್ನನ್ನು ಮದುವೆ ಆಗಲ್ವ?; ಮಂಜುಗೆ ಕಣ್ಣಲ್ಲಿ ಕಣ್ಣಿಟ್ಟು ಕೇಳಿದ ದಿವ್ಯಾ
ದಿವ್ಯಾ ಸುರೇಶ್ ಹಾಗೂ ಮಂಜು ಪಾವಗಡ ಬಿಗ್ ಬಾಸ್ ಮನೆಯಲ್ಲಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 09, 2021 | 7:03 AM

Share

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ನಡುವಣ ಪ್ರೀತಿ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಇವರಿಬ್ಬರ ನಡುವೆ ಇರೋದು ನಿಜವಾದ ಪ್ರೀತಿಯಾ ಅಥವಾ ಗೆಳೆತನವೋ ಎನ್ನುವ ವಿಚಾರ ಅವರಿಗೇ ಗೊತ್ತಾಗಿಲ್ಲ. ಇದು ಪ್ರೇಕ್ಷಕರಿಗೆ ಒಂದಷ್ಟು ಮನರಂಜನೆ ಕೊಡುತ್ತಿರುವುದಂತೂ ಸುಳ್ಳಲ್ಲ. ಈಗ ದಿವ್ಯಾ ಕೇಳಿರುವ ಪ್ರಶ್ನೆ ಕೇಳಿ ಮಂಜು ಅಚ್ಚರಿಗೆ ಒಳಗಾಗಿದ್ದಾರೆ. ಇತ್ತೀಚೆಗೆ ಶುಭಾ ಜತೆ ಮಾತನಾಡುತ್ತಾ ದಿವ್ಯಾ ಬಗ್ಗೆ ಮಂಜು ಮಾತನಾಡಿದ್ದರು. ದಿವ್ಯಾ ಜೀವನದಲ್ಲಿ ತುಂಬಾ ನೊಂದಿದ್ದಾಳೆ. ಅವರಿಗೆ ನಾನು ಉತ್ತಮ ಗೆಳೆಯ. ಅದನ್ನು ಅವರೂ ಹೇಳಿದ್ದಾರೆ. ಅವರನ್ನು ಮದುವೆ ಆಗೋಕೆ ಸಾಧ್ಯವೋ ಇಲ್ಲವೋ ಅನ್ನೋದನ್ನ ಹೇಳೋಕೆ ಆಗಲ್ಲ ಅರ್ಥದಲ್ಲಿ ಮಂಜು ಹೇಳಿದ್ದರು.

ಏಪ್ರಿಲ್​ 8ರ ಎಪಿಸೋಡ್​ನಲ್ಲೂ ಇದೇ ವಿಚಾರ ಚರ್ಚೆಗೆ ಬಂದಿದೆ. ದಿವ್ಯಾ, ಮಂಜು ಹಾಗೂ ಶುಭಾ ಒಂದೇ ಕಡೆಯಲ್ಲಿ ಕುಳಿತು ಮಾತನಾಡುತ್ತಿದ್ದರು. ಆಗ ಮಾತನಾಡಿದ ದಿವ್ಯಾ, ನನ್ನ ಕೂದಲು ತುಂಬಾನೇ ಉದುರಿ ಹೋಗುತ್ತಿದೆ. ಅದಕ್ಕೆ ಆರೈಕೆ ಸರಿಯಾಗಿ ಆಗುತ್ತಿಲ್ಲ ಎನ್ನುವ ಅಭಿಪ್ರಾಯ ಹೊರ ಹಾಕಿದರು. ಆಗ ಮಾತನಾಡಿದ ಶುಭಾ, ಗಡಸು ನೀರಿಗೆ ಮತ್ತಷ್ಟು ಬೇಗ ಕೂದಲು ಉದುರುತ್ತದೆ ಎಂದರು.

ಆಗ ಮಂಜು ತಮ್ಮ ಕಷ್ಟ ಹೇಳಿಕೊಂಡರು. ನನ್ನ ಕೂದಲು ಬೆಳ್ಳಗೆ ಆಗುತ್ತಿದೆ. ಇಲ್ಲಿಂದ ಹೊರ ಹೋದ ತಕ್ಷಣ ಯಾರನ್ನಾದರೂ ನೋಡಿ ಮದುವೆ ಆಗಿಬಿಡಬೇಕು ಎಂದರು. ಇದನ್ನು ಕೇಳಿದ ದಿವ್ಯಾ ಅವರು ಮಂಜು ಕಣ್ಣನ್ನೇ ದಿಟ್ಟಿಸಿ ನೋಡಿದರು. ಮಂಜು ಮನೆಯಿಂದ ಹೊರ ಹೋದ ತಕ್ಷಣ ನನ್ನನ್ನು ಮದುವೆ ಆಗುವುದಿಲ್ಲವೇ ಎಂದು ಕೇಳಿದರು. ಈ ಮಾತನ್ನು ನಿರೀಕ್ಷಿಸದ ಮಂಜು, ಸ್ವಲ್ಪ ತಡವರಿಸಿದರು.

ದಿವ್ಯಾ ನೀನು ಮದುವೆ ಆಗೋದಕ್ಕೆ ಇನ್ನೂ 3-4 ವರ್ಷ ತಡವಿದೆ ಎಂದು ಹೇಳಿದ್ದೀಯಾ. ನನಗೆ ವಯಸ್ಸಾಯ್ತು. ಮನೆಯಿಂದ ಹೊರ ಹೋದ ತಕ್ಷಣ ಮದುವೆ ಆಗಬೇಕು ಎಂದು ನಕ್ಕರು. ಈ ಮಾತು ಕೇಳಿ ಶುಭಾ ಹಾಗೂ ದಿವ್ಯಾ ಕೂಡ ನಕ್ಕು ಮಾತು ನಿಲ್ಲಿಸಿದರು.

ಮಂಜುನ ಪ್ರೀತಿಸ್ತೀನಿ ಎನ್ನುತ್ತ ಸುದೀಪ್​ ಎದುರಲ್ಲೇ ಟ್ವಿಸ್ಟ್​ ಕೊಟ್ಟ ದಿವ್ಯಾ! ಅಬ್ಬಬ್ಬಾ ಸಖತ್​ ಚಾಲಾಕಿ

ದಿವ್ಯಾ ಉರುಡುಗ-ಅರವಿಂದ್​ ಪ್ರೀತಿಯ ಉತ್ಕಟತೆ ನೋಡಿ ಮನೆಯವರೇ ಕಂಗಾಲು; ಅಂಥದ್ದೇನಾಯ್ತು?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​