AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಕ್ಕೆ ವಿಷ ಹಾಕಿ ತಂದೆಯೇ ನನ್ನನ್ನು ಮುಗಿಸಲು ಹೊರಟಿದ್ದರು; ಬಿಗ್​ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ದಿವ್ಯಾ

ದಿವ್ಯಾ ತಂದೆ ಅನ್ನಕ್ಕೆ ವಿಷ ಹಾಕಿ ಊಟ ಮಾಡಿಸಿದ್ದರಂತೆ. ಕೇವಲ ದಿವ್ಯಾಗೆ ಮಾತ್ರವಲ್ಲ, ಅವರ ಅಣ್ಣನಿಗೂ ಊಟ ತಿನ್ನಿಸಿದ್ದರಂತೆ.

ಅನ್ನಕ್ಕೆ ವಿಷ ಹಾಕಿ ತಂದೆಯೇ ನನ್ನನ್ನು ಮುಗಿಸಲು ಹೊರಟಿದ್ದರು; ಬಿಗ್​ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ದಿವ್ಯಾ
ದಿವ್ಯಾ ಸುರೇಶ್
ರಾಜೇಶ್ ದುಗ್ಗುಮನೆ
|

Updated on: Mar 25, 2021 | 8:03 PM

Share

ಬಿಗ್​ ಬಾಸ್ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳು ನಗುತ್ತಾ ಕಾಲ ಕಳೆಯುತ್ತಿದ್ದಾರೆ. 14 ಸ್ಪರ್ಧಿಗಳ ನಡುವೆ ಉತ್ತಮ ಬಾಂಡಿಂಗ್​ ಬೆಳೆದಿದ್ದು, ಒಂದು ಫ್ಯಾಮಿಲಿಯಂತೆ ಆಗಿದ್ದಾರೆ. ಆದರೆ, ಎಲ್ಲರ ಹಿಂದೆಯೂ ಒಂದು ನೋವಿನ ಕಥೆ ಇದೆ. ಈ ನೋವಿನ ಕಥೆ ಒಂದೊಂದಾಗೇ ಹೊರ ಬರುತ್ತಿದೆ. ಅವರ ಕಣ್ಣೀರ ಕಥೆ ಕೇಳಿದಾಗೆಲ್ಲ, ಎಲ್ಲರೂ ನಗುವಿನ ಮುಖವಾಡ ಧರಿಸಿದ್ದಾರೆಯೇ ಎನ್ನುವ ಅನುಮಾನ ಮೂಡುತ್ತಿರುವುದಂತೂ ಸುಳ್ಳಲ್ಲ. ಬಿಗ್ ಬಾಸ್ ಸೀಸನ್​ 8ರ ಆರಂಭದಲ್ಲಿ ರಘು ಗೌಡ ಅವರು ತಮ್ಮ ಕಣ್ಣೀರ ಕಥೆ ಹೇಳಿಕೊಂಡಿದ್ದರು. ತಂದೆ-ತಾಯಿ ಕಣ್ಣೆದುರೇ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಹೇಳಿಕೊಂಡು ಅತ್ತಿದ್ದರು. ಇದಾದ ನಂತರ ಮಂಜು ಪಾವಗಡ ತಾವು ಅನುಭವಿಸಿದ ಕಷ್ಟದ ದಿನದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಈಗ ದಿವ್ಯಾ ಸುರೇಶ್​ ಅವರ ಸರದಿ. ಅವರು ಹೇಳಿರುವ ಕಹಿ ಘಟನೆ ವೀಕ್ಷಕರ ಕಣ್ಣಲ್ಲಿ ನೀರು ತರಿಸುವುದಂತೂ ಗ್ಯಾರಂಟಿ.

ದಿವ್ಯಾ ತಂದೆ ಅನ್ನಕ್ಕೆ ವಿಷ ಹಾಕಿ ಊಟ ಮಾಡಿಸಿದ್ದರಂತೆ. ಕೇವಲ ದಿವ್ಯಾಗೆ ಮಾತ್ರವಲ್ಲ, ಅವರ ಅಣ್ಣನಿಗೂ ಊಟ ತಿನ್ನಿಸಿದ್ದರಂತೆ. ಈ ಭಯಾನಕ ಘಟನೆ ಬಗ್ಗೆ ಅವರು ಬಿಗ್​ ಬಾಸ್​ ಮನೆಯಲ್ಲಿ ಇಂಚಿಚೂ ವಿವರಿಸಿದ್ದಾರೆ.

ನನ್ನ ತಂದೆ ಯಾವಾಗಲೂ ಊಟ ಕಲಸಿ ಕೊಟ್ಟಿಲ್ಲ. ಆದಿನ ಅವರು ಕುಡಿದುಕೊಂಡು ಬಂದಿದ್ದರು. ಆದಾಗ್ಯೂ ಊಟವನ್ನು ಕಲಸಿಕೊಂಡು ಬಂದ್ರು. ನನಗೆ ಮತ್ತು ನನ್ನ ಅಣ್ಣನಿಗೆ ಅಪ್ಪ ಊಟ ಕೊಟ್ಟರು. ಊಟ ಮಾಡುತ್ತಿದ್ದಂತೆ ಅಪ್ಪ ವಾಂತಿ ಮಾಡಿಕೊಂಡರು. ನಂತರ ನಮ್ಮ ಅಣ್ಣ ವಾಂತಿ ಮಾಡಿಕೊಂಡರು. ನಂತರ ನಾನು. ಮೂರು ಜನನೂ ಬದುಕಿರಬಾರದು ಎಂದು ಅಪ್ಪ ಊಟಕ್ಕೆ ವಿಷ ಬೆರೆಸಿಕೊಟ್ಟಿದ್ದರು. ಅವರು ಕೂಡ ಅದೇ ಊಟ ಮಾಡಿದ್ದರು ಎಂದು ದಿವ್ಯಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಅಂದಹಾಗೆ, ಅವರು ನಂತರ ಹೇಗೆ ಉಳಿದುಕೊಂಡರು, ಮುಂದೇನಾಯ್ತು ಎನ್ನುವ ಬಗ್ಗೆ ಇಂದಿನ (ಮಾರ್ಚ್​ 25) ಸಂಚಿಕೆಯಲ್ಲಿ ಗೊತ್ತಾಗಲಿದೆ.

ಇದನ್ನೂ ಓದಿ: Bigg Boss Kannada: ‘ದಿವ್ಯಾ ಜೊತೆ ಮದುವೆ ಆಗೋಕೆ ನಮ್ಮ ಮನೆಯಲ್ಲಿ ಒಪ್ಪಿಗೆ ಸಿಗತ್ತೆ’; ಎಲ್ಲವನ್ನೂ ಒಪ್ಪಿಕೊಂಡ ಅರವಿಂದ್​!

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು